ಬೆಳಗಾವಿ ಏರ್ ಪೋರ್ಟ್ ನಲ್ಲಿ ಕತ್ತಿ ಪಾರ್ಥಿವ ಶರೀರ ಆಗಮನಕ್ಕೆ ಕಾಯುತ್ತಿರುವ ಅಭಿಮಾನಿಗಳು
Team Udayavani, Sep 7, 2022, 11:47 AM IST
ಬೆಳಗಾವಿ: ಆಹಾರ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದು, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಾರ್ಥಿವ ಶರೀರ ಆಗಮನಕ್ಕೆ ಬುಧವಾರ ಬೆಳಗ್ಗೆಯಿಂದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕಾಯುತ್ತ ಕುಳಿತಿದ್ದಾರೆ.
ಪಾರ್ಥಿವ ಶರೀರವನ್ನು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ವಿಶ್ವರಾಜ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಳಗಾವಿಯಿಂದ ಮೆರವಣಿಗೆ ಮೂಲಕ ಬೆಲ್ಲದ ಬಾಗೇವಾಡಿವರೆಗೆ ಪಾರ್ಥಿವ ಶರೀರ ತೆರಳಲಿದೆ. ತೆರೆದ ವಾಹನವನ್ನು ಹೂಗಳಿಂದ ಅಲಂಕಾರ ಮಾಡಲಾಗಿದೆ. ಮಲ್ಲಿಗೆ ಹಾಗೂ ಚೆಂಡು ಹೂವಿನಿಂದ ಅಲಂಕೃತಗೊಳಿಸಲಾಗಿದ್ದು, ಅದರೊಳಗೆ ಬೈಲಹೊಂಗಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೈನಸ್ 4 ಡಿಗ್ರಿಯ ಡೀಪ್ ಫ್ರಿಜರ್ ವ್ಯವಸ್ಥೆ ಮಾಡಲಾಗಿದೆ.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಾರಂಜಿ ಮಠದ ಶ್ರೀ ಗುರುಸಿದ್ದ ಸ್ವಾಮೀಜಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪಾರ್ಥಿವ ಶರೀರ ಒಯ್ಯುವ ವಾಹನವನ್ನು ಪರಿಶೀಲಿಸಿದರು. ವಾಹನದಮೇಲೆ ಇರುವ ಉಮೇಶ ಕತ್ತಿ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಇದನ್ನೂ ಓದಿ : ಅರ್ಚಕನ ಉರಗ ಪ್ರೇಮ : 1500 ಕ್ಕೂ ಹೆಚ್ಚು ಹಾವುಗಳನ್ನು ರಕ್ಷಣೆ ಮಾಡಿದ ಗುರುರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ