ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು

ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿಮೀ ಯಾತ್ರೆ ಕೈಗೊಂಡಾಗ ಇದೇ ಬೆತ್ತವನ್ನು ಬಳಸಿದ್ದರು.

Team Udayavani, Aug 15, 2022, 11:57 AM IST

ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು

ಹುಬ್ಬಳ್ಳಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಕೈಗೊಂಡ ದಂಡಿಯಾತ್ರೆ ತನ್ನದೇ ಮಹತ್ವ ಪಡೆದುಕೊಂಡಿದೆ. ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿ.ಮೀ. ಯಾತ್ರೆಯಲ್ಲಿ ಗಾಂಧೀಜಿ ಬಳಸಿದ್ದ ದೊಡ್ಡದಾದ ಬೆತ್ತ ಕನ್ನಡದ ನೆಲದ್ದು. ಅದನ್ನು ನೀಡಿದ್ದು ಕರ್ನಾಟಕದ ಮೊದಲ ರಾಷ್ಟ್ರಕವಿ ಎಂಬ ಖ್ಯಾತಿಯ ಮಂಜೇಶ್ವರ ಗೋವಿಂದ ಪೈಗಳು ಎನ್ನುವುದು ವಿಶೇಷ.

ದಂಡಿಯಾತ್ರೆಯಲ್ಲಿ ದೇಶದ ಸಹಸ್ರಾರು ಜನರು ಗಾಂಧೀಜಿ ಅವರನ್ನು ಹಿಂಬಾಲಿಸಿದ್ದರು. ಉತ್ತರ ಕನ್ನಡ, ಕರಾವಳಿ ಪ್ರದೇಶ ಸೇರಿ ದೇಶದ ವಿವಿಧೆಡೆಗಳಲ್ಲಿ ಉಪ್ಪಿನ ಸತ್ಯಾಗ್ರಹ ಭುಗಿಲೆದ್ದು ಸಂಚಲನ ಮೂಡಿಸಿತ್ತು.

ಕನ್ನಡ ನೆಲದ ಬಡಿಗೆ:
ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಪತ್ರಕರ್ತ ದತ್ತಾತ್ರೇಯ ಬಾಲಕೃಷ್ಣ ಕಾಲೇಲಕರ (ಕಾಕಾ ಕಾಲೇಲಕರ್‌ ಎಂದೇ ಖ್ಯಾತಿ) ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ರಾಷ್ಟ್ರಭಾಷೆ ಕಾರಣದಿಂದ ಇಡೀ ದೇಶಸುತ್ತಿದ್ದರು. ಕಾಲೇಲಕರ ಅವರು ಕನ್ನಡದ ನೆಲ ಮಂಜೇಶ್ವರಕ್ಕೆ ಭೇಟಿ ನೀಡಿದ್ದರು.

ರಾಷ್ಟ್ರಭಾಷೆಗೆ ದೇಶ ಸುತ್ತುವ ಕಾರ್ಯದ ಜತೆಗೆ ಆತ್ಮೀಯ ಸ್ನೇಹಿತ ರಾಷ್ಟ್ರಕವಿ ಗೋವಿಂದ ಪೈ ಅವರನ್ನು ಭೇಟಿಯಾಗಲೆಂದು ಮಂಜೇಶ್ವರಕ್ಕೆ ಬಂದಿದ್ದರು. ಕಾಲೇಲಕರ ಅವರು ಮಂಜೇಶ್ವರದಿಂದ ಹೊರಡುವಾಗ ಗೋವಿಂದ ಪೈ ಅವರು ಸ್ನೇಹಿತನಿಗೆ ತಮ್ಮ ನೆನಪಿಗಾಗಿ ದೊಡ್ಡ ಕೋಲು(ಬೆತ್ತ) ನೀಡಿದ್ದರು. ಗಾಂಧೀಜಿ ದಂಡಿಯಾತ್ರೆ ಕೈಗೊಂಡಾಗ ಕಾಲೇಲಕರ ಅವರು ಮಂಜೇಶ್ವರದಲ್ಲಿ ಗೋವಿಂದ ಪೈ ಅವರು ತಮಗೆ ನೀಡಿದ್ದ ಬಡಿಗೆಯನ್ನೇ ಗಾಂಧೀಜಿಗೆ ನೀಡಿದ್ದರಂತೆ. ಗಾಂಧೀಜಿ 1930ರಲ್ಲಿ ಗುಜರಾತ್‌ನ ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿಮೀ ಯಾತ್ರೆ ಕೈಗೊಂಡಾಗ ಇದೇ ಬೆತ್ತವನ್ನು ಬಳಸಿದ್ದರು.

ಉತ್ತರ ಕರ್ನಾಟಕ ವೇದಿಕೆ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 38ನೇ ಅಧಿವೇಶನ 1923ರಲ್ಲಿ ಕಾಕಿನಾಡದಲ್ಲಿ ಗಾಂಧೀಜಿ ಅನುಪಸ್ಥಿತಿಯಲ್ಲಿಯೇ ನಡೆದಿತ್ತು. ಮುಂದಿನ ಅಧಿವೇಶನ ಎಲ್ಲಿ ಎಂಬ ವಿಚಾರಕ್ಕೆ ಅನೇಕ ಕಡೆಯವರು ಪ್ರಸ್ತಾವನೆ ಮಂಡಿಸಿದ್ದರಾದರೂ, ಕನ್ನಡದವರೇ ಆದ ಅಂದಿನ ರಾಷ್ಟ್ರೀಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಲ್ಲಿ ಒಬ್ಬರಾದ ಗಂಗಾಧರರಾವ್‌ ದೇಶಪಾಂಡೆ ಕರ್ನಾಟಕದಲ್ಲಿ ಅಧಿವೇಶನ ನಡೆಯುವಂತೆ ಸಭೆ ಸಮ್ಮತಿ ಪಡೆಯುವಲ್ಲಿ ಯಶಸ್ವಿ
ಯಾಗಿದ್ದರು. 1924ರ ಡಿಸೆಂಬರ್‌ ಕೊನೆ ವಾರದಲ್ಲಿ ಬೆಳಗಾವಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39ನೇ ಅಧಿವೇಶನ ನಡೆದಿತ್ತು. ಅಧಿವೇಶನ ಸ್ಥಳಕ್ಕೆ ವಿಜಯನಗರ ಎಂದು ಹೆಸರಿಸಲಾಗಿತ್ತು.

ಪ್ರವೇಶ ದ್ವಾರಕ್ಕೆ ಹಂಪಿಯ ವಿರೂಪಾಕ್ಷ ದೇವಸ್ಥಾನದ ಗೋಪುರ ಮಾದರಿಯ ಬೃಹತ್‌ ಕಮಾನು ನಿರ್ಮಿಸಲಾಗಿತ್ತು. ಅಧಿವೇಶನದಲ್ಲಿ ಹುಯಿಲಗೋಳ ನಾರಾಯಣರಾವ್‌ ಅವರ “ಉದಯವಾಗಲಿ ಚೆಲುವ ಕನ್ನಡ ನಾಡು’ ಹಾಡು ಮೊಳಗಿದ್ದು, ಹಿಂದೂಸ್ಥಾನಿ ಗಾಯಕಿ ಡಾ|ಗಂಗೂಬಾಯಿ ಹಾನಗಲ್ಲ ತಮ್ಮ 11ನೇ ವಯಸ್ಸಿನಲ್ಲಿಯೇ ಇದೇ ಅಧಿವೇಶನದಲ್ಲಿ ಪ್ರಾರ್ಥನೆ ಹಾಡು ಹಾಡಿದ್ದು ಉತ್ತರ ಕರ್ನಾಟಕದ ಹೆಮ್ಮೆಯ ಸಂಗತಿಗಳಾಗಿವೆ.

ಸ್ವದೇಶಿ ಕ್ರಾಂತಿಗೆ ಕಿಡಿ ಹೊತ್ತಿಸಿದ್ದ ಅಧಿವೇಶನ
ಬೆಳಗಾವಿಯಲ್ಲಿ 1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದಲ್ಲಿ ಪ್ರಮುಖವಾಗಿ ಹಿಂದೂ-ಮುಸ್ಲಿಂರ ಐಕ್ಯತೆ, ವಿದೇಶಿ ವಸ್ತ್ರ ಬಹಿಷ್ಕಾರ, ಸ್ವದೇಶಿ ಉತ್ಪನ್ನಗಳ ಬಳಕೆಗೆ ಒತ್ತು ನೀಡುವ ಚರ್ಚೆ, ಘೋಷಣೆಗಳು ಮೊಳಗಿದ್ದವು.

ಸ್ವದೇಶಿ ಮಂತ್ರ ಘೋಷಣೆ ಪರಿಣಾಮ ಬೆಂಗಳೂರಿನಲ್ಲಿ ಪೇಪರ್‌ ಸಂಸ್ಕರಣೆ , ಕಡ್ಡಿಪೆಟ್ಟಿಗೆ ತಯಾರಿಕೆ, ಮೇಣ ಮತ್ತು ಅರಗ ತಯಾರಿಕೆ ಉದ್ಯಮ ಆರಂಭವಾದರೆ, ಬೆಳಗಾವಿಯಲ್ಲಿ ಚರ್ಮ ಸಂಸ್ಕರಣೆ, ಮೈಸೂರಿನಲ್ಲಿ ಅಗರಬತ್ತಿಗಳ ತಯಾರಿಕೆ, ಬಳ್ಳಾರಿಯಲ್ಲಿ ಇಟ್ಟಿಗೆ ತಯಾರಿಕೆ, ಹುಬ್ಬಳ್ಳಿಯಲ್ಲಿ ಆಹಾರ ಸಂಸ್ಕರಣೆ, ಮಂಗಳೂರಿನಲ್ಲಿ ತೈಲ ಉದ್ಯಮ, ಧಾರವಾಡದಲ್ಲಿ ಬಟ್ಟೆ ಉತ್ಪಾದನೆ ಉದ್ಯಮಗಳು ಆರಂಭಗೊಂಡಿದ್ದವು.

● ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.