ಬಾಲಕನ ಅಪಹರಿಸಿದ್ದ ಕದೀಮರು ವಶಕ್ಕೆ

 ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಗಳು-ಮೂರು ಬೈಕ್‌ ವಶ ; ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ್‌ ಪಾಟೀಲ ಮಾಹಿತಿ

Team Udayavani, Aug 19, 2022, 3:34 PM IST

22

ಸಂಕೇಶ್ವರ: ಸಂಕೇಶ್ವರ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿರುವ ಸಂಕೇಶ್ವರದ ಪೊಲೀಸರು ಬಾಲಕನ ಅಪಹರಣ ಮಾಡಿ ಹಣದ ಬೇಡಿಕೆ ಇಟ್ಟಿದ್ದ ಒಟ್ಟು 6 ಕದೀಮರ ತಂಡವನ್ನು ಬಂಧಿ ಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಂಜೀವ್‌ ಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿತರ ಶೋಧ ಕಾರ್ಯ ನಡೆಸಿ ಆ.18ರಂದು ಹಣದ ಬೇಡಿಕೆಗಾಗಿ ಕೃತ್ಯದಲ್ಲಿ ಭಾಗಿಯಾದ 6 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ ಮೂರು ಬೈಕ್‌ ಗಳನ್ನು ಹಾಗೂ 6 ಮೊಬೈಲ್‌ಗ‌ಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ಪ್ರಸಾದ ಉರ್ಫ್‌ ಬಬ್ಲೂ ಸಂಜಯ ರಾವುತ, (20), ನಿಪ್ಪಾಣಿ ತಾಲೂಕಿನ ಸಾ. ಅಕ್ಟೋಳ, ದೀಪಕ ಶಾಮಸಿಂಗ್‌ ಚಿಲವಾರ, (21) ನದಿಗಲ್ಲಿ ಸಂಕೇಶ್ವರ ತಾ. ಹುಕ್ಕೇರಿ ಹಾಗೂ ಬೆಳಗಾವಿಯ ವಂಟಮೂರಿ ಕಾಲೋನಿಯ ರಾಮತೀರ್ಥ ನಗರದ ಸುಲ್ತಾನರಾಜು ಹುಸೇನ ಮುಜಾವರ (19) ಮತ್ತು ರಮೇಶ ಯಲಪ್ಪ ಅಚಗತ್ತಿ. (19) ಮತ್ತು ಡಾಲರ ಕಾಲೋನಿ ನಿಪ್ಪಾಣಿಯ ಸೌರಭ ದಗಡು ತಳವಾರ, (22) ವಿನಾಯಕ ಪಂಡರಿನಾಥ ಪಾಂಡವ (23) ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಆ.2ರಂದು ಸಂಕೇಶ್ವರದ ಭಾಸ್ಕರ ಪ್ರಕಾಶ ಕಾಕಡೆ ಅವರು ಸಂಕೇಶ್ವರ ಪೊಲೀಸ್‌ ಠಾಣೆಗೆ ತನ್ನ 14 ವರ್ಷದ ಮಗ ಶಾಲೆ ಮುಗಿಸಿ ಟೋಶನ್‌ ತೆರಳಿ ಮರಳಿ ಮನೆಗೆ ಬರುತ್ತಿದ್ದಾಗ ಯಾರೋ ಅಪರಿಚಿತರು ನನ್ನ ಮಗನ ಹತ್ತಿರ ಬಂದು “ನಿಮ್ಮ ತಂದೆಗೆ ನಿಪ್ಪಾಣಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮನೆ ಜನರೆಲ್ಲರೂ ಅಲ್ಲಿಗೆ ಹೋಗಿದ್ದಾರೆ’ ಎಂದು ಪುಸಲಾಯಿಸಿ “ನಾವು ಸಹ ಅಲ್ಲಿಗೆ ಹೋಗೋಣ ಬಾ’ ಅಂತಾ ಹೇಳಿ ನಂಬಿಸಿ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಒಂದು ಗಂಟೆಯಲ್ಲಿ ಅಪಹರಣವಾದ ಮಗುವನ್ನು ಸಂಕೇಶ್ವರ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣದ ಬೆನ್ನು ಹತ್ತಿದ ಸಂಕೇಶ್ವರ ಪೊಲೀಸರು ಅಪಹರಣಾಕಾರರನ್ನು 15 ದಿನದಲ್ಲಿ ಪತ್ತೆ ಹಚ್ಚಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಎಂದು ಸಂಜೀವ್‌ ಪಾಟೀಲ ತಿಳಿಸಿದರು.

ಹೆಚ್ಚುವರಿ ಎಸ್‌.ಪಿ ಮಹಾನಿಂಗ ನಂದಗಾವಿ, ಗೋಕಾಕ ಡಿಎಸ್‌ಪಿ ಮನೋಜಕುಮಾರ್‌ ನಾಯಿಕ ಹಾಗೂ ಯಮಕನಮರಡಿ ಪಿಐ ರಮೇಶ ಛಾಯಾಗೋಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಗಣಪತಿ ಕೊಂಗನೋಳಿ ಹಾಗೂ ಸಿಬ್ಬಂದಿಗಳಾದ ಬಿ.ಕೆ.ನಾಗನೂರಿ, ಎಂ.ಜಿ. ದಾದಾಮಾಕ, ಎಂ.ಎಂ. ಕರಗುಪ್ಪಿ, ಬಿ.ವಿ.ಹುಲಕುಂದ, ವೈ.ಎಚ್‌.ನದಾಫ, ಜಿ.ಟಿ. ಪಾಟೀಲ, ಬಿ.ಎಸ್‌. ಕಪರಟ್ಟಿ, ಬಿ.ಎನ್‌. ಮೇಲ್ಮಟ್ಟಿ, ಸಚಿನ್‌ ಪಾಟೀಲ ಮತ್ತು ವಿನೋದ ಠಕ್ಕನ್ನವರ ಮುಂತಾದವರನ್ನು ಒಳಗೊಂಡ ತಂಡವನ್ನು ರಚಿಸಿ ಕೂಡಲೇ ಅಪಹರಣಕ್ಕೊಳಗಾದ ಬಾಲಕನನ್ನು ಅದೇ ದಿನ ಪತ್ತೆ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಕರಣ ಪತ್ತೆ ಹಚ್ಚಿದ ಸಂಕೇಶ್ವರ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ್‌ ಪಾಟೀಲ ಅವರು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸಿಪಿಐ ರಮೇಶ ಛಾಯಾಗೋಳ, ಪ್ರಹ್ಲಾದ್‌ ಚೆನ್ನಗಿರಿ, ಪಿಎಸ್‌ಐ ಗಣಪತಿ ಕೊಂಗನೊಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.