ಕೆಪಿಟಿ, ನಂತೂರು: ವಾಹನ ಮೇಲ್ಸೆತುವೆ; ಕಾಮಗಾರಿಗೆ ಶೀಘ್ರ ಚಾಲನೆ


Team Udayavani, Aug 24, 2022, 3:10 PM IST

5

ಮಹಾನಗರ: ಮಂಗಳೂರು ನಗರದಲ್ಲಿ ತೀವ್ರ ವಾಹನ ದಟ್ಟನೆ ಎದುರಿಸುತ್ತಿರುವ ಕೆಪಿಟಿ ಹಾಗೂ ನಂತೂರುಗಳಲ್ಲಿ ರಾಷ್ಟೀಯ ಹೆದ್ದಾರಿ 66 ರಲ್ಲಿ ವಾಹನ ಮೇಲ್ಸೇತುವೆ ( ವೆಹಿಕಲ್‌ ಒವರ್‌ಪಾಸ್‌-ವಿಒಪಿ) ನಿರ್ಮಾಣವಾಗಲಿದ್ದು ಶೀಘ್ರ ಯೋಜನೆ ಕಾರ್ಯಾನುಷ್ಠಾನಕ್ಕೆ ಬರಲಿದೆ.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜರಗಿದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಅವರು ಕೆಪಿಟಿಯಲ್ಲಿ 25 ಕೋರೂ. ವೆಚ್ಚದಲ್ಲಿ ವಿಒಪಿ ನಿರ್ಮಾಣಗೊಳ್ಳಲಿದ್ದು ಈಗಾಗಲೇ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಮಳೆ ನಿಂತ ಕೂಡಲೇ ಮುಂದಿನ ತಿಂಗಳು ಕಾಮಗಾರಿ ಪ್ರಾರಂಭವಾಗಲಿದೆ. ವಿಒಪಿ ರಾಷ್ಟ್ರೀಯ ಹೆದ್ದಾರಿ ಮೇಲು ಗಡೆಯಿಂದ ಸಾಗಲಿದ್ದು ಸಕೀìಟ್‌ ಹೌಸ್‌ನಿಂದ ವಿಮಾನ ನಿಲ್ದಾಣ ರಸ್ತೆಗೆ ನಿರ್ಮಾಣಗೊಳ್ಳಲಿದೆ ಎಂದರು.

ನಂತೂರಿನಲ್ಲೂ 22 ಕೋ.ರೂ. ವೆಚ್ಚದಲ್ಲಿ ವಿಒಪಿ ನಿರ್ಮಾಣ ಯೋಜನೆ ಸಿದ್ಧಗೊಂಡಿದ್ದು ಒಂದು ತಿಂಗಳೊಳಗೆ ಟೆಂಡರ್‌ ಪ್ರಕ್ರಿಯೆ ನಡೆಯುವ ನಿರೀಕ್ಷೆ ಇದೆ. ಟೆಂಡರ್‌ ಪ್ರಕ್ರಿಯೆ ಮುಗಿದ ಕೂಡಲೇ ಇಲ್ಲೂ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದವರು ವಿವರಿಸಿದರು.

ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಾಣವಾಗಲಿರುವ ಸೆಂಟ್ರಲ್‌ ಮಾರುಕಟ್ಟೆ ಕಾಮಗಾರಿಗೆ ಮಳೆ ನಿಂತ ಬಳಿಕ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌ ಹೇಳಿದರು.

ಹಂಪನಕಟ್ಟೆಯಲ್ಲಿ ಬಹು ಅಂತಸ್ತು ಕಾರು ಪಾರ್ಕಿಂಗ್‌ ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು ಇದಕ್ಕೆ ವೇಗ ನೀಡುವಂತೆ ಶಾಸಕ ವೇದವ್ಯಾಸ ಕಾಮತ್‌ ಹೇಳಿದರು.

ಮಂಗಳೂರು ತಾಲೂಕಿನ ತೆಂಕ ಎಡಪದವು ಬ್ರಿಂಡೇಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಣ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯವನ್ನು ನಿರ್ವಹಿಸುವ ಎಂಆರ್‌ ಎಫ್‌ ಘಟಕ ನಿರ್ಮಾಣವನ್ನು ತ್ವರಿತ ಗೊಳಿಸಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಹೇಳಿದರು.

ನಿರ್ಮಾಣ ಕಾಮಗಾರಿಯನ್ನು ಸೆ.15 ರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿ.ಪಂ.ಸಿಇಒ ಡಾ| ಕುಮಾರ್‌ ತಿಳಿಸಿದರು.

ಸ್ಮಾರ್ಟ್‌ಸಿಟಿಯಡಿ ಕೈಗೆತ್ತಿಕೊಂಡಿ ರುವ 58 ಯೋಜನೆಗಳಲ್ಲಿ 23 ಪೂರ್ಣಗೊಂಡಿದೆ. 35 ಕಾಮಗಾರಿಗಳು ಪ್ರಗತಿಯಲ್ಲಿವೆ. ಒಟ್ಟಾರೆಯಾಗಿ ಶೇ. 60ರಷ್ಟು ಕಾಮಗಾರಿಗಳು ಪೂರ್ಣವಾಗಿವೆ ಎಂದು ಅಧಿಕಾರಿಗಳು ವಿವರಿಸಿದರು. ಕಾಮಗಾರಿಗಳ ವಿವರ ಹಾಗೂ ಪಟ್ಟಿ ನೀಡಿದರೆ ಅದನ್ನು ಪರಿಶೀಲಿಸಿ ಶೇ.60ಕ್ಕಿಂತ ಜಾಸ್ತಿ ಕಾಮಗಾರಿಗಳು ಪೂರ್ಣಗೊಂಡಿದ್ದರೆ ಅವುಗಳನ್ನು ಪ್ರಧಾನ ಮಂತ್ರಿ ನಗರಕ್ಕೆ ಭೇಟಿ ನೀಡುವ ಸಂದರ್ಭ ಸಾಧ್ಯವಾದಲ್ಲಿ ಅವರಿಂದ ಉದ್ಘಾಟನೆ ಮಾಡಲು ಕೋರಿಕೊಳ್ಳಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಮೇಯರ್‌ ಪ್ರೇಮಾನಂದ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್‌ ಮೋಹನ್‌, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

ಜಪ್ಪು ಮಹಾಕಾಳಿ ಪಡ್ಪು

ಮೇಲ್ಸೇತುವೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಾಣವಾಗಲಿರುವ ಜಪ್ಪು ಮಹಾಕಾಳಿ ಪಸ್ಪ ಮೇಲ್ಸೇತುವೆ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ವೇದವ್ಯಾಸ ಕಾಮತ್‌ ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ನಳಿನ್‌ ಕುಮಾರ್‌ ಅವರು ಕಾಮಗಾರಿಯ ವಿನ್ಯಾಸ ಮಾಡುವಾಗ ಸಮರ್ಪಕವಾಗಿ ಮಾಡಬೇಕು. ಪಡೀಲ್‌ ಹಾಗೂ ಪಂಪ್‌ವೆಲ್‌ನಲ್ಲಿ ಪ್ರಸ್ತುತ ಮಳೆಗಾಲದಲ್ಲಿ ನೀರು ನಿಂತು ಆಗುತ್ತಿರುವ ಸಮಸ್ಯೆ ಇಲ್ಲಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಈ ಮೇಲ್ಸೇತುವೆಯಿಂದ ನೇತ್ರಾವತಿ ನದಿಗೆ ಸುಮಾರು 800 ಮೀಟರ್‌ನಲ್ಲಿ ಒಳಚರಂಡಿ ನಿರ್ಮಿಸುವ ಯೋಜನೆ ಇದೆ. ಇದರಿಂದ ಸೇತುವೆಯಿಂದ ಕೆಳಭಾಗದಲ್ಲಿ ನೀರು ನಿಲ್ಲುವುದನ್ನು ತಡೆಯಬಹುದು ಎಂದು ಸ್ಮಾರ್ಟ್‌ ಸಿಟಿ ಯೋಜನೆಯ ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.