ಎಲ್ ಕೆಜಿಯಿಂದ ಪಿಜಿವರೆಗೆ ಒಂದೇ ಕಡೆ ಶಿಕ್ಷಣಕ್ಕೆ ಆದ್ಯತೆ: ಶಾಸಕ ಮಂಜುನಾಥ್

ಮೂಲಸೌಕರ್ಯ ಕಲ್ಪಿಸಲು ಪೋಷಕರ ನೆರವು ಅತ್ಯಗತ್ಯ

Team Udayavani, Sep 4, 2022, 10:26 PM IST

1-asdda

ಹುಣಸೂರು : ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ಸಾಧನೆಯ ಹಾದಿಯಲ್ಲಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾದ ಕಾರ್ಯಕ್ರಮ, ಕೆ.ಜಿ-ಪಿ.ಜಿ.ವರೆಗೆ ನಗರದಲ್ಲಿ ಅವಕಾಶ ಕಲ್ಪಿಸಿದ್ದು ಶಾಲಾ-ಕಾಲೇಜುಗಳ ಮತ್ತಷ್ಟು ಪ್ರಗತಿಗೆ ಪೋಷಕರ ಸಹಕಾರ ಅತ್ಯಗತ್ಯವೆಂದು ಶಾಸಕ ಎಚ್.ಪಿ.ಮಂಜುನಾಥ್ ಅಭಿಪ್ರಾಯಪಟ್ಟರು.

ಹುಣಸೂರಿನ ಮಹಿಳಾ ಸರಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಪೋಷಕರ ಸಭೆಯಲ್ಲಿ ಮಾತನಾಡಿದ ಅವರು ತಾವು ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಇದರಿಂದ ತಾಲೂಕಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರಷ್ಟೆ ಸಾಲದು, ಆಗಾಗ್ಗೆ ಭೇಟಿ ಇತ್ತು ಮಕ್ಕಳ ಪ್ರಗತಿಯನ್ನು ಗಮನಿಸಿರಿ.

ಕೆ.ಜಿ-ಪಿ.ಜಿ.ವರೆಗೆ ಅವಕಾಶ
ಇಲ್ಲಿನ ಮಹಿಳಾ ಕಾಲೇಜು ಕ್ಯಾಂಪಸ್‌ನಲ್ಲಿ ಐದು ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಮತ್ತೊಂದು ದುಸ್ಥಿತಿ ಕಟ್ಟಡವನ್ನು ಕೆಡವಿ ಒಂದು ಕೋಟಿ ವೆಚ್ಚದ ಮತ್ತೊಂದು ಕಟ್ಟಡ ನಿರ್ಮಿಸಲಾಗುವುದು. ಕಾಲೇಜಿನಲ್ಲಿ ಉತ್ತಮ ಪ್ರಾಧ್ಯಾಪಕರಿದ್ದಾರೆ. ಖಾಸಗಿ ಕಾಲೇಜು ಮೀರಿಸುವಂತೆ ಅತ್ಯುತ್ತಮ ಫಲಿತಾಂಶ ಬಂದಿದೆ. ಕ್ರೀಡೆ ಸೇರಿದಂತೆ ಎಲ್ಲ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದು, ಪೋಷಕರು ಅತ್ಯುತ್ತಮ ಆಯ್ಕೆ ಮಾಡಿಕೊಂಡಿದ್ದೀರೆAದು ಸಂಸತ ವ್ಯಕ್ತಪಡಿಸಿ. ತಾಲೂಕಿನಲ್ಲಿ ಎಲ್.ಕೆ.ಜಿ.ಯಿಂದ ಸ್ನಾತಕೋತ್ತರ ವಿಭಾಗ, ಪಿಎಚ್‌ಡಿವರೆಗೂ ಅವಕಾಶವಿದ್ದು, ಈಗಾಗಲೆ ದೇವರಾಜ ಅರಸು ಕಾಲೇಜು ನ್ಯಾಕ್ ಮಾನ್ಯತೆಗೆ ಒಳಗಾಗಿದ್ದು, ಇದೀಗ ಈ ಕಾಲೇಜು ನ್ಯಾಕ್ ಮಾನ್ಯತೆಗೆ ಒಳಪಡಬೇಕಿದ್ದು, ಪೋಷಕರ ಸಹಕಾರ, ಕೊಡುಗೆ ನೀಡುವಂತೆ ಕೋರಿದರು.

ಪ್ರಾಚಾರ್ಯ ಜ್ಞಾನಪ್ರಕಾಶ್ ಕಾಲೇಜಿನ ನಿಯಮಗಳು ಹಾಗೂ ಪೋಷಕರ ಪಾತ್ರದ ಬಗ್ಗೆ, ಸಹಾಯಕಪ್ರಾಧ್ಯಾಪಕ ಶ್ರೀನಿವಾಸ್ ನೂತನ ಶಿಕ್ಷಣ ನೀತಿ ಕುರಿತು ಮಾಹಿತಿ ನೀಡಿದರು. ಸಿಡಿಸಿ ಉಪಾಧ್ಯಕ್ಷ ಹನಗೋಡುನಟರಾಜ್, ಸಂಚಾಲಕ ಪುಟ್ಟಶೆಟ್ಟಿ, ಪೋಷಕರ ಸಮಿತಿ ಸಂಚಾಲಕ ನಂಜುAಡಸ್ವಾಮಿ ಮಾತನಾಡಿದರು. ಸಿಡಿಸಿ ಸದಸ್ಯರಾದ ನಾಗರಾಜ್, ನಿಂಗರಾಜಪ್ಪ, ನಂದಿನಿ, ಅನುಷಾ, ಚಿನ್ನವೀರಯ್ಯ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಪೋಷಕರು ಬಾಗವಹಿಸಿದ್ದರು.

ಬಸ್ ಸೌಲಭ್ಯ ಕಲ್ಪಿಸಿ
ಕಾಲೇಜಿಗೆ ಮಕ್ಕಳು ಬರಲು ರಾಮಪಟ್ಟಣ, ಬಲ್ಲೇನಹಳ್ಳಿ, ಕೂಡ್ಲೂರು, ವೀರನಹೊಸಹಳ್ಳಿ ಸೇರಿದಂತೆ ಅನೇಕ ಹಳ್ಳಿಗಳಿಂದ ಸಕಾಲದಲ್ಲಿ ಬಸ್‌ಗಳಿಲ್ಲದೆ ಮಕ್ಕಳಿಗೆ ತೊಂದರೆಯಾಗಿದ್ದು ಸಕಾಲದಲ್ಲಿ ಬಸ್ ಬಿಡುವಂತೆ ಪೋಷಕರು ಶಾಸಕರಲ್ಲಿ ಮನವಿ ಮಾಡಿದರೆ, ವಿದ್ಯಾರ್ಥಿನಿ ಸ್ವಾತಿ ರಾಜ್ಯ ಶಾಸ್ತç ವಿಭಾಗಕ್ಕೆ ಅಧ್ಯಾಪಕರ ಕೊರತೆ ಇದೆ ಎಂದರೆ, ಪ್ರತಿಭಾ, ಸಲಿನಾ ಮತ್ತಿತರರು ಕನ್ನಡ, ಹಿಂದಿ, ಉರ್ದು ಭಾಷೆಗೆ ಪ್ರಾಧ್ಯಾಪಕರಿಲ್ಲದೆ ಮೊದಲ ಸೆಮ್ ಪೂರೈಸಿದ್ದೇವೆ. ಈಗಲಾದರೂ ಅತಿಥಿ ಶಿಕ್ಷಕರನ್ನು ನೇಮಿಸಿರೆಂದರೆ, ವಿದ್ಯಾರ್ಥಿನಿ ಅನುಷಾ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾಲೇಜು ಆವರಣದಲ್ಲಿ ಕ್ಯಾಂಟೀನ್ ಸ್ಥಾಪಿಸಬೇಕೆಂಬ ಕೋರಿಕೆಗೆ ಬಸ್ ಸಮಸ್ಯೆ ನೀಗಿಸಲು, ಅಗತ್ಯ ಅಧ್ಯಾಪಕರನ್ನು ನೇಮಿಸಲು ಕ್ರಮವಹಿಸಲಾಗುವುದು, ಪರೀಕ್ಷಾ ಸಂದರ್ಭದಲ್ಲಿ ವೈಯಕ್ತಿಕವಾಗಿ ಕ್ಯಾಂಟಿನ್ ಸೌಲಭ್ಯ ಕಲ್ಪಿಸುವೆನೆಂದು ಭರವಸೆ ಇತ್ತರು.

ಹುಣಸೂರಿನ ಮಹಾರಾಣಿ ಕಾಲೇಜ್
ಸಭೆಯಲ್ಲಿ ಅನೇಕ ಪೋಷಕರು ಹುಣಸೂರು ಮಹಿಳಾ ಕಾಲೇಜು ಮೈಸೂರಿನ ಮಹಾರಾಣಿ ಕಾಲೇಜಿಗೇನೂ ಕಡಿಮೆ ಇಲ್ಲ, ಇಲ್ಲಿ ಎಲ್ಲವೂ ಅಚ್ಚುಕಟ್ಟಾಗಿದೆ. ಹೀಗಾಗಿ ಹುಣಸೂರಿನ ಮಹಾರಾಣಿ ಕಾಲೇಜ್ ಎಂಬ ಬಣ್ಣನೆಗೆ ಸಭೆಯಲ್ಲಿ ಹರ್ಷೋದ್ಗಾರ ಕೇಳಿಬಂತು. ಮಾತನಾಡಿದ ಹಲವಾರು ಪೋಷಕರು ಶಾಸಕರು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.