ಪಿ.ಎಂ-ಕಿಸಾನ್ ಯೋಜನೆಯಡಿ ಪರಿಹಾರ : ಇ-ಕೆವೈಸಿಗೆ ಇಂದೇ ಕೊನೆಯ ದಿನ
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತ
Team Udayavani, Sep 7, 2022, 9:20 AM IST
ಮಂಗಳೂರು/ಉಡುಪಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆ. 7ರಂದು ಕೊನೆಯ ದಿನವಾಗಿದೆ.
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್ನ ಫಾರ್ಮರ್ ಕೋರ್ನರ್ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯ ಬಿಜೆಪಿ ಸರಕಾರದಿಂದ ಜನತೆಗೆ ದ್ರೋಹ: ಪ್ರಿಯಾಂಕ್ ಖರ್ಗೆ