ಅಡಚಣೆ ರಹಿತ ವಿದ್ಯುತ್‌ಗಾಗಿ 400 ಕಿ.ವ್ಯಾ. ಉಪಕೇಂದ್ರ : ಸಚಿವ ಸುನಿಲ್‌ ಕುಮಾರ್‌


Team Udayavani, Aug 16, 2022, 9:06 AM IST

ಅಡಚಣೆ ರಹಿತ ವಿದ್ಯುತ್‌ಗಾಗಿ 400 ಕಿ.ವ್ಯಾ. ಉಪಕೇಂದ್ರ : | ಸಚಿವ ಸುನಿಲ್‌ ಕುಮಾರ್‌

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸದ್ಯ 750 ಮೆಗಾವ್ಯಾಟ್‌ ವಿದ್ಯುತ್‌ಗೆ ಬೇಡಿಕೆಯಿದ್ದು, ಮುಂದಿನ 5ರಿಂದ 8 ವರ್ಷಗಳಲ್ಲಿ 250ಕ್ಕಿಂತ ಹೆಚ್ಚು ಮೆ.ವ್ಯಾ. ವಿದ್ಯುತ್‌ ಬೇಡಿಕೆ ಬರಲಿದೆ. ಅಡಚಣೆ ರಹಿತ ವಿದ್ಯುತ್‌ ಒದಗಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ 300 ಕೋ.ರೂ. ವೆಚ್ಚದಲ್ಲಿ 400 ಕಿ.ವ್ಯಾ. ಸಾಮರ್ಥ್ಯದ ವಿದ್ಯುತ್‌ ಉಪಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ನೆಹರೂ ಮೈದಾನದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ 17 ವಿದ್ಯುತ್‌ ಚಾಲಿತ ವಾಹನ ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಮುಂದೆ 79 ಹೆಚ್ಚುವರಿ ಕೇಂದ್ರ ಸ್ಥಾಪಿಸಲಾಗುವುದು. ತೆಂಕ ಎಡಪದವಿನಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ ಹಾಗೂ ಈ ವರ್ಷ ಬೆಳ್ತಂಗಡಿಯ ಉಜಿರೆ, ಪುತ್ತೂರಿನ ಕೆದಂಬಾಡಿ, ಬಂಟ್ವಾಳದ ನರಿಕೊಂಬಿನಲ್ಲಿ 3 ಹೆಚ್ಚುವರಿ ಎಂಆರ್‌ಎಫ್ ಘಟಕಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ
ರಾಮಕುಂಜದಲ್ಲಿ ಗೋಶಾಲೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಪುಂಜಾಲಕಟ್ಟೆಯಲ್ಲಿ ನಾರಾಯಣಗುರು ವಸತಿ ಶಾಲೆ ಸ್ಥಾಪನೆ, ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ಮಂಗಳೂರಿನಲ್ಲಿ ಆರಂಭಿಸಲಾಗುತ್ತದೆ ಎಂದರು.

ಗ್ರಾಮೀಣ ರಸ್ತೆ ಪುನರ್‌ ನಿರ್ಮಾಣ
ಪ್ರಕೃತಿ ವಿಕೋಪ ನಿರ್ವಹಣ ಕಾರ್ಯ ಕ್ರಮದಡಿ ಜಿಲ್ಲೆಗೆ ಸರಕಾರದಿಂದ 25 ಕೋ.ರೂ. ಬಿಡುಗಡೆಗೊಳಿಸಲಾಗಿದೆ. 900 ಕಿ.ಮೀ. ಗ್ರಾಮೀಣ ರಸ್ತೆಗಳ ಮರುನಿರ್ಮಾಣಕ್ಕೆ 110 ಕೋ.ರೂ. ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ಜಕ್ರಿಬೆಟ್ಟಿನಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಿಸಲು 135 ಕೋ.ರೂ. ಮೀಸಲಿಡಲಾಗಿದೆ ಎಂದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ಮೇಯರ್‌ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್‌, ಎಸ್‌ಪಿ ಹೃಷಿಕೇಶ್‌ ಭಗವಾನ್‌ ಸೋನಾವಣೆ, ಡಿಸಿಪಿ ಅನ್ಸುಕುಮಾರ್‌, ದಿನೇಶ್‌ ಕುಮಾರ್‌, ಪಾಲಿಕೆ ಆಯುಕ್ತ ಅಕ್ಷಯ… ಶ್ರೀಧರ್‌, ಮುಖ್ಯಸಚೇತಕ ಸುಧೀರ್‌ ಶೆಟ್ಟಿ ಉಪಸ್ಥಿತರಿದ್ದರು.

ದ.ಕ. ಜಿಲ್ಲೆಯ ಅಭಿವೃದ್ಧಿಗಾಗಿ “ಕನಸಿನ, ಆಕರ್ಷಣೀಯ ಮತ್ತು ಅಭಿವೃದ್ಧಿ ಪಥದ ಮಂಗಳೂರು’ ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ವಿವಿಧ ಯೋಜನೆಗಳನ್ನು ಸಚಿವ ಸುನಿಲ್‌ ಪ್ರಕಟಿಸಿದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.