ಗದಗದಲ್ಲಿ ಮಳೆಯ ರೌದ್ರನರ್ತನ: ಸಾರ್ವಜನಿಕರು, ರೈತರು ಕಂಗಾಲು; ಮಹಿಳೆ ಬಲಿ
Team Udayavani, Sep 6, 2022, 11:50 AM IST
ಗದಗ: ಜಿಲ್ಲೆಯಲ್ಲಿ ಮಳೆರಾಯನ ರೌದ್ರನರ್ತನ ಮುಂದುವರೆದಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದೆ. ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಹೊಲದಿಂದ ಮನೆಗೆ ವಾಪಸಾಗುವ ವೇಳೆ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಮಂಗಳವಾರ ಬೆಳಿಗ್ಗೆ ಹಳ್ಳಿಕೇರಿ-ಕೊಪ್ಪಳ ರಾಷ್ಟ್ರೀಯ ಹೆದ್ದಾರಿಯ ಸೇತುವೆಯ ಹಳ್ಳದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಹಳ್ಳಿಕೇರಿಯ ನಾಗಮ್ಮ ಯಂಕಪ್ಪ ಕವಲೂರು (48) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸುರಿದ ಧಾರಾಕಾರ ಮಳೆಯಿಂದ ಸೋಮವಾರ ರಾತ್ರಿಯಿಡಿ ಸಂಕಷ್ಟ ಅನುಭವಿಸಿದರು. ಬೆಟಗೇರಿ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ, ಅಂಬೇಡ್ಕರ್ ನಗರ, ಭಜಂತ್ರಿ ಓಣಿ, ನರಸಾಪೂರ, ಖಾದಿ ನಗರ, ಗದಗನ ಎಸ್.ಎಂ. ಕೃಷ್ಣ ನಗರ, ಗಂಗಿಮಡಿ ಸೇರಿ ವಿವಿಧೆಡೆ ಮನೆಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು, ಬಟ್ಟೆಗಳು, ಪಿಠೋಪಕರಣಗಳು ಮಳೆಗೆ ಹಾನಿಯಾದವು. ರಾತ್ರಿಯಿಡಿ ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಹರಸಾಹಸ ಪಡಬೇಕಾಯಿತು.
ಗದಗ ತಾಲೂಕಿನ ಮದಗಾನೂರ ಗ್ರಾಮದ ಬಳಿಯಿರುವ ಸವಳಹಳ್ಳ ಹಾಗೂ ಸಿಹಿಹಳ್ಳ ಉಕ್ಕಿ ಹರಿದು ಊರೊಳಗೆ ಹೊಕ್ಕ ಪರಿಣಾಮ ರಾತ್ರಿಯೆಲ್ಲ ಗ್ರಾಮಸ್ಥರು ಪರದಾಡುವಂತಾಗಿದೆ. ರೈತರು ಒಕ್ಕಲು ಮಾಡಿಟ್ಟಿದ್ದ ಧಾನ್ಯಗಳ ರಾಶಿಗಳೆಲ್ಲ ಹಾಳಾಗಿದ್ದು, ದಿನಬಳಕೆ ವಸ್ತುಗಳು ನೀರಲ್ಲಿ ಹೋಮ ಮಾಡಿದಂತಾದವು. ಒಂದೆಡೆ ಜಮೀನಿನಲ್ಲಿ ಬೆಳೆದ ಈರುಳ್ಳಿ, ಶೇಂಗಾ, ಮೆಣಸಿನಕಾಯಿ ಹಳ್ಳದ ರಭಸಕ್ಕೆ ಕೊಚ್ಚಿ ಹೋದರೆ, ಮತ್ತೊಂದೆಡೆ ಜಾನುವಾರುಗಳಿಗಾಗಿ ಸಂಗ್ರಹಿಸಿಟ್ಟ ಹೊಟ್ಟು-ಮೇವಿನ ಬಣವೆಗಳೆಲ್ಲ ನೀರಲ್ಲಿ ತೇಲಾಡಿದವು.
ಮಳೆಗೆ ಕೊಚ್ಚಿ ಹೋದ ಅಟೋರಿಕ್ಷಾ: ಗದಗ ತಾಲೂಕಿನ ಹುಲಕೋಟಿ ಗ್ರಾಮದ ಹರ್ತಿ ರಸ್ತೆ ಮಾರ್ಗದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಯತ್ನಿಸಿದ ಅಟೋರಿಕ್ಷಾ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಶಾತ್ ಅಟೋದಲ್ಲಿದ್ದ ಚಾಲಕ ಕರಿಯಪ್ಪ ಕರಿಯಣ್ಣವರ, ಮಗ ಪ್ರವೀಣ, ಒಂದು ವರ್ಷದ ಮಗು ಸಾನ್ವಿ ಹಾಗೂ ಪ್ರಯಾಣಿಕ ಗುರಪ್ಪ ಕೊಂಡಿಕೊಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಚ್ಚಿಹೋದ ಅಟೋರಿಕ್ಷಾ ಸುಮಾರು 300 ಅಡಿ ದೂರದಲ್ಲಿ ಗಿಡಕಂಠಿಗಳ ಮಧ್ಯೆ ಸಿಲುಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ