ಪುತ್ತೂರು ನಗರ ಪ್ರಾ.ಆ. ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ

ಕಾರ್ಯನಿರ್ವಹಿಸುತ್ತಿರುವ ಕಟ್ಟಡ ಬಿಡಲು ಸೂಚನೆ ; ಶೀಘ್ರ ಪರ್ಯಾಯ ವ್ಯವಸ್ಥೆಗೆ ಆಗ್ರಹ

Team Udayavani, Aug 22, 2022, 9:16 AM IST

1

ಪುತ್ತೂರು: ನಗರದ ಕೇಂದ್ರ ಸ್ಥಾನದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ವಂತ ಕಟ್ಟಡವೇ ಇಲ್ಲ.

ಹೀಗಾಗಿ ಜನರಿಗೆ ಆರೋಗ್ಯ ಭಾಗ್ಯ ಒದಗಿಸುವ ಇಲಾಖೆಯೇ ಕಟ್ಟಡ ಇಲ್ಲದೆ ಪರದಾಡುತ್ತಿದ್ದು ಹೊಸ ಕಟ್ಟಡ ವ್ಯವಸ್ಥೆ ಶೀಘ್ರ ಆಗಬೇಕು ಎನ್ನುವ ಬೇಡಿಕೆ ಕೇಳಿ ಬಂದಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್‌ ಘಟಕ, ತಾಲೂಕು ಆರೋಗ್ಯ ಕೇಂದ್ರ ಪುತ್ತೂರು ಹಾಗೂ ನಗರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆರು ವರ್ಷಗಳ ಹಿಂದೆ ನೆಲ್ಲಿಕಟ್ಟೆಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಯಿತು. ಆರೋಗ್ಯ ಕೇಂದ್ರವು ತಾತ್ಕಾಲಿಕ ನೆಲೆಯಲ್ಲಿ ನಗರದ ನೆಲ್ಲಿಕಟ್ಟೆಯಲ್ಲಿನ ಬಿಆರ್‌ಸಿಗೆ ಸೇರಿದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು.

40ರಿಂದ 60 ಹೊರ ರೋಗಿಗಳು

ನಗರದಲ್ಲಿ 31 ವಾರ್ಡ್‌ ವ್ಯಾಪ್ತಿ ಒಳಗೊಂಡಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿನಂಪ್ರತಿ 40 ರಿಂದ 60 ರ ತನಕ ಹೊರ ರೋಗಿಗಳು ಬಂದು ಚಿಕ್ಸಿತೆ ಪಡೆಯುತ್ತಾರೆ. ಬಸ್‌ ನಿಲ್ದಾಣದ ಸನಿಹದಲ್ಲೇ ಇರುವ ಕಾರಣ ಸಂಚಾರಕ್ಕೂ ಅನುಕೂಲಕರ ಎಂದೇ ಹೆಚ್ಚಿನವರು ಈ ಕೇಂದ್ರವನ್ನು ಆಶ್ರಯಿಸುತ್ತಾರೆ. ಕೋವಿಡ್‌ ಕಾಲದಲ್ಲಿ ಲಸಿಕೆ ನೀಡುವಲ್ಲಿ ಈ ಕೇಂದ್ರ ಸಹಕಾರಿ ಆಗಿತ್ತು.

ಬಾಡಿಗೆ ಕಟ್ಟಡದಲ್ಲಿ ಇಲ್ಲ ಅವಕಾಶ

ಆರೋಗ್ಯ ಕೇಂದ್ರಕ್ಕೆ ಬಾಡಿಗೆ ರೂಪದಲ್ಲಿ ಕಟ್ಟಡ ನೀಡುವ ವ್ಯವಸ್ಥೆ ಇಲ್ಲ. ಹೀಗಾಗಿ ಯಾವುದಾದರೂ ಸರಕಾರಿ ಕಟ್ಟಡವೇ ಆಗಬೇಕಿದೆ. ಸರಕಾರಿ ಕಟ್ಟಡ ಇದ್ದರೆ ಮಾತ್ರ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾಲೂಕು ಸರಕಾರಿ ಆಸ್ಪತ್ರೆಯಿಂದ ಕನಿಷ್ಠ 1 ಕಿ.ಮೀ ದೂರದಲ್ಲಿ ಕಟ್ಟಡ ದೊರೆತರೆ ಉತ್ತಮ ಎನ್ನು ವುದು ಆರೋಗ್ಯ ಇಲಾಖೆಯ ಅಭಿಮತ.

3 ಕಡೆ ಸ್ಥಳ ಪರಿಶೀಲನೆ

ಈಗಾಗಲೇ ಮೂರು ಕಡೆಗಳಲ್ಲಿ ಕಟ್ಟಡ ಪರಿಶೀಲನೆ ಮಾಡಲಾಗಿದೆ. ಸಿಂಗಾಣಿ, ಫ್ಲವರ್‌ ಮಾರ್ಕೆಟ್‌ ಬಳಿ ನೋಡಿರುವ ಕಟ್ಟಡ ಸೂಕ್ತವಾಗಿಲ್ಲ ಎಂದು ಆರೋಗ್ಯ ಇಲಾಖೆ ಅಭಿಪ್ರಾಯ ಪಟ್ಟಿದೆ. ಶಕ್ತಿನಗರ, ಬೆದ್ರಾಳದಲ್ಲಿ ಪರಿಶೀಲನೆ ಬಾಕಿ ಇದೆ. ಕಟ್ಟಡ ನೀಡುವಂತೆ ತಾ.ಪಂ. ಸಾಮಾನ್ಯ ಸಭೆಯಲ್ಲಿಯು ಬೇಡಿಕೆ ವ್ಯಕ್ತವಾಗಿತ್ತು. ತುರ್ತಾಗಿ ಬೇರೆ ಕಟ್ಟಡ ಒದಗಿಸುವುದು ಕಷ್ಟ. ಆದರೂ ಕಟ್ಟಡಕ್ಕಾಗಿ ನಗರಸಭೆಗೆ ಪತ್ರ ಬರೆಯುವಂತೆ ಇಒ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಗೆ ನೀಡಲು ಸೂಚನೆ

ಹಾಲಿ ಕಾರ್ಯ ನಿರ್ವಹಿಸುತ್ತಿರುವ ಕಟ್ಟಡವನ್ನು ಶಿಕ್ಷಣ ಇಲಾಖೆಗೆ ಬಿಟ್ಟು ಕೊಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಸಹಾಯಕ ಕಮಿಷನರ್‌ ಮೂಲಕ ಈ ಬೇಡಿಕೆ ಸಲ್ಲಿಕೆ ಆಗಿದೆ. ಬಿಇಒ ಕಚೇರಿ ದುಸ್ಥಿತಿಯಲ್ಲಿದ್ದು ಹೀಗಾಗಿ ಇಲಾಖೆಗೆ ಸೇರಿದ ಕಟ್ಟಡವನ್ನು ಒದಗಿಸಬೇಕು ಎನ್ನುವ ಬೇಡಿಕೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ಆರೋಗ್ಯ ಕೇಂದ್ರಕ್ಕೆ ಸಂಕಷ್ಟ ಎದುರಾಗಿದೆ.

ಜಾಗ ಪರಿಶೀಲನೆ: ನೆಲ್ಲಿಕಟ್ಟೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಶಿಕ್ಷಣ ಇಲಾಖೆಗೆ ಬಿಟ್ಟು ಕೊಡುವಂತೆ ಬಿಇಒ ಕಚೇರಿಯಿಂದ ಪತ್ರ ಬಂದಿದೆ. ಹಾಗಾಗಿ ಬದಲಿ ವ್ಯವಸ್ಥೆ ಆಗಬೇಕಿದ್ದು ಮೂರು ಕಡೆ ಜಾಗ ಪರಿಶೀಲನೆಯ ಹಂತದಲ್ಲಿ ಇದೆ. –ಡಾ| ದೀಪಕ್‌ ರೈ, ಆರೋಗ್ಯಾಧಿಕಾರಿ, ಪುತ್ತೂರು ತಾಲೂಕು.

ಮನವಿ ಮಾಡಲಾಗಿದೆ: ಶಾಲಾ ಕಟ್ಟಡವನ್ನು ತುರ್ತಾಗಿ ಬಿಟ್ಟು ಕೊಡಬೇಕು ಎಂದು ಹೇಳಿಲ್ಲ. ಆದರೆ ಈಗ ಕಟ್ಟಡದ ಅಗತ್ಯ ಇದ್ದು ಪತ್ರ ಮೂಲಕ ಮನವಿ ಮಾಡಲಾಗಿದೆ. -ಲೋಕೇಶ್‌ ಎಸ್‌.ಆರ್‌., ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.