ಮಳೆ ಬಂದ್ರೆ ತೀವ್ರ ತೊಂದರೆ: 20ಕ್ಕೂ ಅಧಿಕ ಕುಟುಂಬಗಳ ನೀಗದ ಸಮಸ್ಯೆ


Team Udayavani, Aug 29, 2022, 6:08 PM IST

24-rain

ದೇವದುರ್ಗ: ಸಮೀಪದ ಕಕ್ಕಲದೊಡ್ಡಿ ಗ್ರಾಮದ 20ಕ್ಕೂ ಅಧಿಕ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳಿಗೆ ಮಳೆ ಬಂದರೆ ಕಣ್ಣೀರು ಕಪಾಳಕ್ಕೆ ಬರುತ್ತದೆ. ಇವರ ಮನೆಗಳು ತಗ್ಗು ಪ್ರದೇಶದಲ್ಲಿ ಇರುವ ಹಿನ್ನೆಲೆಯಲ್ಲಿ ಮಳೆ ಬಂದರೆ ಸಾಕು ಮನೆಗಳಿಗೆ ನೀರು ನುಗ್ಗುತ್ತದೆ.

ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಈ ಮನೆಗಳಿಗೆ ನೀರು ನುಗ್ಗಿ ದವಸ ಧ್ಯಾನಗಳು ನೀರು ಪಾಲಾಗಿವೆ. ಇದು ಒಂದೆರಡು ದಿನದ ಕತೆಯಲ್ಲ. ಸುಮಾರು ವರ್ಷಗಳಿಂದ ಇದೇ ಪರಿಸ್ಥಿತಿ ಇದೆ. ಮಳೆ, ಗಾಳಿಗೆ ಜೀವನವೇ ಬೇಸರಗೊಂಡಿರುವ ಕುಟುಂಬಗಳ ಕಣ್ಣೀರ ಕಥೆಯನ್ನು ಕೇಳುವವರೇ ಇಲ್ಲದಂತಾಗಿದೆ. ಅದು ಅಲ್ಲದೇ ಒಂದು ಕುಟುಂಬದಲ್ಲಿ ಮೂರ್‍ನಾಲ್ಕು ಜನರು ವಾಸಿಸುತ್ತಿದ್ದು, ಕಿರಿದಾದ ಮನೆಗಳಿವೆ. ಸಂಬಂಧಿಕರು ಬಂದರೆ ಮಲಗಲು ದೇವಸ್ಥಾನ ಆವರಣ, ಸಮುದಾಯ ಭವನಗಳನ್ನು ಅವಲಂಬಿಸುವಂತಾಗಿದೆ.

ಗ್ರಾಪಂ ಆಡಳಿತ ಮಂಡಳಿ ಈ ಕುಟುಂಬಗಳ ಸಮಸ್ಯೆ ನೀಗಿಸುವಲ್ಲಿ ವಿಫಲವಾಗಿದೆ. ಚುನಾವಣೆ ಬಂದಾಗ ಮೊಸಳೆ ಕಣ್ಣೀರು ಸುರಿಸಿ ಮತ ಪಡೆಯುವ ಚುನಾಯಿತ ಜನಪ್ರತಿನಿಧಿಗಳು ಸೌಲಭ್ಯ ಕಲ್ಪಿಸಲು ನಿರ್ಲಕ್ಷé ತಾಳಿದ ಪರಿಣಾಮ ಹಗಲು ರಾತ್ರಿ ಕಣ್ಣೀರು ಹಾಕುವಂತಾಗಿದೆ.

ಕಣ್ಣೀರಿಟ್ಟ ಮಹಿಳೆ: ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ರಾತ್ರಿ ಜಾಗರಣೆ ಮಾಡುವ ಸ್ಥಿತಿ ಎದುರಾಯಿತು. ಹೊಲ, ಗದ್ದೆಗಳಿಗೆ ಕೆಲಸಕ್ಕೆ ಹೋದಾಗ ಕೂಡಿಟ್ಟ ಎರಡು ಸಾವಿರ ರೂ., ಕಷ್ಟ ಕಾಲಕ್ಕೆ ಆಸರೆ ಆಗುತ್ತದೆ ಎಂದು ನಂಬಿಕೆಯಿಟ್ಟಿದ್ದ ಅರ್ಧ ತೊಲೆ ಬಂಗಾರದ ಕರಳಿ ನೀರು ಪಾಲಾಗಿವೆ. ದವಸಧ್ಯಾನಗಳು ನೀರಿನಲ್ಲಿ ತೇಲಾಡುತ್ತಿದ್ದವು. ಶಾಶ್ವತ ಸೂರು ಕಲ್ಪಿಸಿ ನರಕದಿಂದ ಪಾರು ಮಾಡಿ ಎಂದು ಯಲ್ಲಮ್ಮ ಕೈಮುಗಿದು ನೋವು ತೋಡಿಕೊಂಡರು. ಹರಿಜನ, ಗಿರಿಜನ ಕಲ್ಯಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೋಟ್ಯಂತರ ರೂ. ಅನುದಾನ ಬಳಸಲಾಗುತ್ತಿದೆ. ಅದಷ್ಟೋ ಕುಟುಂಬಗಳು ಯಾವುದೇ ಅಭಿವೃದ್ಧಿ ಕಾಣದೇ ವಂಚಿತಗೊಂಡಿವೆ.

ಸರಕಾರಿ ಜಾಗ ಗೈರಾಣಿ ಭೂಮಿ ಸರ್ವೇ ಮಾಡಿ ಹದ್ದುಬಸ್ತ್ ಮಾಡಲು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆಸರೆ ಯೋಜನೆಯಡಿ ಕಾಯ್ದಿರಿಸುವ ಜಾಗ ಕುರಿತು ಪರಿಶೀಲನೆ ಮಾಡುತ್ತೇನೆ. ಮಳೆ ನೀರು ನುಗ್ಗಿದ ಬಹುತೇಕ ಮಹಿಳೆಯರು ಮನೆಗಳ ಕಟ್ಟಿಕೊಳ್ಳಲು ಜಾಗ ಕೊಡುವಂತೆ ಮನವಿ ಮಾಡಿದ್ದಾರೆ. -ಶ್ರೀನಿವಾಸ ಚಾಪಲ್‌, ತಹಶೀಲ್ದಾರ್‌

ಸುರಿದ ಮಳೆಗೆ ಹಣ, ಬಂಗಾರ ನೀರು ಪಾಲಾಗಿವೆ. ದವಸಧಾನ್ಯ ನೀರಿಗೆ ಹರಿದುಕೊಂಡು ಹೋಗಿವೆ. -ಯಲ್ಲಮ್ಮ, ನೊಂದ ಕಕ್ಕಲದೊಡ್ಡಿ ನಿವಾಸಿ

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.