ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ


Team Udayavani, Aug 15, 2022, 11:14 PM IST

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಜನತೆ ಸಂಭ್ರಮದಿಂದ ಪಾಲ್ಗೊಂಡರು. “ಹರ್‌ ಘರ್‌ ತಿರಂಗಾ’ ಅಭಿಯಾನದ ಹಿನ್ನೆಲೆಯಲ್ಲಿ ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿ ಮೆರೆದರು. ವಿವಿಧ ಪೊಲೀಸ್‌ ತುಕಡಿಗಳು ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿಜಯನಗರದಲ್ಲಿ ಜಗತ್ತಿನ 9ನೇ ಹಾಗೂ ದೇಶದಲ್ಲೇ ಅತಿ ಎತ್ತರದ ಧ್ವಜಸ್ತಂಭದಲ್ಲಿ 120/80 ಅಳತೆಯ ರಾಷ್ಟ್ರಧ್ವಜ ಹಾರಿಸಲಾಯಿತು.

ದೇಶದ ಅತೀ ಎತ್ತರದ ಧ್ವಜಸ್ತಂಭ
ಹೊಸಪೇಟೆ: ಜಗತ್ತಿನ 9ನೇ ಹಾಗೂ ದೇಶದಲ್ಲೇ ಅತಿ ಎತ್ತರದ ಧ್ವಜಸ್ತಂಭ ನಿರ್ಮಿಸುವುದು ಮಾತ್ರವಲ್ಲದೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದರಲ್ಲಿ ಧ್ವಜಾರೋಹಣ ಮಾಡಿ ವಿಜಯನಗರ ಜಿಲ್ಲೆ ಸೋಮವಾರ ಹೊಸ ದಾಖಲೆ ಬರೆಯಿತು.

ಪ್ರವಾಸೋದ್ಯಮ ಇಲಾಖೆಯ 6 ಕೋಟಿ ರೂ. ಅನುದಾನದಲ್ಲಿ ನಗರದ ಡಾ| ಪುನೀತ್‌ ರಾಜ್‌ಕುಮಾರ್‌ ಜಿಲ್ಲಾ ಕ್ರೀಡಾಂಗಣ(ಮುನ್ಸಿಪಲ್‌ ಮೈದಾನ)ದಲ್ಲಿ ನಿರ್ಮಿಸಿದ 405 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಸೋಮವಾರ 120/80 ಅಳತೆಯ ರಾಷ್ಟ್ರಧ್ವಜ ಹಾರಿಸಲಾಯಿತು.

ತಾಂತ್ರಿಕ ದೋಷ ಕಾಣಿಸಿಕೊಂಡಿ ದ್ದರಿಂದ ಧ್ವಜ ಪೂರ್ಣ ಮೇಲೇರ ಲಿಲ್ಲ. ಬಜಾಜ್‌ ಕಂಪೆನಿಯ ತಂತ್ರಜ್ಞರು ಹಾಗೂ ಚಿತ್ರದುರ್ಗದ ಜ್ಯೋತಿರಾಜ್‌ (ಕೋತಿರಾಜ್‌) ಅವರ ಸಹಾಯದೊಂದಿಗೆ ಧ್ವಜಸ್ತಂಭದ ಒಳಗೆ ಗಂಟಿಕ್ಕಿಕೊಂಡಿದ್ದ ತಂತಿಯನ್ನು ಸರಿಪಡಿಸಿ ಧ್ವಜ ಹಾರಾಡುವಂತೆ ಮಾಡಲಾಯಿತು. ಇಡೀ ಪ್ರಕ್ರಿಯೆ ಮುಗಿಯಲು ಸುಮಾರು 35ರಿಂದ 37 ನಿಮಿಷ ಬೇಕಾಯಿತು. ಬೆಳಗ್ಗೆ 9ಕ್ಕೆ ಜಿಲ್ಲಾಡಳಿತದಿಂದ ಹಮ್ಮಿಕೊಂ ಡಿದ್ದ ಸಮಾರಂಭದಲ್ಲಿ ಪ್ರವಾ ಸೋದ್ಯಮ ಸಚಿವ ಆನಂದ್‌ ಸಿಂಗ್‌ ದೀಪ ಬೆಳಗಿ ಸಾಂಕೇತಿಕ ವಾಗಿ ಉದ್ಘಾಟಿಸಿದರು.

ವಿಜಯನಗರದ ಕೀರ್ತಿ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳಗಾವಿ ಯಲ್ಲಿ 361 ಅಡಿ ಎತ್ತರದ ಧ್ವಜಸ್ತಂಭ ದೇಶದಲ್ಲೇ ಅತಿ ಎತ್ತರದ್ದು ಎಂಬ ಹೆಗ್ಗಳಿಕೆ ಹೊಂದಿತ್ತು. ಈಗ ಆ ಕೀರ್ತಿ ವಿಜಯನಗರದ ಪಾಲಾಗಿದೆ. 405 ಅಡಿ ಎತ್ತರದ ಧ್ವಜಸ್ತಂಭ ಇದುವರೆಗೆ ದೇಶದಲ್ಲಿ ಎಲ್ಲೂ ಅಳವಡಿಸಿಲ್ಲ. ಜಗತ್ತಿ ನಲ್ಲೇ ಅತಿ ಎತ್ತರದ ಧ್ವಜಸ್ತಂಭಗಳಲ್ಲಿ ಇದು 9ನೆಯದು ಎಂದು ವಿವರಿಸಿದರು.

ಪಿತೃ ವಿಯೋಗದ ನಡುವೆಯೂ
ಭಾಗಿಯಾದ ಸಚಿವ ಬೈರತಿ
ದಾವಣಗೆರೆ: ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಅವರು ತಂದೆಯ ನಿಧನದ ನೋವಿನಲ್ಲೂ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ದೇಶಭಕ್ತಿ ಮೆರೆದರು. ಸಚಿವರ ತಂದೆ ರವಿವಾರ ನಿಧನ ಹೊಂದಿದ್ದು, ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುತ್ತಾರೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ರವಿವಾರ ರಾತ್ರಿಯೇ ಬೆಂಗಳೂರಿನಿಂದ ದಾವಣಗೆರೆಗೆ ಆಗಮಿಸಿದ ಸಚಿವರು, ಬೆಳಗ್ಗೆ ಸಾರ್ವಜನಿಕ ಧ್ವಜಾರೋಹಣದಲ್ಲಿ ಭಾಗಿಯಾದರು.

ಚಾಮರಾಜಪೇಟೆ ಮೈದಾನ: ಸ್ವಾತಂತ್ರ್ಯೋತ್ಸವ
ಬೆಂಗಳೂರು: ಮಾಲಕತ್ವ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಆಟದ ಮೈದಾನದಲ್ಲಿ ಸೋಮವಾರ ಖಾಕಿ ಸರ್ಪಗಾವಲಿನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸ ಲಾಯಿತು.
ಎರಡು ಸಮುದಾಯಗಳ ನಡುವಿನ ತಿಕ್ಕಾಟಕ್ಕೆ ಕಾರಣ ವಾಗಿದ್ದ ಈ ಮೈದಾನದಲ್ಲಿ ಕಂದಾಯ ಇಲಾಖೆ ವತಿಯಿಂದ ಸ್ವಾತಂತ್ರ್ಯ ದಿನದ ಕಾರ್ಯಕ್ರಮ ನಡೆಯಿತು.

ಬೆಳಗ್ಗೆ 8 ಗಂಟೆಗೆ ಉಪವಿಭಾಗಾಧಿಕಾರಿ ಶಿವಣ್ಣ ಧ್ವಜಾರೋಹಣ ನೆರವೇರಿಸಿದರು. ಸಂಸದ ಪಿ.ಸಿ.ಮೋಹನ್‌, ಶಾಸಕ ಜಮೀರ್‌ ಅಹಮದ್‌ಖಾನ್‌, ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಉಪಸ್ಥಿತರಿದ್ದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಬಿಗಿ ಬಂದೋಬಸ್ತ್
ಇಲ್ಲಿ ಧ್ವಜಾರೋಹಣ ನೆರವೇರಿಸಲು ಸರಕಾರ ನಿರ್ಧರಿಸಿದ ಬೆನ್ನಿಗೇ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ರವಿವಾರ ಮತ್ತು ಸೋಮವಾರ ಮೈದಾನದ ಬಳಿ ಓಡಾಟ ನಿರ್ಬಂಧಿಸಲಾಗಿತ್ತು. ಮೈದಾನದ ಸುತ್ತ ಬ್ಯಾರಿಕೇಡ್‌ ಅಳವಡಿಸಿ ಮೈದಾನದೊಳಗೆ ಸಾರ್ವಜನಿಕರು ಬರದಂತೆ ಮಾಡಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ, ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿತ್ತು.

ಒಕ್ಕೂಟದ ಸದಸ್ಯರು ಪೊಲೀಸ್‌ ವಶಕ್ಕೆ
ಧ್ವಜಾರೋಹಣ ಸಂದರ್ಭದಲ್ಲಿ ವಿಐಪಿ ದ್ವಾರದಲ್ಲಿ ತಮ್ಮನ್ನು ಬಿಡುವಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಸದಸ್ಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.