ಹಳೆಯ ವೈಷಮ್ಯದ ಹಿನ್ನೆಲೆ: ಹತ್ತರಗಿಯಲ್ಲಿ ಯುವಕನ ಬರ್ಬರ ಹತ್ಯೆ
Team Udayavani, Sep 4, 2022, 10:42 PM IST
ಸಂಕೇಶ್ವರ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ಆಯುಧಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಬಳಿ ರವಿವಾರ ರಾತ್ರಿ 9.30 ಸುಮಾರಿಗೆ ನಡೆದಿದೆ.
ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಬಳಿಯ ಟೋಲ್ ನಾಕಾ ಹತ್ತರಗಿಯ ಯುವಕನನ್ನು ಹರಿತವಾದ ಆಯುಧಗಳಿಂದ ಕೊಚ್ವಿ ಹತ್ಯೆ ಮಾಡಿದ ಹಂತಕರು ಅಲ್ಲಿಂದ ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.
ಘಟನೆಯ ವಿಷಯ ಅರಿತ ಯಮಕನಮರಡಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಹತ್ಯೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.