ಪ್ರವೀಣ್ ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ
ಮಸೂದ್ ಕೊಲೆ: ಆರೋಪಿಗಳ ನ್ಯಾ.ಕಸ್ಟಡಿ ವಿಸ್ತರಣೆ
Team Udayavani, Aug 16, 2022, 10:32 PM IST
ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಧಾನ ಆರೋಪಿಗಳಾದ ಮಹಮ್ಮದ್ ಶಿಹಾಬ್, ಅಬ್ದುಲ್ ಬಶೀರ್, ರಿಯಾಜ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಐದು ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿತ್ತು.
ಮಂಗಳವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ಆ. 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಆರೋಪಿಗಳನ್ನು ವಿವಿಧ ಕಡೆಗಳಿಗೆ ಕರೆದೊಯ್ದು ಮಹಜರು ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈವರೆಗೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ.
ಮಸೂದ್ ಕೊಲೆ: ಆರೋಪಿಗಳ ನ್ಯಾ.ಕಸ್ಟಡಿ ವಿಸ್ತರಣೆ
ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಲಾಗಿದೆ.
ಆರೋಪಿಗಳಾದ ಅಭಿಲಾಷ್, ಸುನಿಲ್ ಕೆ., ಸುಧೀರ್, ಶಿವಪ್ರಸಾದ್, ರಂಜಿತ್ ಬಿ., ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು. ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.