ಕಮಿಷನ್‌ ಆರೋಪ ಬಗ್ಗೆ ದೂರು ನೀಡಲಿ, ತನಿಖೆ ಆಗಲಿ


Team Udayavani, Aug 25, 2022, 6:00 AM IST

ಕಮಿಷನ್‌ ಆರೋಪ ಬಗ್ಗೆ ದೂರು ನೀಡಲಿ, ತನಿಖೆ ಆಗಲಿ

ರಾಜ್ಯದಲ್ಲಿ ಗುತ್ತಿಗೆದಾರರು ತಾವು ಮಾಡಿದ ಕಾಮಗಾರಿ ಬಿಲ್‌ ಪಾವತಿಗೆ ಶೇ.40 ಕಮಿಷನ್‌ ಕೊಡಬೇಕಿದೆ ಎಂಬ ಆರೋಪ ಕಳೆದ ಎರಡು ವರ್ಷಗಳಿಂದಲೂ ಕೇಳಿಬರುತ್ತಿದೆ. ಇದೊಂದು ರೀತಿಯಲ್ಲಿ ತೋಳ ಬಂತು ತೋಳ ಕಥೆಯಂತಾಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಖುದ್ದು ಪ್ರಧಾನಿ ನರೇಂದ್ರ­ಮೋದಿ ಅವರಿಗೆ ಪತ್ರ ಬರೆದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಶೇ.40ರಷ್ಟು ಇದ್ದ ಕಮಿಷನ್‌ ಬೇಡಿಕೆ ಶೇ.50ಕ್ಕೆ ಹೆಚ್ಚಳವಾಗಿದೆ ಎಂಬುದು ಗುತ್ತಿಗೆದಾರರ ಆರೋಪ. ಇದರಲ್ಲಿ ಎಷ್ಟು ಹುರುಳಿದೆ, ಎಷ್ಟು ಸುಳ್ಳು ಎನ್ನುವುದನ್ನು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಇದೊಂದು ವೃಥಾ ರಾಜಕೀಯದ ಆರೋಪ-ಪ್ರತ್ಯಾರೋಪದ ರೂಪ ಪಡೆಯುತ್ತಿದೆ. ಇದಕ್ಕೆ ಪೂರಕವಾಗಿ ಗುತ್ತಿಗೆದಾರರ ಸಂಘದ ನಿಯೋಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಹೊಸ ರಾಜಕೀಯ ನಾಟಕಕ್ಕೆ ಕಾರಣ­ವಾಗಿದೆ. ಆದರೆ ಸರಕಾರ ಇದಕ್ಕೆ ತಾರ್ಕಿಕ ಅಂತ್ಯ ಹಾಡುವ ಕೆಲಸಕ್ಕೆ ಮುಂದಾಗಬೇಕಾಗಿದೆ.

ಸಚಿವ ಮುನಿರತ್ನ ಅವರ ಹೆಸರು ಬಹಿರಂಗವಾಗಿ ಪ್ರಸ್ತಾಪಿಸಿದ್ದು, ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ, ಇಲ್ಲದಿದ್ದರೆ ಮೂರು ವರ್ಷದ ಹಿಂದಿನ ಕಾಮಗಾರಿ ಪರಿಶೀಲನೆ ಮಾಡುವ ಬೆದರಿಕೆ ಹಾಕಲಾಗು­ತ್ತಿದೆ ಎಂಬ ಗಂಭೀರ ಆರೋಪವನ್ನು ಗುತ್ತಿಗೆದಾರರ ಸಂಘದವರು ಮಾಡಿದ್ದಾರೆ. ಇಷ್ಟಾದರೂ ಸರಕಾರ ದಾಖಲೆ ಕೊಡಲಿ ಎಂದು ಕೇಳಿ ಸುಮ್ಮನಾದರೆ ಇದಕ್ಕೆ ಅರ್ಥ ಇರುವುದಿಲ್ಲ. ಸರಕಾರಕ್ಕೂ ಕೆಟ್ಟ ಹೆಸರು.

ಒಂದು ವರ್ಷದಿಂದ ಆರೋಪ ಕೇಳಿಬಂದರೂ ಯಾವುದೇ ರೀತಿಯ ತನಿಖೆ ಅಥವಾ ಲೋಕಾಯುಕ್ತಕ್ಕೆ ಪ್ರಕರಣ ವಹಿಸಿಲ್ಲ. ಗುತ್ತಿಗೆದಾರರೂ ಸಹ ಲೋಕಾಯುಕ್ತಕ್ಕೆ ದೂರು ನೀಡಲು ಅವಕಾಶ ಇತ್ತು. ಈ ಬೆಳವಣಿಗೆ ಸಾರ್ವ­ಜನಿಕ ವಲಯದಲ್ಲೂ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಇದು ಬರೀ ರಾಜಕೀಯ ಆರೋಪವಾಗಿದೆಯೇ ಎನ್ನುವ ಸಂಶಯ ಸಹಜವೇ. ಸರಕಾರ ಮೊದಲು ಸಾರ್ವಜನಿಕ ವಲಯದಲ್ಲಿ ಇರುವ ಅನು­ಮಾನ ದೂರ ಮಾಡಬೇಕಾಗಿದೆ. ಇದು ಸರಕಾರದ ಜವಾಬ್ದಾರಿಯೂ ಹೌದು.

ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನೇರವಾಗಿ ಪ್ರಧಾನಿಗೆ ಪತ್ರ ಬರೆಯುವುದು. ಬಹಿರಂಗವಾಗಿ ಕಮಿಷನ್‌ಗೆ ಒತ್ತಾಯ ಮಾಡುತ್ತಿದ್ದರೂ ಅದನ್ನು ಹಗುರವಾಗಿ ಬಿಟ್ಟುಬಿಡುವುದು ಯಾವುದೇ ಒಂದು ವ್ಯವಸ್ಥೆಗೆ ಶೋಭೆ ತರುವುದಿಲ್ಲ. ತತ್‌ಕ್ಷಣ ಈ ಕುರಿತು ತನಿಖೆ ನಡೆಸಿ ಯಾರೇ ತಪ್ಪಿತಸ್ಥರಿ­ದ್ದರೂ ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರೇ ಯಾವುದೇ ಸತ್ಯಾಂಶ ಇಲ್ಲದೆ ಆರೋಪ ಮಾಡುತ್ತಿದ್ದರೆ ಅವರ ಮೇಲೆ ಕ್ರಮ ಆಗಬೇಕು. ಅದು ಬಿಟ್ಟು ನಿರಂತರವಾಗಿ ಆರೋಪ ಮಾಡುತ್ತಿದ್ದರೂ ಮೌನ ವಹಿಸು ವುದು, ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸುಮ್ಮನಾಗುವುದು ಸರಿಯಲ್ಲ.
ಕೆಂಪಣ್ಣ ಅವರು ಇದೇ ಮೊದಲ ಬಾರಿಗೆ ಆರೋಪ ಮಾಡುತ್ತಿಲ್ಲ. ಹಿಂದೆಯೂ ಮಾಡಿದ್ದರು, ಪ್ರಧಾನಿಯವರೆಗೂ ಪತ್ರವೂ ಬರೆದು ಮುಖ್ಯಮಂತ್ರಿಯವರನ್ನೂ ಭೇಟಿ ಮಾಡಿದ್ದರು.

ಇದೀಗ ವಿಪಕ್ಷ ನಾಯಕರನ್ನು ಭೇಟಿ ಮಾಡಿದ್ದಾರೆ. ತಮಗಾಗುತ್ತಿರುವ ಸಮಸ್ಯೆ ಹೇಳಿಕೊಂಡಿದ್ದಾರೆ. ಅವರು ಲೋಕಾಯುಕ್ತದಂಥ ಅಧಿಕೃತ ತನಿಖಾ ಸಂಸ್ಥೆಗೆ ದೂರು ನೀಡುವ ಧೈರ್ಯ ಮಾಡಲಿ. ಸರಕಾರವೂ ಈ ವಿಚಾರದಲ್ಲಿ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು. ಇದಕ್ಕೆ ಅಂತಿಮ ತೆರೆ ಎಳೆಯಲು ಮುಂದಾಗಬೇಕು. ಇಲ್ಲದಿದ್ದರೆ ಸಂಶಯದ ತೂಗುಗತ್ತಿ ನೇತಾಡುತ್ತಲೇ ಇರುತ್ತದೆ.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.