ಹಾಡಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಿದ ಸಚಿವ


Team Udayavani, Sep 6, 2022, 1:26 PM IST

ಹಾಡಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಿದ ಸಚಿವ

ಮೈಸೂರು: ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾಡಿ ಮಕ್ಕಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಅವರೂ ನೃತ್ಯ ಪ್ರದರ್ಶಿಸಿ ಸಂಭ್ರಮಿಸಿದರು.

ಅರಮನೆ ಆವರಣದಲ್ಲಿ ಭಾನುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆಯುಷ್‌ ಹಾಗೂ ಅರಣ್ಯ ಇಲಾಖೆಯಿಂದ ಏರ್ಪಡಿಸಿದ್ದ ಮಾವುತರು, ಕಾವಾಡಿ ಮಕ್ಕಳ ತಾತ್ಕಾಲಿಕ ಶಾಲೆ ಹಾಗೂ ಪಂಚಕರ್ಮ ಚಿಕಿತ್ಸಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಡಿ ಮಕ್ಕಳು ಪ್ರದರ್ಶಿಸಿದ ಜಾನಪದ ನೃತ್ಯ ಕಾರ್ಯಕ್ರಮದಲ್ಲಿ ಸಚಿವರೂ ಮಕ್ಕಳೊಂದಿಗೆ ಹೆಜ್ಜೆ ಹಾಕುವ ಮೂಲಕ ಮಕ್ಕಳಲ್ಲಿ ಭರವಸೆ ಮೂಡಿಸಿದರು. ಬಳಿಕ ಮಾತನಾಡಿದ ಸಚಿವ ಎಸ್‌.ಟಿ.ಸೋಮಶೇಖರ್‌, ತಾತ್ಕಾ ಲಿಕ ಶಾಲೆ ಉದ್ಘಾಟನೆ ವೇಳೆ ಹಾಡಿ ಮಕ್ಕಳು 2 ನೃತ್ಯ ಮಾಡಿದರು.

ಮೈಸೂರಿನಲ್ಲಿ ನನ್ನೊಂದಿಗೆ ಡ್ಯಾನ್ಸ್‌ ಮಾಡಿದ್ದನ್ನು ಮಕ್ಕಳು ನೆನಪಿನಲ್ಲಿಟ್ಟು ಕೊಳ್ಳುತ್ತಾರೆ ಎಂದು ಹೇಳಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಗಳಿಗೆ ಉತ್ತಮ ಸ್ಪಂದನೆ ಬಂದಿದೆ. ನೆರೆಯ ಜಿಲ್ಲೆಗಳಿಂದಲೂ ಅವಕಾಶ ಕ್ಕಾಗಿ ಕಲಾವಿದರು ಮನವಿ ಸಲ್ಲಿಸಿ ದ್ದಾರೆ. ದಸರಾ ಪ್ರಾಯೋಜಕತ್ವದ ಬಗ್ಗೆ ಸೆ.6ರಂದು ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು. ಈವರೆಗೂ ದಸರಾ ಉದ್ಘಾಟಕರು ಅಂತಿಮಗೊಂಡಿಲ್ಲ ಎಂದರು.

ತಾತ್ಕಾಲಿಕ ಶಾಲೆ: ತಾತ್ಕಾಲಿಕ ಶಾಲೆಯಲ್ಲಿ ವಿವಿಧ ಆನೆ ಶಿಬಿರಗಳಿಂದ ಆಗಮಿಸಿರುವ 18 ಮಕ್ಕಳಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರೆಂದು ಶಾಲೆ ಆರಂಭಿಸಿದ್ದೇವೆ. ಹಿರಿಯ ಐವರು ಶಿಕ್ಷಕರನ್ನು ನಿಯೋಜಿಸಲಾಗಿದೆ. ಪುಸ್ತಕ, ಸಮವಸ್ತ್ರ, ಶೈಕ್ಷಣಿಕ ಪರಿಕರ ನೀಡಿದ್ದೇವೆ ಎಂದು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಾರಾಧ್ಯ ತಿಳಿಸಿದರು. ಪ್ರತಿ ವರ್ಷ ಟೆಂಡ್‌ ಶಾಲೆ ಆರಂಭಿಸಲಾಗುತ್ತಿತ್ತು. ಈ ವರ್ಷ ಅರಮನೆ ಮಂಡಲಿ ಸಹಕಾರದೊಂದಿಗೆ ಆನೆ ಶಿಬಿರದ ಪಕ್ಕದಲ್ಲಿರುವ ಕಟ್ಟಡದಲ್ಲಿ ಶಾಲೆ ಆರಂಭಿಸಿದ್ದೇವೆ. ಪಠ್ಯದ ಜತೆಗೆ ಆಟೋಟಗಳು, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಇಸ್ಕಾನ್‌ನಿಂದ ಮಧ್ಯಾಹ್ನದ ಬಿಸಿಯೂಟ ಕೊಡಲಾಗುವುದು ಎಂದು ತಿಳಿಸಿದರು.

ಪಂಚಕರ್ಮ ಚಿಕಿತ್ಸಾ ಗಟಕ ಉದ್ಘಾಟನೆ: ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಆರೋಗ್ಯದ ದೃಷ್ಟಿಯಿಂದ ಆಯುಷ್‌ ಇಲಾಖೆಯಿಂದ ತೆರೆದಿರುವ ತಾತ್ಕಾಲಿಕ ಪಂಚಕರ್ಮ ಚಿಕಿತ್ಸೆ ಹಾಗೂ ಹೋರ ರೋಗಿ ಚಿಕಿತ್ಸಾ ಘಟಕವನ್ನು ಸಚಿವ ಸೋಮಶೇಖರ್‌ ಉದ್ಘಾಟಿಸಿದರು. ಈ ವೇಳೆ ಚಿಕಿತ್ಸಾ ವಿಧಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಮಾವುತರು ಮತ್ತು ಕಾವಾಡಿಗಳಷ್ಟೇ ಅಲ್ಲದೆ, ಅವರ ಮಕ್ಕಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಜಿಪಂ ಸಿಇಒ ಪೂರ್ಣಿಮಾ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್‌, ಡಿಸಿಎಫ್ ವಿ.ಕರಿಕಾಳನ್‌, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್‌, ಬಿಜೆಪಿ ಮುಖಂಡ ಅನಿಲ್‌ಥಾಮಸ್‌, ಮೈಸೂರು ವಿವಿ ಸಿಂಡಿಕೇಟ್‌ ಸದಸ್ಯ ಡಾ.ವಸಂತಕುಮಾರ್‌, ಪ್ರಭಾಕರ್‌ ಸಿಂಧ್ಯಾ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

5-temple

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.