ವರ್ಷ ಕಳೆದ್ರೂ ರಸ್ತೆ ಅಭಿವೃದ್ಧಿ ಪಡಿಸಿಲ್ಲ 


Team Udayavani, Aug 16, 2022, 2:52 PM IST

ವರ್ಷ ಕಳೆದ್ರೂ ರಸ್ತೆ ಅಭಿವೃದ್ಧಿ ಪಡಿಸಿಲ್ಲ 

ಕುದೂರು: ಗ್ರಾಮದ ಮುಖ್ಯರಸ್ತೆ ಕಳೆದ ಒಂದು ವರ್ಷ ಕಳೆದರೂ ಅಭಿವೃದ್ಧಿ ಪಡಿಸಿಲ್ಲ ಎಂದು ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಶಾಸಕ ಎ. ಮಂಜುನಾಥ್‌ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಗ್ರಾಪಂ ಸದಸ್ಯ ಟಿ.ಹನುಮಂತ ರಾಯಪ್ಪ ಮಾತನಾಡಿ, ಕಳೆದ ಒಂದು ವರ್ಷದ ಹಿಂದೆ ಇಲ್ಲಿ ಬೃಹತ್‌ ಮರ ಇದ್ದು, ಅದನ್ನು ಕೆಡವಿ ನಿಮಗೆ ರಸ್ತೆ ಅಗಲಿ ಕರಣಗೊಳಿಸಿ ಎರಡು ಕಡೆ ಚರಂಡಿ ನಿರ್ಮಿಸಿ ಸುಂದರ ರಸ್ತೆ ನಿರ್ಮಾಣ ಮಾಡುವುದಾಗಿ ಹೇಳಿ ರಸ್ತೆಗೆ ಮೂರು ಬಾರಿ ಗುದ್ದಲಿಪೂಜೆ ಮಾಡಿದ್ದರು. ಆದರೆ, ಇದುವರೆಗೂ ರಸ್ತೆ ಡಾಂಬರಿಕರಣಗೊಳ್ಳಲಿಲ್ಲ. ಶಾಸಕರು ಕಳೆದ ಗುರುವಾರ ಮತ್ತೆ ಗುದ್ದಲಿಪೂಜೆ ಮಾಡುತ್ತೇನೆ ಎಂದು ಹೇಳಿ ಹೋದವರು ಇದುವರೆಗೂ ಪತ್ತೆ ಇಲ್ಲ ಎಂದು ದೂರಿದರು.

ಯಾವ ಅಭಿವೃದ್ಧಿಯೂ ಆಗಿಲ್ಲ: ಯುವಮುಖಂಡ ಕೆ.ಬಿ.ಚಂದ್ರುಶೇಖರ್‌ ಮಾತನಾಡಿ, ಶಾಸಕರು ಕೇವಲ ಸುಳ್ಳು ಭರವಸೆ ನೀಡಿ ಕಾಲ ಕಳೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೇ ನೀವು ಕೂಡ ಕುದೂರು ಗ್ರಾಮಕ್ಕೆ ಹಲವಾರು ಬಂದು ಹೋಗಿದ್ದೀರಲ್ಲ ಮಾಗಡಿ ತಾಲೂಕಿಗೆ ನಿಮ್ಮ ಕೊಡುಗೆ ಏನು? ಈ ರಸ್ತೆ ಸರಿಪಡಿಸಿ ಸಾವಿರಾರು ಜನರು ಇಲ್ಲಿ ಓಡಾಡುತ್ತಾರೆ. ನಾವುಗಳೆಲ್ಲ ಊರು ಅಭಿವೃದ್ಧಿಯಾಗಲಿ ಎಂದು ಸಹಕಾರ ನೀಡಿದ್ದೇವು. ಆದರೆ, ಯಾವ ಅಭಿವೃದ್ಧಿಯೂ ಆಗಲಿಲ್ಲ ಎಂದರು.

ಸುಳ್ಳು ಭರವಸೆ: ಕಾಂಗ್ರೆಸ್‌ ಮುಖಂಡ ಲೋಕೇಶ್‌ ಮಾತನಾಡಿ, ಶಾಸಕರ ಕೆಲಸಕ್ಕೆ ಯಾರೂ ಅಡ್ಡಿಪಡಿಸುವುದಿಲ್ಲ. ಅವರ ಸುಳ್ಳು ಭರವಸೆ ಅವರ ವಿರುದ್ಧವಾಗಿ ಹೇಳುತ್ತಿವೆ ಹೊರತು, ಅವರು ಕೆಲಸ ಮಾಡಿಸುವುದಕ್ಕೆ ನಾವುಗಳ್ಯಾರು ತೊಂದರೆ ಕೊಡುವುದಿಲ್ಲ. ಶಾಸಕರು ಬರೀ ಸುಳ್ಳು ಹೇಳಿಕೊಂಡೆ ಜೀವನ ಮಾಡುತ್ತಿದ್ದು, ತಾಲೂಕಿನಲ್ಲಿ 5 ವರ್ಷದಿಂದ ಏನಾದರೂ ಅಭಿವೃದ್ಧಿ ಪಡಿಸಿದ್ದಾರೆಂದರೆ ಚರ್ಚೆಗೆ ಬರಲಿ ನಾವು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.