ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!
ಏರ್ ಟ್ರಾಫಿಕ್ ಕಂಟ್ರೋಲರ್ ಹಲವಾರು ಬಾರಿ ಪೈಲಟ್ ಅನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು ಕೂಡಾ ಸಾಧ್ಯವಾಗಿರಲಿಲ್ಲ
Team Udayavani, Aug 19, 2022, 3:27 PM IST
ನವದೆಹಲಿ: ಸುಡಾನ್ ನ ಖಾರ್ಟೂಮ್ ನಿಂದ ಇಥಿಯೋಪಿಯಾ ರಾಜಧಾನಿ ಅಡಿಸ್ ಅಬಾಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ವಿಮಾನ ತೆರಳುತ್ತಿದ್ದ ಇಥಿಯೋಪಿಯನ್ ಏರ್ ಲೈನ್ಸ್ ಬರೋಬ್ಬರಿ 37,000 ಅಡಿ ಎತ್ತರದಲ್ಲಿದ್ದಾಗ ಇಬ್ಬರೂ ಪೈಲಟ್ ಗಳು ನಿದ್ರೆಗೆ ಶರಣಾಗಿರುವ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮಂಗಳೂರು: ಕೆಎಂಎಫ್ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ; ನಾಲ್ವರು ಅರೆಸ್ಟ್
37 ಸಾವಿರ ಅಡಿ ಎತ್ತರದಲ್ಲಿ ವಿಮಾನ ಹಾರಾಟ ನಡೆಸುತ್ತಿದ್ದಾಗ ಇಬ್ಬರೂ ಪೈಲಟ್ ಗಳು ನಿದ್ರೆಗೆ ಜಾರಿದ್ದರು. ವಿಮಾನ ನಿಗದಿತ ವೇಳೆಯಲ್ಲಿ ಅಡಿಸ್ ಅಬಾಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯದೇ ಮುಂದೆ ಸಾಗಿತ್ತು.!
ಅಪಾಯದ ಮುನ್ಸೂಚನೆ ಅರಿತ ಏರ್ ಟ್ರಾಫಿಕ್ ಕಂಟ್ರೋಲರ್ ಹಲವಾರು ಬಾರಿ ಪೈಲಟ್ ಅನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು ಕೂಡಾ ಸಾಧ್ಯವಾಗಿರಲಿಲ್ಲ ಎಂದು ವರದಿ ವಿವರಿಸಿದೆ. ನಂತರ ಇಥಿಯೋಪಿಯನ್ ಏರ್ ಲೈನ್ಸ್ ನ ಆಟೋ ಪೈಲಟ್ ಸಂಪರ್ಕ ಕಡಿತಗೊಂಡ ಪರಿಣಾಮ, ಅಪಾಯದ ಕರೆಗಂಟೆ ಶಬ್ದದಿಂದ ಪೈಲಟ್ ಎಚ್ಚರಗೊಂಡಿರುವುದಾಗಿ ವರದಿ ತಿಳಿಸಿದೆ.
ಅಡಿಸ್ ಅಬಾಬಾ ರನ್ ವೇ ದಾಟಿ ಸುಮಾರು 25 ನಿಮಿಷಗಳ ನಂತರ ಪೈಲಟ್ ಗಳಿಗೆ ಎಚ್ಚರವಾಗಿದ್ದು, ಬಳಿಕ ಪೈಲಟ್ ಸುರಕ್ಷಿತವಾಗಿ ಅಡಿಸ್ ಅಬಾಬಾ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
“37 ಸಾವಿರ ಅಡಿ ಎತ್ತರದಲ್ಲಿ ವಿಮಾನ ಹಾರಾಟ ನಡೆಸುತ್ತಿದ್ದಾಗ ಇಥಿಯೋಪಿಯನ್ ಏರ್ ಲೈನ್ಸ್ ಇಬ್ಬರು ಪೈಲಟ್ ಗಳು ನಿದ್ರೆಗೆ ಶರಣಾಗಿರುವುದು ತೀವ್ರ ಕಳವಳಕಾರಿ ವಿಚಾರವಾಗಿದೆ” ಎಂದು ಏವಿಯೇಷನ್ ತಜ್ಞ ಅಲೆಕ್ಸ್ ಮೆಕೆರಾಸ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ