ಉಡುಪಿ ಜಿಲ್ಲೆಯ ಮೀನುಗಾರರ ಕೈ ಸೇರದ ಅನುದಾನ

ಮೀನುಗಾರರ ಕೇಂದ್ರ ಪುರಸ್ಕೃತ ಉಳಿತಾಯ ಯೋಜನೆ

Team Udayavani, Sep 4, 2022, 9:17 AM IST

ಉಡುಪಿ ಜಿಲ್ಲೆಯ ಮೀನುಗಾರರ ಕೈ ಸೇರದ ಅನುದಾನ

ಕೋಟ : ಮೀನುಗಾರಿಕೆ ರಜೆ ಸಂದರ್ಭ ಸಣ್ಣ ಮೀನುಗಾರರಿಗೆ ಆರ್ಥಿಕವಾಗಿ ಸಹಕಾರಿಯಾಗುವ ನಿಟ್ಟಿನಲ್ಲಿ ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಎನ್ನುವ ಯೋಜನೆಯನ್ನು ಸರಕಾರ ಈ ಹಿಂದೆ ಜಾರಿಗೊಳಿಸಿತ್ತು. ಆದರೆ ಕೇಂದ್ರ ಹಾಗೂ ರಾಜ್ಯ ಸರಕಾರದ ಪಾಲಿನ ಅನುದಾನ ಉಡುಪಿ ಜಿಲ್ಲೆಯ ಮೀನುಗಾರರ ಕೈ ಸೇರದೆ ಸಮಸ್ಯೆಯಾಗಿದೆ.

ಅರ್ಥಿಕವಾಗಿ ಹಿಂದುಳಿದ ಮೀನುಗಾರರು ಸೆಪ್ಟಂಬರ್‌ನಿಂದ ಮೇ ತನಕ ಮೀನುಗಾರಿಕೆಗೆ ಸಂಬಂಧಿಸಿದ ಸಹಕಾರ ಸಂಸ್ಥೆಗಳ ಮೂಲಕ 165 ರೂ.ಗಳನ್ನು ಉಳಿತಾಯ ರೂಪದಲ್ಲಿ ಠೇವಣಿ ಇಡಬೇಕು. ಒಂಬತ್ತು ತಿಂಗಳಲ್ಲಿ ಓರ್ವ ಸದಸ್ಯನ ಖಾತೆಯಲ್ಲಿ ಸಂಗಹಗೊಂಡ 1,500 ಸಾವಿರ ಮೊತ್ತಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರ ತಲಾ 1,500-1,500 ರೂ. ಅನುದಾನವನ್ನು ನೀಡುತ್ತದೆ. ಹೀಗೆ ಸಂಗ್ರಹವಾಗುವ 4,500 ರೂ. ಮೊತ್ತವನ್ನು ಜೂನ್‌, ಜುಲೈ, ಆಗಸ್ಟ್‌ನಲ್ಲಿ ರಜಾ ವೇತನ ರೂಪದಲ್ಲಿ ನೀಡಲಾಗುತ್ತದೆ. ಆದರೆ 2017, 2018, 2019ನೇ ಸಾಲಿನ ಸರಕಾರದ ಪಾಲಿನ ಅನುದಾನ ಉಡುಪಿ ಜಿಲ್ಲೆಗೆ ಬಿಡುಗಡೆಯಾಗಿಲ್ಲ.

ಸರಕಾರದ ಪಾಲು ಶೂನ್ಯ
ದ.ಕ. ಜಿಲ್ಲೆಯಲ್ಲಿ 1,231 ಮಂದಿ ಮೀನುಗಾರರಿದ್ದು 2021ನೇ ಸಾಲಿನ ತನಕದ ಎಲ್ಲ ಅನುದಾನ ಕೈ ಸೇರಿದೆ ಎಂದು ಇಲಾಖೆಯ ಮುಖ್ಯಸ್ಥರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಾತ್ರ ಸದಸ್ಯರು ಮಾಸಿಕ 165 ರೂ.ಗಳಂತೆ 9 ತಿಂಗಳು ಪಾವತಿಸಿದ 1,500 ಸಾವಿರ ರೂ. ಮಾತ್ರ ಕೈ ಸೇರುತ್ತಿದೆ. ಸರಕಾರದ ಪಾಲು ಶೂನ್ಯವಾಗಿದೆ.
ಕೈತಪ್ಪುವ ಆತಂಕ: ಮೂರ್‍ನಾಲ್ಕು ವರ್ಷಗಳಿಂದ ಅನುದಾನ ಬಾಕಿ ಉಳಿದಿರುವುದರಿಂದ ಉಡುಪಿ ಜಿಲ್ಲೆಯ ಮೀನುಗಾರರಿಗೆ ಹಳೆಯ ಬಾಕಿ ಕೈ ತಪ್ಪಲಿದೆಯೇ ಎನ್ನುವ ಆತಂಕ ಇದೆ. ಸಂಬಂಧಪಟ್ಟ ಅಧಿಕಾರಿಗಳು ಯೋಜನೆಯ ಸಂಪೂರ್ಣ ಮೊತ್ತವನ್ನು ಮೀನುಗಾರರಿಗೆ ನೀಡಲು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಮೀನುಗಾರರದು.

ಯೋಜನೆಯಲ್ಲಿ ಹಣ ತೊಡಗಿಸಿದ ಮೀನುಗಾರರು ಆಗಾಗ ಸಂಘಕ್ಕೆ ಭೇಟಿ ನೀಡಿ ವಿಚಾರಿಸುತ್ತಾರೆ. ಸರಕಾರದ ಪಾಲಿನ ಹಿಂದಿನ ಸಂಪೂರ್ಣ ಅನುದಾನವದ ಜತೆಗೆ ಪೂರ್ತಿ ಮೊತ್ತ ಪಾವತಿಸಲು ಸರಕಾರ ಕ್ರಮ ಕೈಗೊಳ್ಳಬೇಕಿದೆ.
– ಅಶೋಕ್‌ ಕೋಡಿಕನ್ಯಾಣ, ಅಧ್ಯಕ್ಷರು, ಕೋಡಿ ಮೀನುಗಾರರ ಸಹಕಾರಿ ಸಂಘ

2020-21ನೇ ಸಾಲಿನ ಅನುದಾನ ಸಂಪೂರ್ಣವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಹಂತ-ಹಂತವಾಗಿ ಸರಕಾರದ ಪಾಲಿನ ಅನುದಾನ ಪಾವತಿಸಲು ಇಲಾಖೆ ಕ್ರಮ ಕೈಗೊಳ್ಳುವ ಭರವಸೆ ಇದೆ.
– ಗಣೇಶ್‌, ಜಿಲ್ಲಾ ನಿರ್ದೇಶಕರು ಮೀನುಗಾರಿಕೆ ಇಲಾಖೆ

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.