ಯಾರೋ ಏನೋ ಹೇಳಿದರೆಂದು ಬೆಂಗಳೂರು ಬ್ರ್ಯಾಂಡ್ ಹಾಳಾಗಲ್ಲ: ಟ್ವೀಟ್ ಉಲ್ಲೇಖಿಸಿ ಅಶೋಕ್ ಹೇಳಿಕೆ
Team Udayavani, Sep 1, 2022, 12:48 PM IST
ಬೆಂಗಳೂರು: ಬೆಂಗಳೂರು ಬ್ರ್ಯಾಂಡ್ ಹಾಳಾಗುತ್ತಿರುವ ಬಗ್ಗೆ ಮೋಹನದಾಸ್ ಪೈ ಮಾಡಿರುವ ಟ್ವೀಟನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ. ಬೆಂಗಳೂರು ಸಾಕಷ್ಟು ಬೆಳೆದಿದ್ದು ಹಲವು ರಾಜ್ಯದಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಯಾರೋ ಎನೋ ಹೇಳಿದರೆಂದು ಬೆಂಗಳೂರು ಬ್ಯ್ರಾಂಡ್ ಹಾಳಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಮಾತ್ರ ಮಳೆಯಾಗಿಲ್ಲ. ಅಮೆರಿಕ, ಪಾಕಿಸ್ತಾನ ಸೇರಿ ಎಲ್ಲಾ ಕಡೆ ಮಳೆಯಾಗಿದೆ. ಮಳೆಯನ್ನು ತಡೆಯಲು ಯಾರಿಂದಲೂ ಆಗುವುದಿಲ್ಲ. ಮಳೆ ನೀರು ಸರಾಗವಾಗಿ ಹರಿಯಲು ಕ್ರಮ ತಗೆದುಕೊಳ್ಳಬಹುದು. ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತದೆ ಎಂದರು.
ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ವಾಡಿಕೆಗಿಂತ ಹೆಚ್ಚು ಮಳೆ ಬಂದಿದ್ದರಿಂದ ಸಮಸ್ಯೆಯಾಗಿದೆ. ಬೆಂಗಳೂರಿನ ಕೆಲ ಭಾಗದಲ್ಲಿ ಮಳೆ ಹಾನಿಯಾಗಿದ್ದಾಗ ಸಿಎಮ ಬೊಮ್ಮಾಯಿ ಭೇಟಿ ನೀಡಿದ್ದರು. ಆ ಭಾಗದಲ್ಲಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಈ ಸಲ ಮಳೆಯಿಂದಾಗಿ ಬೊಮ್ಮನಹಳ್ಳಿ, ಮಹದೇವಪುರ ಭಾಗದಲ್ಲಿ ಹಾನಿಯಾಗಿದೆ. ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ಇದನ್ನೂ ಓದಿ:ಸಚಿವ ಜೈಶಂಕರ್ ಭೇಟಿ; ಅಬುಧಾಬಿಯಲ್ಲಿ ನಿರ್ಮಾಣವಾಗ್ತಿದೆ ಮೊದಲ ಹಿಂದೂ ದೇವಾಲಯ
ಬೆಂಗಳೂರು ಹೊರತುಪಡಿಸಿ ಜಿಲ್ಲೆಗಳಲ್ಲಾದ ಹಾನಿ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾನಿಯಾಗಿರುವ ಮನೆಗಳಿಗೆ ಪರಿಹಾರ ಕೊಡಲಾಗುತ್ತಿದೆ ನಿರಾಶ್ರಿತರಿಗೆ 15 ದಿನಗಳ ಆಹಾರ ಕಿಟ್ ಸರ್ಕಾರ ನೀಡುತ್ತಿದೆ ಎಂದು ಅಶೋಕ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ