ಕನ್ನಡದಲ್ಲಿ ಬಿಝಿಯಾದ ರಚೆಲ್‌ ಡೇವಿಡ್‌


Team Udayavani, Aug 21, 2022, 3:29 PM IST

Rachel David is busy in Kannada film industry

ಕನ್ನಡ ಚಿತ್ರರಂಗಕ್ಕೆ ಪ್ರತಿ ವರ್ಷ ಬೇರೆ ಬೇರೆ ಭಾಷೆಗಳಿಂದ ನಾಯಕಿಯರು ಎಂಟ್ರಿಕೊಡುತ್ತಲೇ ಇರುತ್ತಾರೆ. ಹೀಗೆ ಬಂದ ನಟಿಯರು ಅನೇಕರು ಸ್ಯಾಂಡಲ್‌ವುಡ್‌ನಲ್ಲಿ ತಮ್ಮಛಾಪು ಮೂಡಿಸಿದ್ದಾರೆ ಕೂಡಾ. ಅದರಲ್ಲೂ ಮಲಯಾಳಂ ಮೂಲದ ನಟಿಯರಿಗೂ ಕನ್ನಡ ಚಿತ್ರರಂಗಕ್ಕೂ ಚೆನ್ನಾಗಿ ಕೂಡಿ ಬರುತ್ತದೆ. ಈಗಾಗಲೇ ಮಲಯಾಳಂನಿಂದ ಕನ್ನಡ ಚಿತ್ರರಂಗಕ್ಕೆ ನಾಯಕಿಯರಾಗಿ ಬಂದ ಅನೇಕ ನಟಿಯರು ಗಟ್ಟಿ ನೆಲೆಯೂರಿದ್ದಾರೆ. ಈಗ ಆ ಸಾಲಿಗೆ ಸೇರುವ ಮತ್ತೂಂದು ರಚೆಲ್‌ ಡೇವಿಡ್‌.

ಈ ಹೆಸರನ್ನು ನೀವು ಕೇಳಿರಬಹುದು. ನೀವು “ಲವ್‌ ಮಾಕ್ಟೇಲ್‌-2′ ಚಿತ್ರ ನೋಡಿದ್ದರೆ ಖಂಡಿತಾ ನಿಮಗೆ ಈ ಹೆಸರು ಹಾಗೂ ಮುಖ ನೆನಪಿಗೆ ಬರುತ್ತದೆ. ಕೇರಳ ಮೂಲದ ರಚೆಲ್‌ ಈಗ ಕನ್ನಡದಲ್ಲಿ ಬಿಝಿಯಾಗುತ್ತಿದ್ದಾರೆ. ಈಗಾಗಲೇ ಪ್ರಮೋದ್‌ ನಾಯಕರಾಗಿರುವ “ಭುವನಂ ಗಗನಂ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಇನ್ನಷ್ಟು ಚಿತ್ರಗಳು ಕೈಯಲ್ಲಿವೆ.

ಬಯಸದೇ ಬಂದ ಭಾಗ್ಯ: ರಚೆಲ್‌ಗೆ “ಲವ್‌ ಮಾಕ್ಟೇಲ್‌-2′ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದು “ಬಯಸದೇ ಬಂದ ಭಾಗ್ಯ’. ಅದೊಂದು ದಿನ “ಲವ್‌ ಮಾಕ್ಟೇಲ್‌-2′ ತಂಡದಿಂದ ಕರೆ ಬಂದಾಗ ರಚೆಲ್‌ ಗೆ ಆಶ್ಚರ್ಯ ಕಾದಿತ್ತಂತೆ. “ಕನ್ನಡ ಇಂಡಸ್ಟ್ರಿಯಲ್ಲಿ ನನಗೆ ಯಾವುದೇ ಸಂಬಂಧ ಇರಲಿಲ್ಲ. ಹಾಗಾಗಿ ತಂಡದಿಂದ ಕರೆ ಬಂದಾಗ ಅಚ್ಚರಿಯಾಯಿತು. ನಿರ್ದೇಶಕ ಮತ್ತು ನಟ ಕೃಷ್ಣ ಅವರೊಂದಿಗೆ ಕೆಲಸ ಮಾಡಿರುವುದು ಅದ್ಭುತ ಅನುಭವ. ಅವರು ನಿರ್ಮಾಪಕರಾಗಿ, ನಿರ್ದೇಶಕರಾಗಿ ಸಾಕಷ್ಟು ಸ್ಪಷ್ಟತೆ ಹೊಂದಿದ್ದಾರೆ. ಇದು ನಮ್ಮಂತಹ ಹೊಸ ಕಲಾವಿದರಿಗೆ ತುಂಬಾ ಸಹಾಯವಾಗುತ್ತದೆ. ಸಿನಿಮಾ ಸೆಟ್‌ಗೆ ಹೋಗುವ ಮುನ್ನ ನಾವು ಸಾಕಷ್ಟು ರಿಹರ್ಸಲ್‌ಗಳನ್ನು ಮಾಡಿದ್ದು ನನಗೆ ಸಾಕಷ್ಟು ಸಹಾಯವಾಯಿತು ಹಾಗೂ ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿತು. ಅದೇ ರೀತಿ ಮಿಲನ ನಾಗರಾಜ್‌ ಕೂಡ ಉತ್ತಮ ಬೆಂಬಲ ನೀಡಿದರು. ಒಟ್ಟಾಗಿ, ನಾವು ತಂಡವಾಗಿ ಕೆಲಸ ಮಾಡಿದ್ದೇವೆ’ ಎಂದು ತಮ್ಮ ಚೊಚ್ಚಲ ಕನ್ನಡ ಸಿನಿಮಾದ ಬಗ್ಗೆ ಹೇಳುತ್ತಾರೆ.

“ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಈಗ “ಭುವನಂ ಗಗನಂ’ ಸಿನಿಮಾ ದಲ್ಲೂ ಒಳ್ಳೆಯ ಪಾತ್ರ ಸಿಕ್ಕಿದೆ. ನಟಿಯರನ್ನು ತುಂಬಾ ಗೌರವದಿಂದ ನಡೆಸಿಕೊಳ್ಳುವ ಕನ್ನಡ ಚಿತ್ರರಂಗದಲ್ಲಿ ಮುಂದೆ ಮತ್ತಷ್ಟು ಸಿನಿಮಾ ಮಾಡುವ ಕನಸಿದೆ’ ಎನ್ನುವುದು ರಚೆಲ್‌ ಮಾತು.

“ನಾನು ಬಣ್ಣದ ಬದುಕಿಗೆ ಈಗಷ್ಟೇ ಕಾಲಿಟ್ಟಿದ್ದೇನೆ. ಈ ಅವಧಿ ನನಗೆ ಅನೇಕ ಅನುಭವಗಳನ್ನು ತಂದುಕೊಟ್ಟಿದೆ. ನಾನೊಬ್ಬಳು ನಟಿಯಾಗಬೇಕು ಎಂದು ಇಲ್ಲಿಗೆ ಬಂದಾಗಿನಿಂದ ಎಲ್ಲರೂ ಸಹಕಾರ ನೀಡುತ್ತ ಬಂದಿದ್ದಾರೆ. ಈ ಮೂರು ವರ್ಷಗಳು ಸಾಕಷ್ಟು ಒಳ್ಳೆಯ ಅನುಭವಗಳನ್ನು ಕೊಟ್ಟಿವೆ. ಪ್ರತಿದಿನ ಹೊಸದೇನಾದ್ರೂ ಕಲಿಯುತ್ತಿದ್ದೀನಿ. ಮೊದಲು ಚಿತ್ರರಂಗ ಹೊಸದಾಗಿದ್ದರಿಂದ, ಚಿತ್ರಗಳ ಆಯ್ಕೆ, ಪಾತ್ರಗಳ ಆಯ್ಕೆ ಬಗ್ಗೆ ನನಗೆ ಸ್ಪಷ್ಟತೆಯಿರಲಿಲ್ಲ. ಈಗ ಆ ಬಗ್ಗೆ ಒಂದಷ್ಟು ಅನುಭವ ಸಿಕ್ಕಿದೆ. ಚಿತ್ರಗಳ ಕಥೆ, ಪಾತ್ರಗಳ ಆಯ್ಕೆ, ಅದಕ್ಕೆ ತಯಾರಿ ಹೇಗಿರಬೇಕು ಅನ್ನೋದನ್ನ ಮೊದಲೇ ಪ್ಲಾನ್‌ ಮಾಡಿಕೊಳ್ಳುತ್ತೇನೆ.’ ಎನ್ನಲು ರಚೆಲ್‌ ಮರೆಯುವುದಿಲ್ಲ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.