ಹುಮನಾಬಾದ್: ಇನ್ನೂ ರಾರಾಜಿಸುತ್ತಿವೆ ರಾಷ್ಟ್ರಧ್ವಜ, ಜಾಗೃತಿ ಮೂಡಿಸುವಲ್ಲಿ ಅಧಿಕಾರಿಗಳು ವಿಫಲ
Team Udayavani, Aug 16, 2022, 10:30 AM IST
ಹುಮನಾಬಾದ್ : ಅಮೃತ ಮಹೋತ್ಸವ ನಿಮಿತ್ತ ಪ್ರತಿಯೊಂದು ಮನೆ ಹಾಗೂ ಅಂಗಡಿಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಜಾಗೃತಿ ಮೂಡಿಸಿದ ಅಧಿಕಾರಿಗಳು ರಾಷ್ಟ್ರಧ್ವಜ ಇಳಿಸುವ ಕುರಿತು ಜಾಗೃತಿ ಮೂಡಿಸುವಲ್ಲಿ ವಿಫಲವಾಗಿದೆ.
ಆ.13 ರಂದು ಪಟ್ಟಣದ ಮನೆಗಳು ಹಾಗೂ ಅಂಗಡಿಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಲಾಗಿತ್ತು. ನಿಯಮ ಅನುಸಾರ ಆಗಷ್ಟ್ 15ರ ಸಂಜೆಗೆ ಗೌರವದಿಂದ ರಾಷ್ಟ್ರಧ್ವಜ ತಿಳಿಸಬೇಕಿತ್ತು. ಆದರೆ ಮನೆಗಳ ಮೇಲೆ ಹಾಗೂ ಅಂಗಡಿಗಳ ಮೇಲೆ ಹಾರಿಸಿದ ಧ್ವಜಗಳು ಆಗಸ್ಟ್ 16ರಂದು ಮುಂಜಾನೆ ಕೂಡ ಕಂಡುಬಂದವು. ಈ ಕುರಿತು ಕೆಲವರನ್ನು ವಿಚಾರಿಸಿದಾಗ, ರಾಷ್ಟ್ರಧ್ವಜ ಹಾರಿಸುವಂತೆ ಅಧಿಕಾರಿಗಳು ಖುದ್ದು ಅಂಗಡಿಗಳಿಗೆ ಬಂದು ಧ್ವಜ ಮಾರಾಟ ಮಾಡಿದ್ದಾರೆ. ಆದರೆ, ಆಗಷ್ಟ್ 15ರಂದೆ ಧ್ವಜ ಇಳಿಸಬೇಕು ಎಂದು ಹೇಳಿಲ್ಲ. ಮೊದಲ ಬಾರಿಗೆ ಧ್ವಜ ಹಾರಿಸಿದ್ದು, ಇದರ ಕುರಿತು ಕೂಡ ಅಧಿಕಾರಿಗಳು ಜಾಗೃತಿ ಮೂಡಿಸಬೇಕಿತ್ತು ತಾಲೂಕು ಆಡಳಿತ ಕಾಳಜಿ ವಹಿಸಬೇಕಿತ್ತು ಎಂಬ ಹೆಸರು ಹೇಳದ ಅಂಗಡಿಗಳ ಮಾಲೀಕರು ಅಭಿಪ್ರಾಯ ತಿಳಿಸಿದ್ದಾರೆ.
ಆಗಷ್ಟ್ 16ರ ಬೆಳಿಗ್ಗೆ ಕೂಡ ಪಟ್ಟಣದ ಬಹುತೇಕ ಕಡೆಗಳಲ್ಲಿ ರಾಷ್ಟ್ರ ಧ್ವಜ ಕಾಣಿಸುತ್ತಿರುವ ಕಾರಣಕ್ಕೆ ಜಿಲ್ಲಾಧಿಕಾತಿಗಳ ಗಮನಕ್ಕೆ ತರಲಾಗಿದ್ದು, ಜಿಲ್ಲಾಧಿಕಾರಿಗಳ ಆದೇಶ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಅಧಿಕಾರಿಗಳು ಬೆಳಿಗ್ಗೆ 10 ಗಂಟೆಯ ನಂತರ ಪಟ್ಟಣದಲ್ಲಿ ಧ್ವನಿವರ್ಧಕ ಮೂಲಕ ಧ್ವಜ ಇಳಿಸುವಂತೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ : ವಿಜಯಪುರದಲ್ಲೊಂದು ಅಪರೂಪದ ಧ್ವಜಾರೋಹಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ