ಮಾಜಿ ಸಿ.ಎಂ. ಯಡಿಯೂರಪ್ಪ ಬೆಂಗಾವಲು ವಾಹನ ಚಾಲಕರಾಗಿದ್ದ ತಿರುಮಲೇಶ್ ನಿಧನ
Team Udayavani, Aug 19, 2022, 10:11 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ತಿರುಮಲೇಶ್ ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಿರುಮಲೇಶ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸುಮಾರು 15 ವರ್ಷಗಳಿಂದ ಬೆಂಗಾವಲು ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಅಕಾಲಿಕ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.