ಕೇರಳ: ಚರ್ಚ್ ನಲ್ಲಿ ಇನ್ನು ಮುಂದೆ ಬಟ್ಟೆಯಲ್ಲಿ ಕಟ್ಟಿ ಶವ ಹೂಳಲು ನಿರ್ಧಾರ
Team Udayavani, Sep 7, 2022, 7:35 AM IST
ಆಲಪ್ಪುಳ: ಕೇರಳದ ಆಲಪ್ಪುಳ ಜಿಲ್ಲೆಯ ಅರ್ತುಂಕಲ್ ಎಂಬಲ್ಲಿ ಇರುವ ಸೈಂಟ್ ಜಾರ್ಜ್ ಚರ್ಚ್ ಇನ್ನು ಮುಂದೆ ಶವಗಳನ್ನು ಹೂಳಲು ಮರದಿಂದ ಸಿದ್ಧಗೊಳಿಸಿದ ಶವಪೆಟ್ಟಿಗೆ ಬಳಕೆಗೆ ವಿದಾಯ ಹೇಳಲು ನಿರ್ಧರಿಸಿದೆ.
ಅದರ ಬದಲಾಗಿ ಹತ್ತಿಯಿಂದ ಸಿದ್ಧಗೊಳಿಸಿದ ಬಟ್ಟೆಯನ್ನು ಬಳಕೆ ಮಾಡಲಿದೆ. ಈ ತಿಂಗಳ 1ನೇ ತಾರೀಕಿನಿಂದಲೇ ಹೊಸ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.
ಸದ್ಯದ ಪದ್ಧತಿಯಲ್ಲಿ ಹೂಳಲಾಗಿರುವ ಶವಗಳು ಕೊಳೆತು, ಮಣ್ಣಿಗೆ ಸೇರ್ಪಡೆಯಾಗಲು ಹೆಚ್ಚಿನ ಸಮಯ ಬೇಕಾಗುತ್ತದೆ.
ಈ ನಿಟ್ಟಿನಲ್ಲಿ ಚರ್ಚ್ ಆಡಳಿತ ಮಂಡಳಿ ಮತ್ತು ಅದರ ವ್ಯಾಪ್ತಿಯ 949 ಕುಟುಂಬಗಳ ಜತೆಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸದ್ಯದ ವ್ಯವಸ್ಥೆಯಲ್ಲಿ ಶವ ಹೂಳಲೂ ಸ್ಥಳ ಸಿಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಚರ್ಚ್ನ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು