ಜಮ್ಮು-ಕಾಶ್ಮೀರ: ಭದ್ರತೆಗಾಗಿ ಉನ್ನತ ಮಟ್ಟದ ಸಭೆ
Team Udayavani, Aug 20, 2022, 10:23 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಭಾಗದ ಜಿಲ್ಲೆಗಳಾದ ರಜೌರಿ ಮತ್ತು ಪೂಂಛ…ನಲ್ಲಿ ಉಗ್ರ ಚಟುವಟಿಕೆ ಹೆಚ್ಚಾಗಿರುವ ಬೆನ್ನಲ್ಲೇ ಉನ್ನತ ಮಟ್ಟದ ಭದ್ರತಾ ಸಭೆಯನ್ನು ಶನಿವಾರ ನಡೆಸಲಾಗಿದೆ.
ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಅನೇಕರಿದ್ದ ಈ ಸಭೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಭದ್ರತೆ ಮತ್ತು ಉಗ್ರ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಬಂಧನ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಬುದ್ಗಾಮ್ ಜಿಲ್ಲೆಯ ಗೋಪಾಲಪೊರ ಚಂದೋರದಲ್ಲಿ ಗ್ರೆನೇಡ್ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್-ಎ-ತೊಯ್ಬಾದ ಇಬ್ಬರು ಹೈಬ್ರಿಡ್ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಹಿಲ್ ಅಹಮದ್ ವಾನಿ ಮತ್ತು ಅಲ್ತಾಫ್ ಫಾರೂಖ್ ಬಂಧಿತ ಉಗ್ರರು. ಈ ಇಬ್ಬರು ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿರುವುದಾಗಿಯೂ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ