ಪ್ರಧಾನಿ ಮೋದಿ ಕೇರಳ ಪ್ರವಾಸ; ಐಎನ್ಎಸ್ ವಿಕ್ರಾಂತ್ ನಾಡಿಗೆ ಸಮರ್ಪಣೆ
ಕೇರಳದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮಂಗಳೂರಿಗೆ
Team Udayavani, Sep 1, 2022, 2:37 PM IST
ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ಕೇರಳದಲ್ಲಿ ಎರಡು ದಿನಗಳ ಪ್ರವಾಸ ಮಾಡಲಿದ್ದಾರೆ. ಗುರುವಾರ ಸಂಜೆ ಕೇರಳದ ಕೊಚ್ಚಿ ವಿಮಾನ ನಿಲ್ದಾಣದ ಬಳಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ರಾತ್ರಿ ಕೇರಳ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಕುರಿತಾಗಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆ ಭಾರತ ನಿರ್ಮಿಸಿದ ಐಎನ್ಎಸ್ ವಿಕ್ರಾಂತ್ ಯುದ್ದ ಹಡಗನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಕಾಲಡಿ ಆದಿ ಶಂಕರ ಜನ್ಮಸ್ಥಳಕ್ಕೂ ಭೇಟಿ ನೀಡಲಿದ್ದಾರೆ. ಅನಂತರ ಮಂಗಳೂರಿಗೆ ಆಗಮಿಸಲಿದ್ದಾರೆ.
ಗುರುವಾರ ಸಂಜೆ 6 ಗಂಟೆಗೆ ಕೊಚ್ಚಿ ಮೆಟ್ರೋ ಹಂತ- II ಯೋಜನೆಗೆ ಶಂಕುಸ್ಥಾಪನೆ ಮತ್ತು ಎಸ್ಎನ್ ಜಂಕ್ಷನ್ನಿಂದ ವಡಕ್ಕೆಕೋಟಾದವರೆಗಿನ ಮೊದಲ ಹಂತ-1A ಯನ್ನು ಉದ್ಘಾಟಿಸಲಿದ್ದಾರೆ. ಅದಲ್ಲದೆ, ದಕ್ಷಿಣ ರಾಜ್ಯದಲ್ಲಿ ವಿವಿಧ ರೈಲ್ವೆ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಮಾಡಲಿದ್ದಾರೆ.
ಪ್ರಧಾನಮಂತ್ರಿಯವರ ಸ್ವಾಗತಕ್ಕೆ ಎರ್ನಾಕುಲಂ ಜಿಲ್ಲೆಯಲ್ಲಿ ಭಾರೀ ಸಿದ್ದತೆ ನಡೆಸಲಾಗಿದೆ. ಮಂಗಳೂರಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್ʼ ಸೀಸನ್ – 3 ಶೂಟ್ ಅರಂಭ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ