ಹುಬ್ಬಳ್ಳಿ: ಕರ್ತವ್ಯಕ್ಕೆ ತೆರಳಿದ್ದ ಬಿ.ಎಸ್.ಎಫ್ ಯೋಧ ಹೃದಯಘಾತದಿಂದ ನಿಧನ
Team Udayavani, Aug 28, 2022, 12:14 PM IST
ಹುಬ್ಬಳ್ಳಿ: ಕಳೆದ ಐದು ದಿನಗಳ ಹಿಂದೆ ಕರ್ತವ್ಯಕ್ಕೆ ತೆರಳಿದ್ದ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಬಿ.ಎಸ್.ಎಫ್ ಯೋಧ ಗಂಗಾಧರಯ್ಯ ಹಿರೇಮಠ ಅವರು ಕರ್ತವ್ಯದ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಪಶ್ಚಿಮ ಬಂಗಾಳದ ಕುಚ್ ಬಿಹಾರ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆ.27 ರಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಯೋಧ ಗಂಗಾಧರಯ್ಯ ಹಿರೇಮಠ ಅವರ ಮೃತ ದೇಹವನ್ನು ದೇಹಲಿಯಿಂದ ಮೂಲಕ ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಸೇನೆಯ ವಾಹನದ ಮೂಲಕ ಗ್ರಾಮಕ್ಕೆ ಬರುವ ನಿರೀಕ್ಷೆಯಿದೆ. ಇಲ್ಲಿಗೆ ಬರುವುದರೊಳಗೆ ರಾತ್ರಿಯಾಗುವ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಮಸ್ಯೆಯಾಗಬಾರದು ಎನ್ನುವ ಕಾರಣಕ್ಕೆ ಸೋಮವಾರ (ಆ.28) ಬೆಳಿಗ್ಗೆ ಹುಬ್ಬಳ್ಳಿಯಿಂದ ಗ್ರಾಮಕ್ಕೆ ಕರೆದೊಯ್ಯುವ ಇಂಗಿತವನ್ನು ಕುಟುಂಬದ ಸದಸ್ಯರು ವ್ಯಕ್ತಪಡಿಸಿದ್ದಾರೆ.
ರಜೆ ಮೇಲೆ ಆಗಮಿಸಿದ್ದ ಗಂಗಾಧರಯ್ಯ ಅವರು ಮಂಗಳವಾರ (ಆ.23) ರಂದು ಕರ್ತವ್ಯಕ್ಕೆ ತೆರಳಿದ್ದರು. ಇತ್ತೀಚಗಷ್ಟೇ ಮನೆಗೆ ಬಂದು ಹೋಗಿದ್ದ ಯೋಧನ ಅಗಲಿಕೆಯಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕಳೆದ 28 ವರ್ಷಗಳಿಂದ ಸೇವೆಯಲ್ಲಿದ್ದರು. ಇನ್ನೆರಡು ವರ್ಷದಲ್ಲಿ ಸ್ವಯಂ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಗಂಗಾಧರಯ್ಯ ಅವರು ಪತ್ನಿ ಹಾಗೂ ಎಸ್.ಎಸ್.ಎಲ್.ಸಿ ಓದುತ್ತಿರುವ ಪುತ್ರಿಯಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ