ಹುಬ್ಬಳ್ಳಿ ಬೆಣ್ಣೆಹಳ್ಳದ ಪ್ರವಾಹ;ಕೊಚ್ಚಿ ಹೋದ ಯುವಕ; ಸಿಲುಕಿಕೊಂಡ ಹಲವರು
Team Udayavani, Aug 29, 2022, 5:52 PM IST
ಹುಬ್ಬಳ್ಳಿ: ತಾಲೂಕಿನ ಇಂಗಳಹಳ್ಳಿ ಗ್ರಾಮದ ಬೆಣ್ಣೆಹಳ್ಳದ ಪ್ರವಾಹದಲ್ಲಿ 32 ಜನ ಸಿಲುಕಿಕೊಂಡಿದ್ದು , ಯುವಕನೊಬ್ಬ ಕೊಚ್ಚಿಕೊಂಡು ಹೋಗಿದ್ದಾನೆ. 20 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ಸುರಕ್ಷಿತವಾಗಿ ಕರೆ ತರುವ ರಕ್ಷಣಾ ಕಾರ್ಯ ಮುಂದುವರೆದಿದೆ.
ಮೇಲ್ಭಾಗದಲ್ಲಿ ರಭಸದ ಮಳೆಯಾಗುತ್ತಿರುವುದರಿಂದ ಇಂಗಳಹಳ್ಳಿ ಗ್ರಾಮದ ಬಳಿ ಬರುವ ಬೆಣ್ಣೆಹಳ್ಳ ತುಂಬಿ ಹರಿಯುತ್ತಿದೆ. ಈ ಸಮಯದಲ್ಲಿ ಕುಸ್ತಿ ಪಂದ್ಯಾವಳಿ ವೀಕ್ಷಣೆಗೆ ಆಗಮಿಸಿದ ನಾಲ್ವರು ಹಳ್ಳ ದಾಟಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಇಂತಹ ಹಳ್ಳ ಬಹಳಷ್ಟು ನೋಡಿದ್ದೇವೆ ಎಂದ ನಾಲ್ವರು ಹಳ್ಳ ದಾಟಲು ಮುಂದಾಗಿದ್ದಾರೆ. ಅದರಲ್ಲಿ ನಾಲ್ವರು ಕೂಡಾ ನೀರಿನಲ್ಲಿ ಆಯ ತಪ್ಪಿದ್ದು ಕೂಡಲೇ ಎಚ್ಚೆತ್ತ ಇಬ್ಬರು ನೀರಿನಿಂದ ಪಾರಾಗಿದ್ದಾರೆ. ಇನ್ನುಳಿದ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದು, ಅದರಲ್ಲಿ ಮತ್ತೊಬ್ಬ ಸ್ವಲ್ಪದೂರ ನೀರಿನಲ್ಲೇ ಹೋಗಿ ಗಿಡದ ಕಂಟೆ ಹಿಡಿದುಕೊಂಡು ಅಲ್ಲಿಂದ ಪಾರಾಗಿದ್ದಾನೆ. ಕೊಚ್ಚಿ ಹೋಗಿರುವವನ ಹುಡುಕಾಟದಲ್ಲಿ ತಾಲೂಕು ಆಡಳಿತ ನಿರತವಾಗಿದೆ.
ಬೆಳಗ್ಗೆ ಕೃಷಿ ಕಾರ್ಯಕ್ಕೆ ತೆರಳಿದ್ದ 28 ಜನರ ತಂಡ ಹಳ್ಳದಲ್ಲಿ ಸಿಲುಕಿಕೊಂಡಿದ್ದು ಈಗಾಗಲೇ 20 ಜನರನ್ನು ರಕ್ಷಣೆ ಮಾಡಿದ್ದಾರೆ. ಇನ್ನುಳಿದವರ ರಕ್ಷಣೆ ಮಾಡಲಾಗುತ್ತಿದೆ.
ಸ್ಥಳದಲ್ಲಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ಗ್ರಾಮೀಣ ಪೊಲೀಸ್ ಠಾಣಾಧಿಕಾರಿ ಗೋಕಾಕ, ಅಗ್ನಿಶಾಮಕ ದಳದ ಸಿಬಂದಿ ಸೇರಿದಂತೆ ಮೊದಲಾದವರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು