ಉಡುಪಿ ಜಿಲ್ಲೆ ರಜತ ಮಹೋತ್ಸವ ಉದ್ಘಾಟನೆಗೆ ರಾಜ್ಯಪಾಲ ಗೆಹ್ಲೋಟ್
Team Udayavani, Aug 16, 2022, 9:43 AM IST
ಉಡುಪಿ : ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನೆ ಸಮಾರಂಭ ಆ. 25ರಂದು ನಡೆಯಲಿದ್ದು, ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.
ಜಿಲ್ಲೆಯ ರಜತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸಮಿತಿಯನ್ನು ರಚಿಸಿದ್ದೇವೆ ಮತ್ತು ಜವಾಬ್ದಾರಿಗಳನ್ನು ಹಂಚಿದ್ದೇವೆ. ಆ ಸಮಿತಿಗಳು ಪ್ರತ್ಯೇಕವಾಗಿ ಸಭೆ ಸೇರಿ ಏನೇನು ಮಾಡಬೇಕು ಮತ್ತು ಜಿಲ್ಲಾಡಳಿತದಿಂದ ಏನಾಗ ಬೇಕು ಎಂಬುದರ ಚರ್ಚೆ ನಡೆಸಿ, ಕಾರ್ಯಕ್ರಮ ಅನುಷ್ಠಾನ ಮಾಡಲಿದ್ದೇವೆ. ಸ್ಥಳೀಯ ಶಾಸಕರು ಉಸ್ತುವಾರಿ ನೋಡಿ ಕೊಳ್ಳಲಿದ್ದಾರೆ ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು.
ಬಣ್ಣ ಬಳಿಯಬೇಕಿತ್ತು
ಜಿಲ್ಲೆ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಅಮೃತ ಮಹೋ ತ್ಸ ವದ ಈ ಸಂದರ್ಭ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣವನ್ನು ವಿದ್ಯುದ್ದೀಪಾಲಂಕಾರದ ಜತೆಗೆ ಸುಣ್ಣ-ಬಣ್ಣ ಬಳಿದು ದುರಸ್ತಿ ಮಾಡಬೇಕಿತ್ತು. ಆದರೆ ಸಾಧ್ಯವಾಗಿಲ್ಲ. 3 ಕೋ.ರೂ. ಅನುದಾನದ ಪ್ರಸ್ತಾವನೆ ಸಿದ್ಧಪಡಿಸಿದ್ದೆವು ಎಂದರು.
ವಿವಿಧೋದ್ದೇಶ ಬಂದರು ಮರೀನಾ ಅಲ್ಲ
ಜಿಲ್ಲೆಯಲ್ಲಿ ಕಾಲುಸಂಕಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಿದ್ದೇವೆ. ನರೇಗಾ ಯೋಜನೆಯಡಿಯಲ್ಲಿ ಪರಿಕರಗಳಿಗೂ ಶೀಘ್ರ ಅನುದಾನ ಒದಗಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅನುದಾನದಲ್ಲಿ ಬಂದರುಗಳ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ವಿವಿಧೋದ್ದೇಶದ ಬಂದರುಗಳು ಮರೀನಾ ಅಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ಶಿವಮೊಗ್ಗ : ತುರ್ತು ಸಂದರ್ಭ ಹೊರತುಪಡಿಸಿ ರಾತ್ರಿ ಹೊತ್ತು ಬೈಕ್ ಸಂಚಾರ ನಿಷೇಧ : ಎಡಿಜಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ