ಜಾನಪದ ಕಲೆಯಿಂದ ಗ್ರಾಮೀಣ ಸೊಗಡು ಶ್ರೀಮಂತ
ಜಾನಪದ ಕಲೆ ತನ್ನದೆಯಾದ ಶಕ್ತಿಯೊಂದಿಗೆ ದೇಶದ ಸಾಂಸ್ಕೃತಿಕ ಸಂಪತ್ತು ಹೆಚ್ಚಿಸಿರುವುದು ಗಮನಾರ್ಹ
Team Udayavani, Sep 1, 2022, 5:35 PM IST
ಕೆರೂರ: ಜಾನಪದ ಕಲೆಯಿಂದ ದೇಶದ ಗ್ರಾಮೀಣ ಸೊಗಡು ಶ್ರೀಮಂತಗೊಂಡಿದೆ. ಹೀಗಾಗಿ ಜಾನಪದ ಕಲೆ ದೇಶದ ಸಂಪತ್ತಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.
ಪಟ್ಟಣದ ದೇವಾಂಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಕರ್ನಾಟಕ ಜಾನಪದ ಪರಿಷತ್ತು ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಗ್ರಾಮೀಣ ಸೊಗಡಿನಲ್ಲಿ ಜಾನಪದ ಕಲೆ ತನ್ನದೆಯಾದ ಶಕ್ತಿಯೊಂದಿಗೆ ದೇಶದ ಸಾಂಸ್ಕೃತಿಕ ಸಂಪತ್ತು ಹೆಚ್ಚಿಸಿರುವುದು ಗಮನಾರ್ಹ. ಜತೆಗೆ ಜಾನಪದ ಕಲಾವಿದರ ಕೊಡುಗೆ ಅಪಾರ. ಜಾನಪದ ಕಲೆ ಉಳಿಯಬೇಕಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಸಾಹಿತ್ಯ ಕ್ಷೇತ್ರದ ಜತೆಗೆ ದೇಶಿಯ ಇಂಥ ಸಮೃದ್ಧಿ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನ ಯುವ ಜನಾಂಗವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ
ಕಲೆಗಳತ್ತ ಅವರನ್ನು ಸೆಳೆಯಬೇಕಾಗಿದೆ ಎಂದರು.ಇದೇ ಜಾನಪದ ಪರಿಷತ್ತಿನ ಬಾದಾಮಿ ತಾಲೂಕು ಪದಾಧಿರಿಗಳ ಪದಗ್ರಹಣ ಮಾಡಲಾಯಿತು.
ಕೆರೂರಿನ ದೇವಾಂಗ ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ ವಹಿಸಿದ್ದರು. ಜಿಲ್ಲಾ ಕಸಾಪ ಕಾರ್ಯದರ್ಶಿ ಸಿ.ಎಸ್. ಬಾಳಕ್ಕವರ, ಕೋಶಾಧ್ಯಕ್ಷ ಆರ್.ಸಿ. ಚಿತ್ತವಾಡಗಿ, ಬಾದಾಮಿ ತಾಲೂಕಾ ಕಸಾಪ ಅಧ್ಯಕ್ಷ ಬಿ.ಎಫ್. ಹೊರಕೇರಿ, ಎಸ್.ಆರ್. ಎಮ್ಮಿಮಠ, ರಮೇಶ ಅರಕೇರಿ, ವಿಠಲ್ಗೌಡ ಗೌಡರ, ಶಂಕರ ಹೂಲಿ, ಸಿ.ಎಸ್. ನಾಗನೂರ, ಮಂಜುನಾಥ ಪತ್ತಾರ, ಸದಾನಂದ ಮದಿ, ರಂಗಪ್ಪ ಅಗಸರ, ಇಮಾಮ್ಸಾಬ್ ಮುದಕವಿ, ಲಿಂಗರಾಜ ಕ್ವಾಣೂªರ, ಮಲ್ಲು ಪೂಜಾರ ಹಾಜರಿದ್ದರು.
ಕಾರ್ಯಕ್ರಮದಲ್ಲಿ ವಿವಿದ ಜಾನಪದ ಕಲಾ ತಂಡಗಳಿಂದ ದೇಶಭಕ್ತಿಯ ನೃತ್ಯಗಳು, ಜಾನಪದ ಗೀತೆ, ಸೋಭಾನೆ ಪದ, ತತ್ವಪದ, ಬೀಸುಕಲ್ಲಿನ ಪದ, ಸಮೂಹ ನೃತ್ಯ, ಸಂಪ್ರದಾಯಕ ಪದ ನಡೆದವು. ರಂಗಾಯಣ ಕಲಾವಿದರಿಂದ ಕಿತ್ತೂರ ರಾಣಿ ಚೆನ್ನಮ್ಮ ನಾಟಕ ಎಲ್ಲರ ಗಮನ ಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್ಒ ಸೇರಿ ಐವರಿಗೆ ನೋಟಿಸ್
Lok Sabha Election 2024: ಸ್ವಾಭಿಮಾನದ ಕಿಚ್ಚು; ಯಾರಿಗೆ ನಷ್ಟ-ಲಾಭ !
Mahalingapura: ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು
Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ
School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು
MUST WATCH
ಹೊಸ ಸೇರ್ಪಡೆ
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್