ಪಂಚಮಸಾಲಿ ಸಂಘದಿಂದ ಶೆಟ್ಟಿಕೆರೆಗೆ ಬಾಗಿನ

ನಯಮಮನೋಹರವಾದ ಈ ಕೆರೆ ಅಭಿವೃದ್ಧಿಪಡಿಸಿದರೆ ಈ ಭಾಗದ ಪ್ರೇಕ್ಷಣೀಯ ತಾಣವಾಗಲಿದೆ

Team Udayavani, Aug 17, 2022, 6:13 PM IST

ಪಂಚಮಸಾಲಿ ಸಂಘದಿಂದ ಶೆಟ್ಟಿಕೆರೆಗೆ ಬಾಗಿನ

ಲಕ್ಷ್ಮೇಶ್ವರ: ಸಕಲ ಜೀವರಾಶಿಗಳ ಬದುಕಿಗೆ ಜೀವನಾಧಾರ ಮತ್ತು ಗಂಗಾಮಾತೆಯ ಸ್ವರೂಪವಾದ ಜೀವಜಲವನ್ನು ಪಾವಿತ್ರ್ಯತೆಯಿಂದ ಪೂಜಿಸುವುದು, ಮೈದುಂಬಿರುವ ನದಿ, ಕೆರೆ-ಕಟ್ಟೆಗಳಿಗೆ ಬಾಗಿನ ಸಮರ್ಪಿಸುವುದು ಈ ನೆಲದ ಸಂಸ್ಕೃತಿ, ಸಂಪ್ರದಾಯ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ ಹೇಳಿದರು.

ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ನೂರಾರು ವರ್ಷಗಳ ಇತಿಹಾಸವುಳ್ಳ ಜಿಲ್ಲೆಯ ದೊಡ್ಡದಾದ (214 ಎಕರೆ) ಶೆಟ್ಟಿಕೆರೆ ಬಹಳ ವರ್ಷಗಳ ನಂತರ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು.

ಮನುಷ್ಯ ಸೇರಿ ಪ್ರಾಣಿ-ಪಕ್ಷಿಗಳಿಗೆ ಜೀವಜಲವಾದ ನೀರು ಅತ್ಯಮೂಲ್ಯ ಪ್ರಾಕೃತಿಕ ಸಂಪತ್ತಾಗಿದೆ. ಕೆರೆ-ಕಟ್ಟೆಗಳ ನಿರ್ಮಾಣಕ್ಕಾಗಿ ಹಿರಿಯರು ಶ್ರಮ, ತ್ಯಾಗ, ಬಲಿದಾನ ಮಾಡಿದ್ದಾರೆ. ಅಮೂಲ್ಯವಾದ ಜಲ ಸಂಪನ್ಮೂಲಗಳಾದ ಕೆರೆ, ಹಳ್ಳ, ನದಿಗಳ ಸಂರಕ್ಷಣೆಯ ಜತೆಗೆ ಅವುಗಳನ್ನು ಅತ್ಯಂತ ಗೌರವ, ಪೂಜ್ಯನೀಯ ಭಾವನೆಯಿಂದ ಕಾಣಬೇಕು. ಈ ಭಾವನೆಯನ್ನು ಪ್ರತಿಯೊಬ್ಬರು ಹೊಂದುವ ಮೂಲಕ ಹಿರಿಯರು ಹಾಕಿಕೊಟ್ಟ ಗಂಗಾಪೂಜೆ, ಬಾಗಿನ ಸಮರ್ಪಣೆಯ ಸಂಪ್ರದಾಯವನ್ನು ಜನಮಾನಸದಲ್ಲಿ ಬೇರೂರುವಂತೆ ಮಾಡಬೇಕು ಎಂದರು.

ಕೆರೆ ಅಭಿವೃದ್ಧಿಗೆ ಆಗ್ರಹ: ಜಿಲ್ಲೆಯಲ್ಲಿಯೇ ದೊಡ್ಡದಾದ(214 ಎಕರೆ) ಈ ಐತಿಹಾಸಿಕ ಕೆರೆ ಈ ಭಾಗದ ಅತ್ಯಮೂಲ್ಯ ಸಂಪತ್ತಾಗಿದೆ. ಸುತ್ತಲೂ ಗುಡ್ಡಗಾಡು, ಅರಣ್ಯ ಪ್ರದೇಶವಿದ್ದು, ಈ ಭಾಗದ ಹತ್ತಾರು ಗ್ರಾಮಗಳ ಜನ-ಜಾನುವಾರು, ಸಾವಿರಾರು ಪ್ರಾಣಿ-ಪಕ್ಷಿಗಳಿಗೆ ಆಸರೆಯಾಗಿದೆ. ಅತ್ಯಂತ ವಿಶಾಲ ಮತ್ತು ನಯಮಮನೋಹರವಾದ ಈ ಕೆರೆ ಅಭಿವೃದ್ಧಿಪಡಿಸಿದರೆ ಈ ಭಾಗದ ಪ್ರೇಕ್ಷಣೀಯ ತಾಣವಾಗಲಿದೆ.

ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡುತ್ತಾರಲ್ಲದೇ ಬರಗಾಲದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಗೋಶಾಲೆ ನಿರ್ಮಿಸಲಾಗುತ್ತದೆ. ಪ್ರತಿ ವರ್ಷ ಚಳಿಗಾಲದಲ್ಲಿ ಮಾಗಡಿ ಪಕ್ಷಿಧಾಮಕ್ಕೆ ಬರುವ ಸಾವಿರಾರು ವಿದೇಶಿ ಪಕ್ಷಿಗಳು ಕಳೆದ ಕೆಲ ವರ್ಷಗಳಿಂದ ಈ ಕೆರೆಯಲ್ಲಿ ಬಿಡಾರ ಹೂಡುತ್ತಿವೆ. ಈ ಕೆರೆಗೆ ನದಿಯಿಂದ ನೀರು ತುಂಬಿಸುವ ಯೋಜನೆಯಿಂದ ನೀರು ತುಂಬಿಸುವ ಕಾರ್ಯವೂ ಪ್ರಗತಿ ಹಂತದಲ್ಲಿದೆ. ಆದರೆ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಈ ಕೆರೆಯ ಅಭಿವೃದ್ಧಿಗೆ ಇದುವರೆಗೂ ಯಾವುದೇ ಜನಪ್ರತಿನಿಧಿ , ಅಧಿಕಾರಿಗಳು ಕಿಂಚಿತ್ತೂ ಗಮನ ಹರಿಸಿಲ್ಲ. ಆದ್ದರಿಂದ ಶಾಸಕರ ಸ್ವಗ್ರಾಮಕ್ಕೆ ಹೊಂದಿಕೊಂಡಿರುವ ಈ ಕೆರೆಯ ಅಭಿವೃದ್ಧಿಗಾಗಿ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಗಮನ ಹರಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಸಮಾಜದ ಹಿರಿಯರಾದ ಚಂಬಣ್ಣ ಬಾಳಿಕಾಯಿ, ದೇವಣ್ಣ ಬಳಿಗಾರ, ಸುರೇಶ ರಾಚನಾಯಕರ, ಶಿವನಗೌಡ ಅಡರಕಟ್ಟಿ, ಬಸಣ್ಣ ಬಾಳಿಕಾಯಿ, ಮಲ್ಲನಗೌಡ ಪಾಟೀಲ, ರುದ್ರಪ್ಪ ಉಮಚಗಿ, ಎಸ್‌.ಎಫ್‌.ಆದಿ, ಸೋಮು ಚಿಕ್ಕತೋಟದ, ಶಿವಾನಂದ ಬನ್ನಿಮಟ್ಟಿ, ಪ್ರಭಣ್ಣ ಮುಳಗುಂದ, ದೇವಪ್ಪ ಅಂಗಡಿ, ಫಕೀರಪ್ಪ ಸಾಗರ, ನೇತ್ರ ಚಿಕ್ಕತೋಟದ, ಸರೋಜವ್ವ ಮಾಗಡಿ, ಲಲಿತಾ ಕೆರಿಮನಿ, ಶಾರದಾ ಮಹಾಂತಶೆಟ್ಟರ, ಅನ್ನಪೂರ್ಣ ಮಹಾಂತಶೆಟ್ಟರ, ಶೈಲಾ ಆದಿ, ಅನ್ನಪೂರ್ಣ ಬಾಳಿಕಾಯಿ, ಶಕುಂತಲಾ ಹೊರಟ್ಟಿ ಸೇರಿ ಶೆಟ್ಟಿಕೆರಿ, ಬಸಾಪುರ, ಕುಂದ್ರಳ್ಳಿ, ಯಲ್ಲಾಪುರ, ಬಾಲೆಹೊಸೂರು ಹಾಗೂ ಗೊಜನೂರು ಗ್ರಾಮದ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.