ಪುಣ್ಯಕೋಟಿ ದತ್ತು ಯೋಜನೆ ಯಶಸ್ವಿಗೊಳಿಸಲು ಸಚಿವ ಪ್ರಭು ಚವ್ಹಾಣ್ ಕರೆ


Team Udayavani, Aug 21, 2022, 4:48 PM IST

ಪುಣ್ಯಕೋಟಿ ದತ್ತು ಯೋಜನೆ ಯಶಸ್ವಿಗೊಳಿಸಲು ಸಚಿವ ಪ್ರಭು ಚವ್ಹಾಣ್ ಕರೆ

ಬೆಂಗಳೂರು: ಗೋಸಂಕುಲವನ್ನು ರಕ್ಷಿಸಲು ರಾಜ್ಯ ಸರ್ಕಾರ‌ ಜಾರಿಗೆ ತಂದಿರುವ ಪುಣ್ಯ ಕೋಟಿ ದತ್ತು ಯೋಜನೆ ಯಶಸ್ವಿಗೊಳಿಸಲು ಪಶುಸಂಗೋಪನೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಮುಂದಾಗಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಕರೆ‌ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗೋವುಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಸದಾ ಒತ್ತು ನೀಡುತ್ತಾ ಬಂದಿರುವ ಪಶುಸಂಗೋಪನೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು, ಪುಣ್ಯಕೋಟಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮರ್ಪಕ ಅನುಷ್ಟಾನಕ್ಕೆ ಮುಂದಾಗಿ ವೈಯಕ್ತಿಕವಾಗಿ ದತ್ತು ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವುಗಳನ್ನು ದತ್ತು ಪಡೆದು ಗೋಸಂಕುಲ ಸಂರಕ್ಷಣೆಗೆ ಕರೆ ನೀಡಿ ಎಲ್ಲರಿಗೂ ಮಾದರಿಯಾದರು. ಸರ್ಕಾರ 2022-23ನೇ ಸಾಲಿನ ಆಯವ್ಯಯದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದಿತು. ನಾನು ಇದರಿಂದ ಆಕರ್ಷಿತನಾಗಿ ಜಿಲ್ಲೆಗೊಂದರಂತೆ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಲ್ಲಿ 31 ಗೋವುಗಳನ್ನು ದತ್ತು ಪಡೆದಿದ್ದೇನೆ. ಗೋಮಾತಾ ಸಂರಕ್ಷಣೆಗೆಂದೇ ವಿಶೇಷ-ವಿಶಿಷ್ಠ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇದೇ ವೇಳೆ ಪ್ರಭು ಚವ್ಹಾಣ್ ಕೃತಜ್ಞತೆ ಸಲ್ಲಿಸಿದ್ದಾರೆ.

ಗೋ ಶಾಲೆಗಳಲ್ಲಿರುವ ಜಾನುವಾರುಗಳ ನಿರ್ವಹಣೆ ಮಾಡಲು ಮತ್ತು ರಾಜ್ಯದ ಗೋಶಾಲೆಗಳನ್ನು ಆತ್ಮನಿರ್ಭರವಾಗಿಸುವ ಸಲುವಾಗಿ ಪುಣ್ಯಕೋಟಿ ದತ್ತು ಯೋಜನೆಯಲ್ಲಿ ಪಶುಸಂಗೋಪನೆ ಇಲಾಖೆಯ ಎಲ್ಲರೂ ಪಾಲುದಾರರಾಗಿ ಪುಣ್ಯಕೋಟಿ ದತ್ತು ಯೋಜನೆಗೆ ಶ್ರಮಿಸಬೇಕಿದ್ದು, ನೀವು ಪೋರ್ಟಲ್ ಮೂಲಕ ನೀಡಿದ ದೇಣಿಗೆಗಳು ನೇರವಾಗಿ ಗೋಶಾಲೆಗಳ ಬ್ಯಾಂಕ್ ಖಾತೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು  ಮಾಡಲಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಪಶುಸಂಗೋಪನೆ ಇಲಾಖೆ ಮತ್ತು ಅದರಡಿಯಲ್ಲಿ ಬರುವ ಸಂಸ್ಥೆಗಳ ಎಲ್ಲಾ ಅಧಿಕಾರಿ-ಸಿಬ್ಬಂದಿಗಳು, ಯಥಾ ಶಕ್ತಿಯಾಗಿ ತಮ್ಮ ಸ್ವಂತ ಆದಾಯದಿಂದ ಮೂಕ ಪ್ರಾಣಿಗಳ ಸೇವೆಗೆ ಕಟ್ಟಿಬದ್ಧರಾಗಬೇಕಾಗಿದೆ. ಈ ಯೋಜನೆ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಯೋಜನೆ ಸಮರ್ಪಕ ಯಶಸ್ವಿಗೆ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಸ್ಪಂದಿಸುವಂತೆ ಪ್ರಭು ಚವ್ಹಾಣ್ ಅವರು ಮನವಿ ಮಾಡಿದ್ದಾರೆ.

ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿ ಜಾನುವಾರುಗಳ ದತ್ತು (ADOPT) ಯೋಜನೆ, ಗೋಶಾಲೆಗಳಿಗೆ ದೇಣಿಗೆ (Donation) ಯೋಜನೆ ಹಾಗೂ ಜಾನುವಾರುಗಳಿಗಾಗಿ ಆಹಾರ (FEED A COW) ಯೋಜನೆಯಡಿ ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ವವ ಇತ್ಯಾದಿ) ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಲ್ಲಿರುವ ಗೋವುಗಳ ಆಹಾರಕ್ಕಾಗಿ ವಂತಿಗೆ ನೀಡಲು ಅವಕಾಶ ಕಲ್ಪಿಸಲಾಗಿದ್ದು, ತಾವೆಲ್ಲರೂ ಕೈ ಜೋಡಿಸುವಂತೆ ಪ್ರಭು ಚವ್ಹಾಣ್ ಅವರು ಪಶುಸಂಗೋಪನೆ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ:ಇಂಡಿಯಾ ಎ ತಂಡಕ್ಕೆ ಶುಭ್ಮನ್ ಗಿಲ್ ನಾಯಕ?: ತಂಡಕ್ಕೆ ಶಮ್ಸ್ ಮಲಾನಿ ಆಯ್ಕೆ ಸಾಧ್ಯತೆ

ನೋಂದಾವಣೆಯಾಗಿರುವ ಗೋಶಾಲೆಗಳು / ಜಾನುವಾರುಗಳಿಗೆ ಜನರ ಉತ್ತಮ ಸ್ಪಂದನೆ ದೊರೆಯುತ್ತಿದ್ದು ಗೋವುಗಳ ವರ್ಷದ ಮೇವಿನ ಖರ್ಚನ್ನು ನೀಡುವ ಮೂಲಕ 145 ಜನರು ಗೋವುಗಳ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಟ್ಟು 1500ಕ್ಕೂ ಹೆಚ್ಚು ಜನರು / ಸಂಘ ಸಂಸ್ಥೆಗಳು ದೇಣಿಗೆಗಳನ್ನು ನೀಡುವ ಮೂಲಕ ಗೋಮಾತೆಯ ಸಂರಕ್ಷಣೆಯ ಈ ಪುಣ್ಯಕಾರ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಭು ಚವ್ಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ.

ಪಶುಸಂಗೋಪನೆ ಇಲಾಖೆ ನನ್ನ ಕುಟುಂಬದ ಪರಿವಾರವಾಗಿದೆ. ದೇಶದಲ್ಲಿಯೇ ಪ್ರಥಮವಾಗಿ ಪುಣ್ಯಕೋಟಿ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲಾಗಿದೆ. ಪುಣ್ಯ ಕೋಟಿ ಆನ್ ಲೈನ್ ಪೋರ್ಟಲ್ https://punyakoti.karahvs.in ಮೂಲಕ ಪುಣ್ಯಕೋಟಿ ಯೋಜನೆ ಯಶಸ್ವಿಗೆ ನನ್ನ ಪರಿವಾರ ತೋಡಗಿಸಿಕೊಂಡು ಶ್ರಮಿಸಬೇಕೆಂದು ಪ್ರಭು ಚವ್ಹಾಣ್ ಇದೇ ವೇಳೆ ಕಿವಿಮಾತು ಹೇಳಿದ್ದಾರೆ.

ಪಶುಸಂಗೋಪನೆ ಇಲಾಖೆಯ 9500 ಸಿಬ್ಬಂದಿಗಳು, 4200 ಸಂಸ್ಥೆಗಳು ಮತ್ತು ಕರ್ನಾಟಕ ಹಾಲು ಮಹಾಮಂಡಳ ವ್ಯಾಪ್ತಿಯಲ್ಲಿರುವ 10000ಕ್ಕೂ ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತು ಬಾರದ ಮೂಕ ಪ್ರಾಣಿಗಳ ಸಂರಕ್ಷಣೆ, ಪಾಲನೆ, ಪೋಷಣೆ ಹಾಗೂ ನಿರ್ವಹಣೆಗೆ  ಕೈ ಜೋಡಿಸುವ ಮೂಲಕ ಪುಣ್ಯಕೋಟಿ ದತ್ತು ಯೋಜನೆ ಯಶಸ್ವಿಗೆ ಸ್ಪಂದಿಸುವಂತೆ ಪ್ರಭು ಚವ್ಹಾಣ್ ಕೋರಿದ್ದಾರೆ

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.