ಭೂಗತ ಪಾತಕಿ ದಾವೂದ್ ಬಗ್ಗೆ ಮಾಹಿತಿ ನೀಡಿದ್ರೆ…25 ಲಕ್ಷ ಬಹುಮಾನ: ಎನ್ ಐಎ ಘೋಷಣೆ
ದಾವೂದ್ ಇಬ್ರಾಹಿಂ 1993ರಲ್ಲಿ ವಾಣಿಜ್ಯ ನಗರಿ ಮುಂಬೈನ ವಿವಿಧೆಡೆ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ರೂವಾರಿಯಾಗಿದ್ದಾನೆ.
Team Udayavani, Sep 1, 2022, 11:56 AM IST
ನವದೆಹಲಿ: ಮುಂಬೈ ಬಾಂಬ್ ಸ್ಫೋಟದ ಪ್ರಮುಖ ರೂವಾರಿ, ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಭಾರತದ ಭಯೋತ್ಪಾದಕ ನಿಗ್ರಹ ದಳ ಘೋಷಿಸಿದ್ದು, ಮುಂಬೈ ಸ್ಫೋಟ ರೂವಾರಿಗಳ ನೂತನ ಫೋಟೊಗಳನ್ನು ಬಿಡುಗಡೆಗೊಳಿಸಿದೆ.
ಇದನ್ನೂ ಓದಿ:ಇನ್ಮುಂದೆ ನಿಮಗೆ ನೀವೇ ವಾಟ್ಸಪ್ ಮೆಸೇಜ್ ಕಳುಹಿಸಬಹುದು: ಇಲ್ಲಿದೆ ನೋಡಿ ಹೊಸ ಫೀಚರ್ ನ ಮಾಹಿತಿ
ಅದೇ ರೀತಿ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ ಐಎ), ದಾವೂದ್ ಇಬ್ರಾಹಿಂ ಗ್ಯಾಂಗ್ ನ ಕಿಂಗ್ ಪಿನ್ ಛೋಟಾ ಶಕೀಲ್ ಹಾಗೂ ಇತರ ಉಗ್ರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ, ಟೈಗರ್ ಮೆಮೊನ್ ವಿರುದ್ಧ ತಲಾ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಇತರ ನಟೋರಿಯಸ್ ಉಗ್ರರು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಎ ತೊಯ್ಬಾ, ಜೈಶ್ ಎ ಮೊಹಮ್ಮದ್, ಅಲ್ ಖೈದಾ ಜೊತೆ ಕೈಜೋಡಿಸುವ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ ಐಎ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ದಾವೂದ್ ಇಬ್ರಾಹಿಂ 1993ರಲ್ಲಿ ವಾಣಿಜ್ಯ ನಗರಿ ಮುಂಬೈನ ವಿವಿಧೆಡೆ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ರೂವಾರಿಯಾಗಿದ್ದಾನೆ. ಅಂದು ಸಂಭವಿಸಿದ್ದ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆ ಬಳಿಕ ದಾವೂದ್ ಇಬ್ರಾಹಿಂನನ್ನು ಅಂತರಾಷ್ಟ್ರೀಯ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ