ಮತ್ತೊಂದು ಪ್ರೇಮಕಥೆ ಹೇಳುವ ಸಮಯ; ಇಂದು ತಾಜ್‌ಮಹಲ್‌-2 ತೆರೆಗೆ


Team Udayavani, Sep 2, 2022, 12:48 PM IST

ಮತ್ತೊಂದು ಪ್ರೇಮಕಥೆ ಹೇಳುವ ಸಮಯ; ಇಂದು ತಾಜ್‌ಮಹಲ್‌-2 ತೆರೆಗೆ

ಸ್ಯಾಂಡಲ್‌ವುಡ್‌ನ‌ಲ್ಲಿ ಈ ಹಿಂದೆ “ತಾಜ್‌ ಮಹಲ್‌’ ಎಂಬ ಪ್ರೇಮ್‌ ಕಹಾನಿ ಬಂದು ಸೂಪರ್‌ ಹಿಟ್‌ ಆಗಿದ್ದು ನಿಮಗೆ ಗೊತ್ತಿರಬಹುದು. ಈಗ ಅಂಥದ್ದೇ ಮತ್ತೂಂದು ಪ್ರೇಮ್‌ ಕಹಾನಿಯ ಸಿನಿಮಾ “ತಾಜ್‌ಮಹಲ್‌-2′ ಈ ವಾರ ಬಿಡುಗಡೆಯಾಗುತ್ತಿದೆ.

“ಶ್ರೀಗಂಗಾಂಭಿಕೆ ಎಂಟರ್‌ಪ್ರೈಸೆಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ತಾಜ್‌ಮಹಲ್-2′ ಸಿನಿಮಾಕ್ಕೆ, ಚಿತ್ರರಂಗದಲ್ಲಿ ಮೇಕಪ್‌ ಆರ್ಟಿಸ್ಟ್‌ ಆಗಿದ್ದ ದೇವರಾಜ್‌ ಕುಮಾರ್‌ ಆ್ಯಕ್ಷನ್‌-ಕಟ್‌ ಹೇಳಿದ್ದು, ಈ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ.

ಸದ್ಯ “ತಾಜ್‌ಮಹಲ್‌-2′ ಬಿಡುಗಡೆಯ ಹೊಸ್ತಿಲಿನಲ್ಲಿರುವಾಗಲೇ, ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಿಷ್ಟು ಮಾತನಾಡಿತು.

ಮೊದಲಿಗೆ ಮಾತನಾಡಿದ ನಿರ್ದೇಶಕ ಕಂ ನಾಯಕ ದೇವರಾಜ್‌, “ಸಿನಿಮಾದ ಟೈಟಲ್‌ ಹೇಳುವಂತೆ, “ತಾಜ್‌ ಮಹಲ್-2′ ಒಂದು ಅಪ್ಪಟ ಪ್ರೇಮಕಥೆಯ ಸಿನಿಮಾ. ಕೆಲ ವರ್ಷಗಳ ಹಿಂದೆ ಕೊಯಮತ್ತೂರಿನಲ್ಲಿ ಕಬ್ಬಿನ ಜ್ಯೂಸ್‌ ಮಾರಿ ಜೀವನ ನಡೆಸುವ ಹುಡುಗನೊಬ್ಬನ ಜೀವನದಲ್ಲಿ ನಡೆದ ನೈಜ ಘಟನೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಲವ್‌, ಸೆಂಟಿಮೆಂಟ್‌ಫ್ರೆಂಡ್‌ಶಿಪ್‌, ಎಮೋಶನ್ಸ್‌ ಹೀಗೆ ಎಲ್ಲ ಥರದ ಎಲಿಮೆಂಟ್ಸ್‌ ಇರುವ ಸಿನಿಮಾ ಇದಾಗಿದೆ. ಈಗಾಗಲೇ ರಿಲೀಸ್‌ ಆಗಿರುವ ನಮ್ಮ ಸಿನಿಮಾದ ಸಾಂಗ್ಸ್‌, ಟ್ರೇಲರ್‌ಗೆ ಒಳ್ಳೆಯ ಮೆಚ್ಚುಗೆ ಸಿಗುತ್ತಿದ್ದು, ಎಲ್ಲರೂ ಗುರುತಿಸಿ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಈ ಸಿನಿಮಾದಿಂದ, ಒಬ್ಬ ಮೇಕಪ್‌ ಮ್ಯಾನ್‌ ಇಂದು ಅನುಪಮಾ ಥಿಯೇಟರ್‌ನಲ್ಲಿ ಕಟೌಟ್‌ ಆಗಿ ನಿಲ್ಲುವ ಮಟ್ಟಿಗೆ ಆಗಿದೆ’ ಎಂದರು.

“ತಾಜ್‌ಮಹಲ್‌-2′ ಬಿಡುಗಡೆಯ ಬಗ್ಗೆ ಮಾತನಾಡಿದ ವಿತರಕ ರಮೇಶ್‌ ಬಾಬು, “ಸಿನಿಮಾಕ್ಕೆ ರಾಜ್ಯಾದ್ಯಂತ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದ್ದು, 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ರಿಲೀಸ್‌ ಮಾಡುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು. ಇದೇ ವೇಳೆ ಹಾಜರಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಚಿತ್ರತಂಡಕ್ಕೆ ಶುಭ ಹಾರೈಸಿದರು.

“ತಾಜ್‌ಮಹಲ್‌-2′ ಸಿನಿಮಾದಲ್ಲಿ ಸಮೃದ್ಧಿ ಶುಕ್ಲಾ ನಾಯಕಿಯಾಗಿದ್ದು, ಉಳಿದಂತೆ ತಬಲನಾಣಿ, ಶೋಭಾರಾಜ್‌, ವಿಕ್ಟರಿ ವಾಸು, ಕಡ್ಡಿಪುಡಿ ಚಂದ್ರು, ರಾಜ್‌ ಉದಯ…, ವಾಣಿಶ್ರೀ, ಸಿಲ್ಲಿಲಲ್ಲಿ ಆನಂದ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ

ಅಭಿನಯಿಸಿದ್ದಾರೆ. “ತಾಜ್‌ಮಹಲ್‌-2′ ಸಿನಿಮಾದ ಹಾಡುಗಳಿಗೆ ವಿಕ್ರಂ ಸೆಲ್ವ ಸಂಗೀತವಿದ್ದು, ಧನಂಜಯ್‌ ಬಿ ನೃತ್ಯ, ಚಂದ್ರು ಬಂಡೆ ಸಾಹಸ ಸಂಯೋಜನೆಯಿದೆ. ಚಿತ್ರಕ್ಕೆ ವೀನಸ್‌ ಮೂರ್ತಿ ಛಾಯಾಗ್ರಹಣ, ವಿಜಯ್‌ ಎಂ. ಕುಮಾರ್‌ ಸಂಕಲನವಿದೆ. ಮನ್ವರ್ಷಿ ನವಲಗುಂದ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.