ರೋಚಕ ಘಟ್ಟದಲ್ಲಿ ಗುರು ಶಿಷ್ಯರ ಪಂದ್ಯ


Team Udayavani, Sep 7, 2022, 11:22 AM IST

ರೋಚಕ ಘಟ್ಟದಲ್ಲಿ ಗುರು ಶಿಷ್ಯರ ಪಂದ್ಯ

ನಟ ಶರಣ್‌ ಅಭಿನಯದ ಬಹುನಿರೀಕ್ಷಿತ “ಗುರು ಶಿಷ್ಯರು’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಚಿತ್ರ ಇದೇ ಸೆಪ್ಟೆಂಬರ್‌ 23 ರಂದು ತೆರೆಗೆ ಬರಲಿದ್ದು, ಚಿತ್ರದ ಟ್ರೇಲರ್‌ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟ್ರೆಲರ್‌ ಹಿಟ್‌ಲಿಸ್ಟ್‌ ಸೇರಿದ್ದು, ಶರಣ್‌ ಕೆರಿಯರ್‌ನಲ್ಲಿ ವಿಭಿನ್ನ ಸಿನಿಮಾವಾಗಿ ನಿಲ್ಲುವ ಸೂಚನೆ ನೀಡಿದೆ.

ಚಿತ್ರದಲ್ಲಿ ಶರಣ್‌ 80ರ ದಶಕದ ಪಿಟಿ ಮಾಸ್ಟರ್‌ ಪಾತ್ರದಲ್ಲಿ ನಟಿಸಿದ್ದು, ಶರಣ್‌ಗೆ ಶಿಷ್ಯರಾಗಿ 12 ಮಕ್ಕಳು ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಗ್ರಾಮೀಣ ಆಟವಾದ ಖೋ ಖೋ ಹಿನ್ನೆಲೆ ಚಿತ್ರದಲ್ಲಿ ಹೈಲೆಟ್‌ ಆಗಿದ್ದು, ಇಂದಿನ ಪೀಳಿಗೆಗೆ ಖೋ ಖೋ ನೆನಪಿಸುವ ಒಂದು ಪ್ರಯತ್ನ ಎಂದು ಹೇಳಬಹುದು. 80-90ರ ದಶಕದ ಮಕ್ಕಳಿಗೆ ಚಿರಪರಿಚಿತವಾದ ಖೋ ಖೋ, ಇಂದಿನ ಕಾಲದ ಮಕ್ಕಳು ಆ ಆಟದ ಹೆಸರನ್ನು ಕೇಳಿರಲಿಕ್ಕಿಲ್ಲ. ಅಂಥಹ ಅಪ್ಪಟ ಗ್ರಾಮೀಣ ಕ್ರೀಡೆಯನ್ನು “ಗುರು ಶಿಷ್ಯರು’ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ.

ಶರಣ್‌ ಅಂದಮೆಲೆ ಕಾಮಿಡಿಗೆ ಕೊರತೆಯಿಲ್ಲ . ಅಂತೆಯೇ ಟ್ರೇಲರ್‌ನಲ್ಲಿ ಕಾಣುವಂತೆ ಶರಣ್‌ ಕಾಮಿಡಿ ಪ್ರೇಕ್ಷಕರನ್ನು ರಂಜಿಸಲಿದ್ದು, ಕಾಮಿಡಿ ಜೊತೆ ಜೊತೆಗೆ ಒಂದು ಲವ್‌ ಟ್ರ್ಯಾಕ್‌ ಕೂಡ ಚಿತ್ರದಲ್ಲಿದೆ ಎಂಬುದನ್ನು ಟ್ರೇಲರ್‌ನಲ್ಲಿ ಹೇಳಲಾಗಿದೆ. ಕೇವಲ ಪಿಟಿ  ಮಾಸ್ಟರ್‌ ಆಗಿ ಬಂದ ವ್ಯಕ್ತಿ ಹಳ್ಳಿ ಜನರ ಪಾಲಿಗೆ ರಕ್ಷಕನಾಗುತ್ತಾನೋ ಅಥವಾ ಶಿಕ್ಷಕನಾಗುತ್ತಾನೋ ಎನ್ನುವ ಕುತೂಹಲದ ಘಟ್ಟದೊಂದಿಗೆ ಟ್ರೇಲರ್‌ ಕೊನೆಗೊಳ್ಳುತ್ತದೆ.

ಚಿತ್ರದಲ್ಲಿ ನಿಶ್ವಿ‌ಕಾ ನಾಯ್ಡು ಹಾಲು ಮಾರುವ ಹುಡುಗಿಯಾಗಿ ಸೂಜಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಒಟ್ಟು 12 ಮಕ್ಕಳು ಕಾಣಿಸಿಕೊಂಡಿದ್ದು, ಇದರಲ್ಲಿ ಆರು ಮಂದಿ ಸೆಲೆಬ್ರೆಟಿಗಳ ಮಕ್ಕಳು ನಟಿಸಿದ್ದಾರೆ.

“ಲಡ್ಡು ಸಿನಿಮಾ ಹೌಸ್‌’ ಬ್ಯಾನರ್‌ ಅಡಿಯಲ್ಲಿ ಶರಣ್‌ ಕೃಷ್ಣಾ ನಿರ್ಮಾಣ, ತರುಣ್‌ ಸುಧೀರ್‌ ಸಹ ನಿರ್ಮಾಣವಿರುವ ಚಿತ್ರಕ್ಕೆ ಜಗದೀಶ್‌ ಕೆ ಹಂಪಿ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಶರಣ್‌ಗೆ ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ಅಭಿನಯಿಸಿದ್ದು, ದತ್ತಣ, ಸುರೇಶ್‌ ಹೇಬ್ಳಿಕರ್‌ ಮುಂತಾದವರು ಪ್ರಮುಖ   ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಬೇಡಿಕೆ ಹಾಗೂ ಬಿಝಿ ಸಂಭಾಷಣೆಕಾರ ಮಾಸ್ತಿ ಅವರ ಸಂಭಾಷಣೆ ಚಿತ್ರಕ್ಕಿದ್ದು, ಟ್ರೇಲರ್‌ನಲ್ಲಿರುವ ಸಂಭಾಷಣೆ ಗಮನ ಸೆಳೆಯುತ್ತಿದೆ.

ಬಿ.ಅಜನೀಶ್‌ ಲೋಕ್‌ನಾಥ್‌ ಸಂಗೀತ, ಆರೂರು ಸುಧಾಕರ್‌ ಶೆಟ್ಟಿ ಛಾಯಾಗ್ರಹಣವಿದೆ.

ಅದ್ಧೂರಿ ಟ್ರೇಲರ್‌ ರಿಲೀಸ್‌ :  ಇತ್ತೀಚೆಗೆ ಚಿತ್ರದ ಟ್ರೇಲರ್‌ ರಿಲೀಸ್‌ ಇವೆಂಟ್‌ ಅದ್ಧೂರಿಯಾಗಿ ನಡೆಯಿತು. ಹಿರಿಯ ನಟ ದ್ವಾರಕೀಶ್‌, ಉಮೇಶ್‌, ನಟರಾದ “ದುನಿಯಾ’ ವಿಜಯ್‌, ಪ್ರಜ್ವಲ್‌ ದೇವರಾಜ್‌ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ವೇಳೆ ಚಿತ್ರದಲ್ಲಿ ನಟಿಸಿದ 12 ಮಕ್ಕಳು ಹಾಗೂ ಅವರ ಪಾಲಕರು ಕೂಡಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.