ಸರಕು ಸಾಗಾಟ ದರ ಕಡಿತ ಹಿಂಪಡೆಯದಿದ್ದರೆ ಸಾಗಾಟ ಬಂದ್‌: ಅಸೋಸಿಯೇಶನ್‌ ಎಚ್ಚರಿಕೆ


Team Udayavani, Sep 6, 2022, 10:42 AM IST

ಸರಕು ಸಾಗಾಟ ದರ ಕಡಿತ ಹಿಂಪಡೆಯದಿದ್ದರೆ ಸಾಗಾಟ ಬಂದ್‌: ಅಸೋಸಿಯೇಶನ್‌ ಎಚ್ಚರಿಕೆ

ಪಣಂಬೂರು : ಟ್ರಕ್‌ ಮಾಲಕರ ಗಮನಕ್ಕೆ ತಾರದೆ ಏಕಪಕ್ಷೀಯವಾಗಿ ಬಂದರಿನಿಂದ ಸಾಗಾಟವಾಗುವ ಸರಕುಗಳ ದರವನ್ನು ಕಡಿತ ಗೊಳಿಸಿದ್ದು, ಮಾಲಕರಿಗೆ ಭಾರೀ ಹೊಡೆತ ನೀಡಿದೆ. ಹತ್ತು ದಿನಗಳ ಒಳಗಾಗಿ ಸಾಗಾಟಕ್ಕೆ ಸೂಕ್ತ ದರ ನೀಡುವ ಸಲುವಾಗಿ ತತ್‌ಕ್ಷಣ ಜಂಟಿ ಮಾತುಕತೆಗೆ ಜಿಲ್ಲಾಡಳಿತ ಮುಂದಾಗದಿದ್ದರೆ ದ.ಕ. ಟ್ರಕ್‌ ಮಾಲಕರ ಅಸೋಸಿಯೇಶನ್‌ ಸಾಗಾಟ ಸ್ಥಗಿತಗೊಳಿಸಿ ಬಂದ್‌ ನಡೆಸಲು ಮುಂದಾಗಲಿದೆ ಎಂದು ಅಸೋಸಿಯೇಶನ್‌ ಸಲಹೆಗಾರ ಬಿ.ಎಸ್‌. ಚಂದ್ರು ಎಚ್ಚರಿಕೆ ನೀಡಿದ್ದಾರೆ.

ಅಸೋಸಿಯೇಶನ್‌ ವತಿಯಿಂದ ಸೋಮವಾರ ಪಣಂಬೂರು ಬಂದರಿನಲ್ಲಿ ಜೆಎಸ್‌ಡಬ್ಲ್ಯು ಹಾಗೂ ಟ್ರಾನ್ಸ್ ಪೋರ್ಟ್ ಮತ್ತು ಏಜೆಂಟರ ಸಂಘಕ್ಕೆ ಮನವಿ ಅರ್ಪಿಸಲಾಯಿತು.

ಈಗಾಗಲೇ ಸರಕಾರ, ಜಿಲ್ಲಾಡಳಿತ, ನವಮಂಗಳೂರು ಬಂದರು ಟ್ರಾನ್ಸ್ ಪೋರ್ಟ್ ಮತ್ತು ಏಜಂಟರ ಗಮನಕ್ಕೆ ತಂದು ಒಮ್ಮತದ ದರ ನಿಗದಿಗೆ ಅಭಿಪ್ರಾಯಕ್ಕೆ ಬರಲಾಗಿತ್ತು. ಆದರೆ ಇತ್ತೀಚೆಗೆ ಏಕಪಕ್ಷೀಯವಾಗಿ ದರ ಕಡಿತ ನಿರ್ಧಾರ ಕೈಗೊಂಡು ಟ್ರಕ್‌ ಮಾಲಕರ ಹಿತವನ್ನು ಅವಗಣಿಸಲಾಗಿದೆ. ಕನಿಷ್ಠ ದರ ನಿಗದಿ ಅವೈಜ್ಞಾನಿಕವಾಗಿದ್ದು ಟ್ರಕ್‌ ಮಾಲಕರು ಈ ದರ ನಿಗದಿಯಿಂದಾಗಿ ಪ್ರತೀ ಸಾಗಾಟಕ್ಕೆ ಕನಿಷ್ಠ ಒಂಬತ್ತು ಸಾವಿರ ರೂ. ನಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ದ.ಕ. ಟ್ರಕ್‌ ಅಸೋಸಿಯೇಶನ್‌ ಅಧ್ಯಕ್ಷ ಸುನಿಲ್‌ ಡಿ’ಸೋಜಾ ಮಾತ ನಾಡಿ, ಭಾರೀ ಮಳೆ, ರಸ್ತೆ ಕುಸಿತ, ಸಾಗಾಟದ ಮಾರ್ಗ ಬದಲಾವಣೆ ಮತ್ತು ಡೀಸೆಲ್‌ ದರ ಏರಿಕೆ ಮತ್ತು ಬಿಡಿಭಾಗಗಳ ದರ ಹೆಚ್ಚಳ ಗಮನಿಸಿ ದರ ನಿಗದಿ ಪಡಿಸಬೇಕು. ಇದೀಗ ದರ ನಿಗದಿ ಮಾಡಿರುವುದು ಅವೈಜ್ಞಾನಿಕವಾ ಗಿದೆ ಎಂದರಲ್ಲದೇ ತತ್‌ಕ್ಷಣ ಈ ಬಗ್ಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಒತ್ತಾಯಿಸಿದರು. ನಮ್ಮ ಹೋರಾಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳ ಟ್ರಕ್‌ ಮಾಲಕರ ಸಂಘ, ಕರುನಾಡ ಸಾರಥಿಗಳ ಸೈನ್ಯ ಟ್ರೇಡ್‌ ಯೂನಿಯನ್‌ ಬೆಂಬಲ ಸೂಚಿಸಿದ್ದರಿಂದ ನಮ್ಮ ಹೋರಾಟಕ್ಕೆ ಬಲ ಬಂದಿದೆ ಎಂದರು.

ಟ್ರಾನ್ಸ್ ಪೋರ್ಟ್ ಸಂಘದ ಅಧ್ಯಕ್ಷ ರಾಜೇಶ್‌ ಹೊಸಬೆಟ್ಟು, ಜೆಎಸ್‌ಡಬ್ಲ್ಯು ಅಧಿಕಾರಿ ಅರವಿಂದ ಚತುರ್ವೇದಿ ಮನವಿ ಸ್ವೀಕರಿಸಿದರು. ಅಸೋಸಿಯೇಶನ್‌ ಪ್ರಧಾನ ಕಾರ್ಯದರ್ಶಿ ಸುಶಾಂತ್‌ ಶೆಟ್ಟಿ, ಕಾನೂನು ಸಲಹೆಗಾರ ಸತ್ಯ ಕುಮಾರ್‌, ಕರುನಾಡ ಸಾರಥಿಗಳ ಸೈನ್ಯ ಟ್ರೇಡ್‌ ಯೂನಿಯನ್‌ನ ಗೌರವಾಧ್ಯಕ್ಷ ಮೊಯಿದೀನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್‌, ಪ್ರಜೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ನವಲಗುಂದ : ಕುಸಿದು ಬಿದ್ದ ಸೇತುವೆ, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.