ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಅಮೃತ್ಪೌಲ್ ಮತ್ತೆ ಸಿಐಡಿ ವಶಕ್ಕೆ
Team Udayavani, Sep 5, 2022, 10:45 PM IST
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ರೂವಾರಿ ಹಾಗೂ ಐಎಸ್ಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ರನ್ನು ಸಿಐಡಿ ಅಧಿಕಾರಿಗಳು ಮತ್ತೆ ಎಂಟು ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪೌಲ್ರನ್ನು ಬಂಧಿಸಿದ್ದ ಅಧಿಕಾರಿಗಳು ಈಗ ರಾಮಮೂರ್ತಿನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಲಂಚ ನೀಡಿ ಪಿಎಸ್ಐ ಹುದ್ದೆ ಪಡೆದುಕೊಂಡಿದ್ದ ಆರೋಪಿ ಹರೀಶ್ ಮತ್ತು ಮನೋಜ್ ವಿರುದ್ಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಆರೋಪಿಗಳು ಅಮೃತ್ಪೌಲ್ ಬಗ್ಗೆ ಕೆಲವೊಂದು ಮಾಹಿತಿ ನೀಡಿದ್ದು, ಅದರ ಬಗ್ಗೆ ತನಿಖೆಗಾಗಿ ಕಸ್ಟಡಿಗೆ ನೀಡಬೇಕು ಎಂದು ಪೊಲೀಸರು ಕೋರಿದ್ದು, ಇದನ್ನು ನ್ಯಾಯಾಲಯ ಮಾನ್ಯ ಮಾಡಿತು.