ಕನ್ನಡ ಚೆಕ್ ಅಮಾನ್ಯ: ಬ್ಯಾಂಕಿಗೆ 85 ಸಾವಿರ ರೂ. ದಂಡ
Team Udayavani, Sep 7, 2022, 4:03 PM IST
ಧಾರವಾಡ: ಕನ್ನಡದಲ್ಲಿ ಬರೆದ ಕಾಸೋಲೆ(ಚೆಕ್)ಯನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂ.ದಂಡ ಪರಿಹಾರ ಪಾವತಿಸುವಂತೆ ಆದೇಶಿಸಿದೆ.
ಧಾರವಾಡದ ಇಂಗ್ಲೀಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದು ಸಲ್ಲಿಸಿದ್ದ ಕಾಸೋಲೆ(ಚೆಕ್)ಯನ್ನು ಹಳಿಯಾಳದ ಎಸ್ಬಿಐ ಶಾಖೆ ತಿರಸ್ಕರಿಸಿತ್ತು.ಇದರ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ಆಯೋಗವು ದೂರುದಾರರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ.ಕ್ಕಿಂತ ಹೆಚ್ಚು ಹಣ ಇದ್ದರೂ ಕೂಡ ಕೇವಲ 6 ಸಾವಿರ ರೂ. ಮೌಲ್ಯದ ಚೆಕ್ಕನ್ನು ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನು, ಸೇವಾ ನ್ಯೂನ್ಯತೆ ಎಂದು ಪರಿಗಣಿಸಿ ಹಳಿಯಾಳ ಎಸ್ಬಿಐ ಬ್ಯಾಂಕ್ ಶಾಖೆಯು ದೂರುದಾರರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ.ಗಳನ್ನು ಪಾವತಿಸುವಂತೆ ಆದೇಶಿಸಿದೆ. ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಈ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ:ಉಮೇಶ್ ಕತ್ತಿ ಅಂತಿಮ ಯಾತ್ರೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ: ಸಿಎಂ
ಬ್ಯಾಂಕುಗಳಲ್ಲಿ ತ್ರಿಭಾಷಾ ಸೂತ್ರದ ಬಳಕೆ ನಿಯಮಾನುಸಾರ ಸ್ಥಳೀಯ ಭಾಷಾ ಬಳಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ನೀಡಿರುವ ತೀರ್ಪು ವಿಶೇಷ ಹಾಗೂ ಮಹತ್ವದ್ದೆನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ