ಬಿಹಾರ: ತೇಜಸ್ವಿ ಯಾದವ್ ನೇತೃತ್ವದ ಆರ್ ಜೆಡಿ ಮುಖಂಡರ ನಿವಾಸದ ಮೇಲೆ ಸಿಬಿಐ ದಾಳಿ
ಎರಡು ವಾರಗಳ ಹಿಂದೆ ನಿತೀಶ್ ಕುಮಾರ್ ಬಿಜೆಪಿ ಮೈತ್ರಿಯನ್ನು ಕೈಬಿಟ್ಟು, ಆರ್ ಜೆಡಿ ಜೊತೆ ಕೈಜೋಡಿಸಿತ್ತು.
Team Udayavani, Aug 24, 2022, 10:30 AM IST
ಪಾಟ್ನಾ: ಯುಪಿಎ-1 ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದ ಇಬ್ಬರು ಹಿರಿಯ ಮುಖಂಡರ ಮನೆ ಮೇಲೆ ಸಿಬಿಐ ಬುಧವಾರ (ಆಗಸ್ಟ್ 24) ದಾಳಿ ನಡೆಸಿದೆ.
ಇದನ್ನೂ ಓದಿ:ಕಟೀಲು ಮೇಳಗಳಿಂದಲೂ ಇನ್ನು ಕಾಲಮಿತಿ ಯಕ್ಷಗಾನ : ಆಡಳಿತ ಮಂಡಳಿ ನಿರ್ಣಯ
ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವ ದಿನದಂದೇ ಸಿಬಿಐ ಈ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ. ಎರಡು ವಾರಗಳ ಹಿಂದೆ ನಿತೀಶ್ ಕುಮಾರ್ ಬಿಜೆಪಿ ಮೈತ್ರಿಯನ್ನು ಕೈಬಿಟ್ಟು, ಆರ್ ಜೆಡಿ ಜೊತೆ ಕೈಜೋಡಿಸಿತ್ತು.
ಆರ್ ಜೆಡಿ ರಾಜ್ಯಸಭಾ ಸದಸ್ಯ ಅಹ್ಮದ್ ಅಶ್ಫಾಕ್ ಕರೀಂ ಮತ್ತು ಎಂಎಲ್ ಸಿ ಸುನೀಲ್ ಸಿಂಗ್ ನಿವಾಸದ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
“ಇದೊಂದು ಉದ್ದೇಶಪೂರ್ವಕ ದಾಳಿಯಾಗಿದೆ. ಸಿಬಿಐ ದಾಳಿಯ ಹೆದರಿಕೆಯಿಂದ ಆರ್ ಜೆಡಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವಿಶ್ವಾಸದಿಂದ ಈ ರೀತಿ ನಡೆದುಕೊಳ್ಳುತ್ತಿರುವುದಾಗಿ ಸುನೀಲ್ ಸಿಂಗ್” ಸುದ್ದಿಗಾರರ ಜತೆ ಮಾತನಾಡುತ್ತ ಆರೋಪಿಸಿದ್ದಾರೆ.
“ಬಿಹಾರದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಸಿಟ್ಟಿನ ಪರಿಣಾಮ ಸಿಬಿಐ ಮತ್ತು ಇತರ ಏಜೆನ್ಸಿಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದೆ” ಎಂದು ಮಂಗಳವಾರ ರಾತ್ರಿ ಆರ್ ಜೆಡಿ ವಕ್ತಾರ ಟ್ವೀಟ್ ಮಾಡಿ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು