ಪರೀಕ್ಷಾ ಅಕ್ರಮ ತನಿಖೆಗೆ ಎಬಿವಿಪಿ ಆಗ್ರಹ

ತಿರಂಗಾ ಅಭಿಯಾನ ನಡೆಯುವಾಗ ಕಾಲೇಜಿನ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜಗಳನ್ನು ನೀಡಿಲ್ಲ.

Team Udayavani, Aug 25, 2022, 6:16 PM IST

ಪರೀಕ್ಷಾ ಅಕ್ರಮ ತನಿಖೆಗೆ ಎಬಿವಿಪಿ ಆಗ್ರಹ

ಚಿತ್ರದುರ್ಗ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಹಿಂದಿ, ಉರ್ದು ಮತ್ತು ಸಂಸ್ಕೃತ ವಿಷಯಗಳ ಪರೀಕ್ಷೆ ವೇಳೆ ಅಕ್ರಮ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಎಬಿವಿಪಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಆ. 16ರಂದು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿದ್ದು, ಪರೀಕ್ಷೆ ನಡೆಯುವಾಗಲೇ ತರಗತಿಗಳನ್ನು ನಡೆಸಲಾಗಿದೆ. ಇದು ಗೌಪ್ಯತೆ ಮತ್ತು ಪರೀಕ್ಷೆ ನಿಯಮ ಉಲ್ಲಂಘನೆಯಾಗಿದೆ.

ಕಾಲೇಜಿನ ಪ್ರಾಚಾರ್ಯರು ಪರೀಕ್ಷೆ ಸಮಯದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಿರುವುದರಿಂದ, ವಿದ್ಯಾರ್ಥಿಗಳ ಯೂನಿಫಾರಂ ಹಾಕಿಕೊಂಡು ಬಂದಿರುವುದರಿಂದ ಪರೀಕ್ಷಾ ವಿದ್ಯಾರ್ಥಿಗಳು ಹಾಗೂ ತರಗತಿ ವಿದ್ಯಾರ್ಥಿಗಳು ಯಾರೆಂಬುದು ಗೊತ್ತಾಗಿಲ್ಲ. ಉದ್ದೇಶಪೂರ್ವಕವಾಗಿ ಒಳಸಂಚು ಮಾಡಿ ಪರೀಕ್ಷೆಯಲ್ಲಿ ಅಕ್ರಮವಾಗಿ ಬೇರೆ ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸದರಿ ಕಾಲೇಜಿನಲ್ಲಿ ಅದೇ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುವ ವಿದ್ಯಾರ್ಥಿ ಪರೀಕ್ಷೆ ಬರೆದಿರುತ್ತಾರೆ.

ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಯಾವುದೇ ಕ್ರಮ ಜರುಗಿಸಿಲ್ಲ. ಆದ್ದರಿಂದ ತಕ್ಷಣ ಪ್ರಾಚಾರ್ಯರನ್ನು ಅಮಾನತು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದೇ ಕಾಲೇಜಿನ ಪ್ರಾಚಾರ್ಯರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶಾದ್ಯಂತ ಹರ್‌ ಘರ್‌ ತಿರಂಗಾ ಅಭಿಯಾನ ನಡೆಯುವಾಗ ಕಾಲೇಜಿನ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜಗಳನ್ನು ನೀಡಿಲ್ಲ. ಈ ಮೂಲಕ ರಾಷ್ಟ್ರಭಕ್ತಿಗೆ ಧಕ್ಕೆ ತಂದಿದ್ದಾರೆ. ಕಾಲೇಜಿನಲ್ಲಿ ಆ. 15ರಂದು ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಲ್ಲ.

ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದ ಧ್ವಜಗಳು ಎಲ್ಲಿ ಹೋದವು ಎನ್ನುವ ತನಿಖೆಯೂ ಆಗಬೇಕು. ಈ ಕಾಲೇಜಿನಲ್ಲಿ ತುರ್ತಾಗಿ ಟಿಸಿ ಪಡೆಯಲು 1 ಸಾವಿರ ರೂ. ನೀಡಬೇಕಿದೆ. ಅಂಕಪಟ್ಟಿಗೆ ಪ್ರತ್ಯೇಕವಾಗಿ 200 ರೂ. ಕೊಡಬೇಕು. ಕಾಲೇಜಿನಿಂದ ಕಾಲೇಜಿಗೆ ವರ್ಗಾವಣೆ ಪಡೆಯುವಾಗ ದಾಖಲೆಗಳನ್ನು ನೀಡಲು ಹಣ ಪಡೆಯುತ್ತಿದ್ದಾರೆ. ಕಾಲೇಜು ಅಭಿವೃದ್ಧಿ ಶುಲ್ಕವನ್ನು 800 ರೂ.ಗಳಿಗೆ ಹೆಚ್ಚಿಸಿದ್ದಾರೆ. ಸರ್ಕಾರೇತರ ಕಾಲೇಜು ಅಕೌಂಟ್‌ನಲ್ಲಿ ಮುಂಗಡವಾಗಿ 3 ಲಕ್ಷ ರೂ.ಗಳನ್ನು ಡ್ರಾ ಮಾಡಲಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಉಪನ್ಯಾಸಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಎಬಿವಿಪಿ ಕಾರ್ಯಕರ್ತರಾದ ಆದರ್ಶ್‌,
ಸುದರ್ಶನ ನಾಯಕ, ಪ್ರಜ್ವಲ್‌, ಲಕ್ಷ್ಮೀ, ಗೋಪಿ ಇತರರು ಇದ್ದರು.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.