ದೆಹಲಿಯಲ್ಲಿ ಅತಿ ಹೆಚ್ಚು ಮಾನವ ಕಳ್ಳಸಾಗಣೆ ಪ್ರಕರಣ: ಎನ್‌ಸಿಆರ್‌ಬಿ ಅಧ್ಯಯನ ವರದಿ

2021ರಲ್ಲಿ ಮಾನವ ಕಳ್ಳಸಾಗಣೆಯ ಎಲ್ಲಾ 509 ಜನರನ್ನು ರಕ್ಷಿಸಲಾಗಿದೆ

Team Udayavani, Aug 30, 2022, 5:50 PM IST

14-human-trafficing

ದೆಹಲಿ: ಎಂಟು ಕೇಂದ್ರಾಡಳಿತ ಪ್ರದೇಶಗಳಲ್ಲಿ,  2021 ರಲ್ಲಿ ದೆಹಲಿಯಲ್ಲಿ ಅತಿ ಹೆಚ್ಚು ಮಾನವ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿದ್ದು, 2020 ರಲ್ಲಿ ಪ್ರಕರಣಗಳಲ್ಲಿ ಶೇಕಡಾ 73.5ರಷ್ಟು ಏರಿಕೆಯಾಗಿದೆ ಎಂದು ಎನ್‌ಸಿಆರ್‌ಬಿ ಅಧ್ಯಯನ ವರದಿ ತಿಳಿಸಿದೆ.

ವರದಿಯ  ಪ್ರಕಾರ, ಮಾನವ ಕಳ್ಳಸಾಗಣೆಗೊಳಗಾದವರಲ್ಲಿ ಹೆಚ್ಚಿನವರನ್ನು ಬಲವಂತವಾಗಿ ದುಡಿಸಿಕೊಳ್ಳುತ್ತಿದ್ದು ಅವರಲ್ಲಿ ಕೆಲವರು ಲೈಂಗಿಕ ಶೋಷಣೆ, ಮನೆಯ ಚಾಕರಿ ಮತ್ತು ಸಣ್ಣ ಅಪರಾಧಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಮಕ್ಕಳ ಅಶ್ಲೀಲ ಚಿತ್ರಗಳು, ಭಿಕ್ಷಾಟನೆ, ಅಂಗಾಂಗ ತೆಗೆದು ಮಾರಾಟ ಮಾಡಲು, ಮಾದಕವಸ್ತು ಕಳ್ಳಸಾಗಣೆಗೆ ಇವರನ್ನು ಬಳಸಿಕೊಂಡಿಲ್ಲ ಎಂದು ತಿಳಿಸಿದೆ.  2021ರಲ್ಲಿ ಮಾನವ ಕಳ್ಳಸಾಗಣೆಯ ಎಲ್ಲಾ 509 ಜನರನ್ನು ರಕ್ಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ, 2021 ರಲ್ಲಿ 509 ಜನರನ್ನು ಕಳ್ಳಸಾಗಣೆ ಮಾಡಲಾಗಿದೆ. ಅವರಲ್ಲಿ ಹೆಚ್ಚಿನವರು ಪುರುಷರು ಮತ್ತು 143 ಮಹಿಳೆಯರು.  ದೆಹಲಿಯಲ್ಲಿ ಮಾನವ ಕಳ್ಳಸಾಗಣೆಗೆ ಸಿಲುಕಿದ 437 ಮಂದಿಯಲ್ಲಿ 100 ಹುಡುಗಿಯರು ಸೇರಿದಂತೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ.ಅವರಲ್ಲಿ 43 ಮಹಿಳೆಯರು ಸೇರಿದಂತೆ 72 ವಯಸ್ಕರು ಸೇರಿದ್ದಾರೆ.

ವರದಿ ಪ್ರಕಾರ,  2021 ರಲ್ಲಿ ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ 174 ವ್ಯಕ್ತಿಗಳನ್ನು ಬಂಧಿಸಲಾಗಿದೆ. 13 ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಕೋರ್ಟ್‌ ಯಾರನ್ನೂ ಅಪರಾಧಿ ಅಥವಾ ನಿರಪರಾಧಿ ಎಂದು ಹೇಳಿಲ್ಲ.

ಇದನ್ನೂ ಓದಿ:ಬೆಕ್ಕಿನ ಕಿರುಚಾಟಕ್ಕೆ ಅಮಾಯಕ ಬಲಿ…ಏನಿದು ವಿಚಿತ್ರ ಘಟನೆ?

2020 ರಲ್ಲಿ ಇಡೀ ರಾಷ್ಟ್ರವು  ಕೋವಿಡ್‌ನಿಂದಾಗಿ ಲಾಕ್‌ಡೌನ್‌ ಆಗಿತ್ತು.  ಲಾಕ್‌ಡೌನ್‌ ಬಳಿಕ ಜನರ ಸಂಚಾರವು ಪುನರಾರಂಭಗೊಂಡಾಗ ನಗರದಲ್ಲಿ  ಮಾನವ ಕಳ್ಳಸಾಗಣೆ ಪ್ರಕರಣ ಹೆಚ್ಚಳವಾಯಿತು. ವಲಸೆ ಹೋಗುವುದು ಕೂಡ ಒಂದು ಪ್ರಮುಖ ಕಾರಣವಾಗಿದೆ. ದೆಹಲಿ ಉದ್ಯೋಗಾವಕಾಶಗಳ ಕೇಂದ್ರವಾಗಿರುವುದರಿಂದ, ಇಲ್ಲಿ  ಯುವಕರು ಮತ್ತು ನಿರುದ್ಯೋಗಿಗಳಿಗೆ ಲಾಭದಾಯಕ ಉದ್ಯೋಗಗಳನ್ನು ನೀಡುತ್ತವೆ ಮತ್ತು ಉತ್ತಮ ಸಂಬಳದ ಆಮಿಷ ಒಡ್ಡುತ್ತಾರೆ. ಈ ಆಮಿಷಕ್ಕೊಳಗಾದವರು ಕಳ್ಳಸಾಗಣೆಯ ಬಲಿಪಶುಗಳಾಗುತ್ತಿದ್ದಾರೆ.  ಕೆಲವೊಂದು ಬಾರಿ ಅವರಿಗೆ ಸಂಬಳ ನೀಡುವುದಿಲ್ಲ ಅಥವಾ ಭರವಸೆ ನೀಡಿದ್ದಕ್ಕಿಂತ ಕಡಿಮೆ ಪಾವತಿಸಲಾಗುತ್ತದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.