ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೇಲ್ಮುರಿ ಆಯ್ಕೆ

ಕಲಿಕೆಯಲ್ಲಿ ಹೊಸತನ, ಶಾಲಾ ವನ, ಸ್ವಚ್ಛ ಪರಿಸರ ನಿರ್ಮಾಣ, ಮಕ್ಕಳ ಸಂಖ್ಯೆ ಹೆಚ್ಚಳ ಮುಂತಾದ ಪರಿಶ್ರಮಕ್ಕೆ ಸಂದ ಗೌರವ

Team Udayavani, Sep 4, 2022, 4:11 PM IST

17

ಹಾವೇರಿ: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಹಂದಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಾಧ್ಯಾಪಕ ಕೊಟ್ರಪ್ಪ ಮೇಲ್ಮುರಿ ಆಯ್ಕೆಯಾಗಿದ್ದಾರೆ.

ಕಲಿಕೆಯಲ್ಲಿ ನಾವೀನ್ಯತೆ ಅಳವಡಿಕೆ, ಶಾಲಾ ವನ, ಸ್ವಚ್ಛ ಪರಿಸರ ನಿರ್ಮಾಣ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಅಳವಡಿಸಿದ ಪರಿಣಾಮ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ಖಾಸಗಿ ಶಾಲೆಗಳ ನಾಗಾಲೋಟದಲ್ಲಿ ಸರ್ಕಾರಿ ಶಾಲೆಗಳು ಕಲಿಕೆ ಮತ್ತು ಅಭಿವೃದ್ಧಿಯಲ್ಲಿ ಹಿಂದುಳಿದಿಲ್ಲ ಎಂಬುದನ್ನು ಶಾಲೆಯ ಮುಖ್ಯಾಧ್ಯಾಪಕ ಮೇಲ್ಮುರಿ ತೋರಿಸಿಕೊಟ್ಟಿದ್ದಾರೆ.

ಇಂಗ್ಲಿಷ್‌ ಭಾಷೆ ಗ್ರಾಮೀಣ ಮಕ್ಕಳಿಗೆ ರುಚಿಸುವಂತೆ ಸರಳ ಓದು, ಶುದ್ಧ ಬರಹ, ಪದ ಸಂಗ್ರಹದ ಕಲಿಕೋಪಕರಣಗಳನ್ನು ಶಾಲೆಯಲ್ಲಿ ಅಳವಡಿಸಿದ್ದಾರೆ. ನಲಿಕಲಿಯಲ್ಲಿ ಸ್ವಯಂ ಕಲಿಕೆ, ಗುಂಪು ಕಲಿಕೆ ಜಾರುಪಟ್ಟಿ, ತಟ್ಟೆ ಚಪ್ಪರ ಅಳವಡಿಕೆ, ವಿಜ್ಞಾನಗಳ ಸರಳ ಪ್ರಯೋಗಗಳು, ಗಣಿತದ ಸರಳ ಲೆಕ್ಕಗಳನ್ನು ನಾವೀನ್ಯತೆಯ ಬೋಧನಾ ಕ್ರಮದ ಮೂಲಕ ಮಕ್ಕಳಿಗೆ ದಿನವೂ ಪರಿಸರದಲ್ಲಿ ಕಲಿಕಾ ವಾತಾವರಣ ನಿರ್ಮಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಶಾಸಕರ ಅನುದಾನದಿಂದ ಹಾಗೂ ಗ್ರಾಮ ಪಂಚಾಯಿತಿಯಿಂದ 10 ಲ‌ಕ್ಷ ರೂ. ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಶಾಲೆಯಲ್ಲಿ ಮಾಡಿಸಿದ್ದಾರೆ.

ಶಾಲಾ ವನ ನಿರ್ಮಾಣ ಮಾಡಿ, ರಾಸಾಯನಿಕ ಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಶಾಲಾ ವನಕ್ಕೆ ರಕ್ಷಣಾ ಗೋಡೆ, ಹಸಿರು ಸೊಪ್ಪು ಬೆಳೆಯುವಿಕೆ, ಸುಂದರ, ಸ್ವಚ್ಛ ಪರಿಸರ ನಿರ್ಮಾಣ ಮಾಡಿದ್ದಾರೆ. ಪ್ರತಿ ಶುಕ್ರವಾರ ಸಾಂಸ್ಕೃತಿಕ ಸಂಜೆ ನಾವೀನ್ಯತಾ ಕಾರ್ಯಕ್ರಮ, ತಾಯಂದಿರ ಸಭೆ, ಪಾಲಕರ ಸಭೆ, ಶಾಲೆಗೆ ಬನ್ನಿ ಶನಿವಾರ, ವಿಶಿಷ್ಟ ಪರಿಹಾರ ಬೋಧನೆ ಇತ್ಯಾದಿ ಅಂಶಗಳನ್ನು ಹಂದಿಗನೂರು ಶಾಲೆಯಲ್ಲಿ ಅಳವಡಿಸಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

30 ವರ್ಷಗಳ ಸಾರ್ಥಕ ಸೇವೆ: ಹಾನಗಲ್ಲ ತಾಲೂಕು ಮಲ್ಲಿಗಾರ ಓಣಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ 1992ರಲ್ಲಿ ಕೊಟ್ರಪ್ಪ ಮೇಲ್ಮುರಿ ಅವರು, ಸಿಆರ್‌ಪಿ ಆಗಿ 7 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ತಾಲೂಕಿನ ಕೊರಡೂರು ಶಾಲೆ, ಸದ್ಯ ಹಂದಿಗನೂರು ಶಾಲೆ ಮುಖ್ಯಾಧ್ಯಾಪಕರಾಗಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಲ್ಲಿಗಾರ ಶಾಲೆಯಲ್ಲಿ ಹೆಚ್ಚಾಗಿ ಲಮಾಣಿ ಸಮುದಾಯದ ಮಕ್ಕಳೇ ಕಲಿಯುತ್ತಿದ್ದರು. ಶಾಲೆಯ ಶೋಚನೀಯ ಸ್ಥಿತಿ ಕಂಡು ಶಾಲೆಗೆ ಒಂದು ಹೊಸ ರೂಪ ಕೊಡಲು ಸಂಕಲ್ಪ ಮಾಡಿದರು. ಊರ ಹಿರಿಯರ, ಶಿಕ್ಷಣ ಪ್ರೇಮಿಗಳ ಸಭೆ ನಡೆಸಿ, ದಾಖಲಾತಿ, ಹಾಜರಾತಿ ಅಂದೋಲನ ಕೈಗೊಂಡು ಸಮೀಪದ ಸಾತೇನಹಳ್ಳಿ ಗ್ರಾಮಕ್ಕೆ ಹೋಗಿ ಅಲ್ಲಿಂದ ಮಕ್ಕಳನ್ನು ತಮ್ಮ ಶಾಲೆಗೆ ದಾಖಲು ಮಾಡಿಕೊಂಡು ಮಕ್ಕಳ ಸಂಖ್ಯೆಯನ್ನು 60ಕ್ಕೆ ಹೆಚ್ಚಿಸಿದರು. ಅರಳೇಶ್ವರ, ಕೊರಡೂರ ಶಾಲೆಯಲ್ಲಿ ಸೇವೆ ಸಲ್ಲಿಸಿ 2014ರಿಂದ ಬಡ್ತಿ ಮುಖ್ಯೋಪಾಧ್ಯಾಯರಾಗಿ ಹಂದಿಗನೂರ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯಲ್ಲಿ ಉತ್ತಮ ಪರಿಸರ ಸಂರಕ್ಷಣೆ ಮಾಡಿ ಮೂರು ಬಾರಿ ಜಿಲ್ಲಾ ಪರಿಸರ ಮಿತ್ರ ಪ್ರಶಸ್ತಿ ಪಡೆದಿದ್ದಾರೆ. ವಿದ್ಯಾಗಮ ಕಾರ್ಯಕ್ರಮದಲ್ಲೂ ಶಾಲೆಯ ಪ್ರಗತಿ ಕಂಡು ಇಲಾಖೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದರು.

ಶಿಕ್ಷಕರಿಗೆ ಪ್ರಶಸ್ತಿ ಬರುವುದು ಕಡಿಮೆ. ಈ ಸಲದ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಇದರಿಂದ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಮಕ್ಕಳ ಕಲಿಕೆ, ಸಾಧನೆಯಲ್ಲೇ ನಾವು ಸಂತಸ ಕಾಣುತ್ತೇವೆ. ನಮ್ಮ ಕೈಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಕರೆ ಮಾಡಿ ಅಭಿನಂದಿಸುತ್ತಿದ್ದಾರೆ. ಬಹಳ ಸಂತೋಷವಾಗುತ್ತಿದೆ.  -ಕೊಟ್ರಪ್ಪ ಮೇಲ್ಮುರಿ, ಪ್ರಶಸ್ತಿಗೆ ಭಾಜನ ಶಿಕ್ಷಕ

ಟಾಪ್ ನ್ಯೂಸ್

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.