ಕೊಟ್ಟಿಗೆಹಾರ: ಅಡ್ಡ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ; ಮೂವರಿಗೆ ಗಾಯ
Team Udayavani, Aug 28, 2022, 12:44 PM IST
ಕೊಟ್ಟಿಗೆಹಾರ: ರಸ್ತೆಯಲ್ಲಿ ಅಡ್ಡ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ಆಟೋವೊಂದು ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ಬಣಕಲ್ ಹೋಬಳಿಯ ದಾಸರಹಳ್ಳಿ ಸಮೀಪ ನಡೆದಿದೆ.
ಕೂಲಿ ಕಾರ್ಮಿಕರಾದ ಪ್ರೇಮ, ಶಾರದ, ಅಪ್ಪಿ ಹಾಗೂ ಆಟೋ ಚಾಲಕ ಶರತ್ ಗಾಯಗೊಂಡಿದ್ದಾರೆ. ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಟೋಗೆ ಅಡ್ಡ ಬಂದ ಭಾರೀ ಗಾತ್ರದ ಕಾಡು ಹಂದಿಯೊಂದು ಏಕಾಏಕಿ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಯತ್ನಸಿದ ಆಟೋ ರಸ್ತೆಯಲ್ಲಿ ಎರಡು ಪಲ್ಟಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!