ಸಿಸಿ ರಸ್ತೆ ಕಾಮಗಾರಿ ಪರಿಶೀಲನೆ
Team Udayavani, Aug 25, 2022, 8:20 PM IST
ತಾಂಬಾ: ರಸ್ತೆಗಳ ಅಭಿವೃದ್ಧಿ, ಚರಂಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ಪ್ರತಿಯೊಂದು ಹಳ್ಳಿಗೆ ಮನೆ ಮನೆಗೆ ನಳ ಜೋಡಣೆ ಮಾಡಿ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಸಿಂದಗಿ ಶಾಸಕ ರಮೇಶ ಭೂಸನೂರ ಹೇಳಿದರು.
ಗ್ರಾಮದ ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಡೆದ ಸಿಸಿ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಹರಿದು ಬರಲಿದೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರಲಿರುವ ಚುನಾವಣೆಯೊಳಗೆ ಮುಗಿಸಲಾಗುವುದು ಎಂದರು.
ಇಂಡಿ, ದೇವರಹಿಪ್ಪರಗಿ ರಸ್ತೆಗೆ 5 ಕೋಟಿ ರೂ. ಮಂಜೂರು ಮಾಡಲಾಗಿದೆ. ತಾಂಬಾದಿಂದ ಬಳಗಾನೂರವರೆಗೆ ಡಾಂಬರಿಕರಣ ಮಾಡಲಾಗುವುದು. ದೊಡ್ಡ ಹಳ್ಳಕ್ಕೆ 5 ಬಾಂದಾರ್ಗಳನ್ನು ನಿರ್ಮಿಸಲಾಗಿದೆ. ಜನರ ಬಹು ದಿನಗಳ ಬೇಡಿಕೆಯಾದ ರುದ್ರಭೂಮಿಗೆ ಹೋಗಲು ಮಿನಿ ಬ್ರಿಡ್ಜ್ ಕಟ್ಟಲಾಗುವುದು ಎಂದರು.
ಬಿಜೆಪಿ ಮುಖಂಡ ಜಿ.ವೈ. ಗೊರನಾಳ ಮಾತನಾಡಿ, ಸಿಂದಗಿ ಕ್ಷೇತ್ರದ ಸಮಗ್ರ ನೀರಾವರಿ ಕನಸನ್ನು ಶಾಸಕ ರಮೇಶ ಭೂಸನೂರ ನನಸು ಮಾಡಲಿದ್ದಾರೆ ಎಂದರು. ಗ್ರಾಪಂ ಅಧ್ಯಕ್ಷ ರಾಜು ಗಂಗನಳ್ಳಿ, ಪ್ರಕಾಶ ಮುಂಜಿ, ಈರಣ್ಣ ಬ್ಯಾಕೋಡ, ನಿಂಗಪ್ಪ ನಿಂಬಾಳ, ಶಂಕರ ಯಳಕೋಟಿ, ಗುರಸಂಗಪ್ಪ ಬಾಗಲಕೋಟ, ಪರಸು ಬರಮಣ್ಣ, ಸಂಜೀವ ಗೋರನಾಳ, ಬೀರಪ್ಪ ಮ್ಯಾಗೇರಿ, ಸಿದ್ದು ಬೂದಿಹಾಳ, ಬಸು ಸರಸಂಬಿ, ರಮೇಶ ಹಿರೇಕುರಬರ, ಅಕಂಡಪ್ಪ ಸಿಂದಗಿ, ಸದಾಶಿವ ಬುಲಬುಲೆ, ಶಿವಲಿಂಗಯ್ಯ ಇರಸಿದ್ದಪ್ಪನಮಠ, ಸಂಗಯ್ಯ ಸ್ಥಾವರಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ