ನೂತನ ಸಂಸತ್ ಕಟ್ಟಡವನ್ನು ಅಲಂಕರಿಸಲು ಸಾಂಪ್ರದಾಯಿಕ ಕಾಶ್ಮೀರಿ ಕಾರ್ಪೆಟ್‌ಗಳು ಸಿದ್ದ

ಪ್ರಪಂಚದಾದ್ಯಂತ ಪ್ರಸಿದ್ಧವಾಗಿರುವ ರತ್ನಗಂಬಳಿಗಳ ಪುನಶ್ಚೇತನಗೊಳ್ಳುವ ಕನಸು..

Team Udayavani, Sep 4, 2022, 5:10 PM IST

1-asdadsad

 ಶ್ರೀನಗರ: ಕೈಯಿಂದ ನೆಯ್ದ ಸಾಂಪ್ರದಾಯಿಕ ಕಾಶ್ಮೀರಿ ಕಾರ್ಪೆಟ್‌ಗಳು ರಾಷ್ಟ್ರ ರಾಜಧಾನಿಯ ನೂತನ ಸಂಸತ್ತಿನ ಕಟ್ಟಡವನ್ನು ಅಲಂಕರಿಸಲು ಸಿದ್ಧವಾಗಿವೆ. ಬುದ್ಗಾಮ್ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಕಲಾವಿದರು ಕೆಲಸ ಪೂರ್ಣಗೊಳಿಸುವ ಅಂತಿಮ ಹಂತದಲ್ಲಿದ್ದಾರೆ.

ಮಧ್ಯ ಕಾಶ್ಮೀರ ಜಿಲ್ಲೆಯ ಖಾಗ್‌ನಲ್ಲಿ 50 ನೇಕಾರರು ಮತ್ತು ಕುಶಲಕರ್ಮಿಗಳ ಗುಂಪು ಕಳೆದೊಂದು ವರ್ಷದಿಂದ ಹೊಸ ದೆಹಲಿ ಮೂಲದ ಕಂಪನಿಯು ಅವರಿಗೆ ನೀಡಿದ ಯೋಜನೆಯನ್ನು ಪೂರ್ಣಗೊಳಿಸಲು ಕೆಲಸ ಮಾಡುತ್ತಿದೆ.

ನರೇಂದ್ರ ಮೋದಿ ಅವರ ಸರಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಂಸತ್ತಿನ ಹೊಸ ಕಟ್ಟಡದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸರಕಾರ ಹೇಳಿದೆ.

ನಾವು ಮಾದರಿಗಳನ್ನು ಸಲ್ಲಿಸಿದ ನಂತರ ಹೊಸ ಸಂಸತ್ತಿನ ಕಟ್ಟಡಕ್ಕಾಗಿ ನಾವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಂಪನಿಯಿಂದ 12 ಕಾರ್ಪೆಟ್‌ಗಳ ಆರ್ಡರ್  ಸ್ವೀಕರಿಸಿದ್ದೇವೆ ಎಂದು ತಾಹಿರಿ ಕಾರ್ಪೆಟ್ಸ್‌ನ ಕಮರ್ ಅಲಿ ಖಾನ್ ಪಿಟಿಐಗೆ ತಿಳಿಸಿದ್ದಾರೆ.

32 ವರ್ಷಗಳಿಂದ ರತ್ನಗಂಬಳಿಗಳನ್ನು ತಯಾರಿಸುವ ಮತ್ತು ರಫ್ತು ಮಾಡುವ ಘಟಕವನ್ನು ನಡೆಸುತ್ತಿರುವ ಖಾನ್, ಸಂಸತ್ತಿಗೆ ಕಾರ್ಪೆಟ್‌ಗಳನ್ನು ತಯಾರಿಸುವುದು ಗೌರವ ಮತ್ತು ಅಪಾರ ಸಂತೋಷದ ವಿಷಯ ಎಂದು ಹೇಳಿದ್ದಾರೆ.

ನಮ್ಮ ಕೈಯಿಂದ ಮಾಡಿದ ರತ್ನಗಂಬಳಿಗಳು ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಆದರೆ ದುರದೃಷ್ಟವಶಾತ್, ಹಲವು ಕಾರಣಗಳಿಂದ ಬೇಡಿಕೆಯಲ್ಲಿ ಕುಸಿತ ಕಂಡುಬಂದಿದೆ. ಈಗ, ಅದು ಪುನಶ್ಚೇತನಗೊಳ್ಳುತ್ತದೆ ಮತ್ತು ಈ ಯೋಜನೆಯು ಅದಕ್ಕೆ ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಹೊಸ ಸಂಸತ್ ಕಟ್ಟಡವನ್ನು ಅಲಂಕರಿಸುವ ಕಾರ್ಪೆಟ್‌ಗಳು 11 ಅಡಿ ಉದ್ದ ಮತ್ತು 8 ಅಡಿ ಅಗಲವಿದೆ. ಅವುಗಳನ್ನು ವೃತ್ತಾಕಾರದ ರಚನೆಯಲ್ಲಿ ಹಾಕಲಾಗುತ್ತದೆ. ಪ್ರತಿ ಕಾರ್ಪೆಟ್ ನ ಅಗಲವು ಒಂದೇ ಆಗಿರುವುದಿಲ್ಲ. ಇದು ಬದಲಾಗುತ್ತದೆ, ಇದು ಕಡಿಮೆ ಅಗಲದಿಂದ ಪ್ರಾರಂಭವಾಗುತ್ತದೆ ಮತ್ತು ದೊಡ್ಡದಾಗುತ್ತದೆ ಎಂದು ಖಾನ್ ಹೇಳಿದ್ದಾರೆ.

ಕಾರ್ಪೆಟ್‌ಗಳು ವಿಶಿಷ್ಟವಾಗಿದ್ದು, ಮೂರು ವಿನ್ಯಾಸಗಳನ್ನು ಸಾಂಪ್ರದಾಯಿಕ ಕಾಶ್ಮೀರಿ ಕಣಿ’ ಶಾಲ್ ವಿನ್ಯಾಸಗಳನ್ನು ಅಳವಡಿಸಲಾಗಿದೆ. ಐವತ್ತು ಮಂದಿ ನೇಕಾರರು ಈ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದು, 12 ಕುಟುಂಬಗಳು ಕಚ್ಚಾವಸ್ತು ಪೂರೈಕೆ, ವಿನ್ಯಾಸ, ನೇಯ್ಗೆ ಇತ್ಯಾದಿಗಳೊಂದಿಗೆ ತೊಡಗಿಸಿ ಕೊಂಡಿವೆ ಎಂದು ಖಾನ್ ಹೇಳಿದರು.

ಯೋಜನೆಯ 90 ರಷ್ಟು ಕೆಲಸ ಪೂರ್ಣಗೊಂಡಿದೆ ಮತ್ತು ಉಳಿದ ಕೆಲಸಕ್ಕೆ ಸುಮಾರು 20 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಖಾನ್ ಹೇಳಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.