ಬಹುಪಯೋಗಿ ನಿಂಬೆ  ಹಣ್ಣಿನಿಂದ ಏನೆಲ್ಲಾ ಉಪಯೋಗ ಇದೆ ಗೊತ್ತಾ…?

ನಿಂಬೆ ರಸ ಉಪ್ಪು ಬೆರಸಿ ಬಾಯಿ ಮುಕ್ಕಳಿಸಿದರೆ ಹುಣ್ಣುಗಳು ನಿವಾರಣೆಯಾಗುವುದು.

Team Udayavani, Sep 8, 2022, 6:14 PM IST

ಬಹುಪಯೋಗಿ ನಿಂಬೆ  ಹಣ್ಣಿನಿಂದ ಏನೆಲ್ಲಾ ಉಪಯೋಗ ಇದೆ ಗೊತ್ತಾ…?

ನಿಂಬೆ ಹಣ್ಣು ಯಾರಿಗೇ ತಾನೇ ಇಷ್ಟವಿಲ್ಲ ಹೇಳಿ! ಈ ನಿಂಬೆ ಹಣ್ಣು ಮಿಟಮಿನ್‌ ಸಿ ಯ ಸಮೃದ್ಧ ಆಗರ. ಅಡುಗೆಯಲ್ಲಿ ಆರೋಗ್ಯಕ್ಕೆ , ಸೌಂದರ್ಯಕ್ಕೆ  ಹೀಗೆ ಹತ್ತು ಹಲವು ವಿಧಗಳಲ್ಲಿ  ನಿಂಬೆ ಅತ್ಯುಪಯುಕ್ತ.

ನಿಂಬೆ ಸಾರು:

ಒಂದು ಚಮಚ ಅಕ್ಕಿ, ಒಂದು ಚಮಚ ಗೋಧಿ , ಒಂದು ಗಂಟೆ ನೆನೆಸಿಡಿ. ಬಳಿಕ ಸ್ವಲ್ಪ ತೆಂಗಿನ ತುರಿ, 4 ಹಸಿ ಮೆಣಸು, ಬೆಲ್ಲ, ಉಪ್ಪು, 2 ಚಮಚ ಜೀರಿಗೆ, ಸ್ವಲ್ಪ ಕೊತ್ತಂಬರಿ ಸೊಪ್ಪು ಹೆಚ್ಚಿ ಬೆರಸಿ ಎಲ್ಲವನ್ನು ನೆನೆಸಿದ ಅಕ್ಕಿ ಮತ್ತು ಗೋಧಿಯೊಂದಿಗೆ ನಯವಾಗಿ ಅರೆಯಬೇಕು. ಬಳಿಕ ನೀರು ಸೇರಿಸಿ ಕುದಿಸಿ ಕೊನೆಯಲ್ಲಿ ಒಂದು ನಿಂಬೆರಸ ಬೆರಸಬೇಕು.ತುಪ್ಪದಲ್ಲಿ ಸಾಸಿವೆ , ಕರಿಬೇವು ,ಇಂಗು , ಮೆಣಸಿನ  ಒಗ್ಗರಣೆ ನೀಡಬೇಕು.

ನಿಂಬೆ -ಪುದೀನಾ ಸಾರು

ಎರಡು ಮುಷ್ಠಿಯಷ್ಟು ಪುದೀನಾ ಎಲೆಗಳನ್ನು ತೊಳೆದು ಸಣ್ಣಗೆ ಹೆಚ್ಚಿ ಕಾವಲಿಯಲ್ಲಿ ತುಪ್ಪ 2 ಚಮಚ , ಸ್ವಲ್ಪ ಕೊತ್ತಂಬರಿ,1ಚಮಚ ಜೀರಿಗೆ, 3 ಹಸಿ ಮೆಣಸು , 3 ಚಮಚ ತೆಂಗಿನ ತುರಿ ,ಒಂದು ಚಮಚ ಮೆಂತ್ಯೆ ಹುರಿದು ಬಳಿಕ ಪುದೀನಾ ಎಲೆ ಸೇರಿಸಿ ಬಾಡಿಸಿ ಎಲ್ಲವನ್ನು ರುಬ್ಬಿ ನೀರು ಸೇರಿಸಿ ತೆಳ್ಳಗೆ ಮಾಡಿ ಉಪ್ಪು ಬೆರಸಿ ಕುದಿಸಿ. ಸಾಸಿವೆ, ಕರಿಬೇವು, ಒಣಮೆಣಸು, ಇಂಗಿನ ಒಗ್ಗರಣೆ ಹಾಕಿ ನಂತರ ಅರ್ಧ ನಿಂಬೆ ರಸ ಬೆರಸಿ ಸ್ವಲ್ಪ ಬೆಲ್ಲ ಸೇರಿಸಿರಿ.

ನಿಂಬೆ -ಖರ್ಜೂರ ಚಟ್ನಿ

ಒಂದು ಕಪ್‌ ಖರ್ಜೂರ,ಒಂದು ನಿಂಬೆ ರಸ ಹಿಂಡಿ 5-6 ಮೆಣಸಿನಕಾಯಿ ರುಚಿಗೆ ಉಪ್ಪು ಬೆರಸಿ ಚೆನ್ನಾಗಿ ರುಬ್ಬಿರಿ.  ಈ ಚಟ್ನಿ ರುಚಿಕರವೂ,ಪೌಷ್ಟಿಕವೂ ಹೌದು.

ಆರೋಗ್ಯ ರಕ್ಷಕ ನಿಂಬೆ ಹಣ್ಣು

1. ಬಾಯಿ ಹುಣ್ಣಿಗೆ ನೀರಿನಲ್ಲಿ ನಿಂಬೆ ರಸ ಉಪ್ಪು ಬೆರಸಿ ಬಾಯಿ ಮುಕ್ಕಳಿಸಿದರೆ ಹುಣ್ಣುಗಳು ನಿವಾರಣೆಯಾಗುವುದು.

2. ಕೈಕಾಲಿನ ಚರ್ಮ ಒಡೆದು ಬಿರುಕು ಬಿಟ್ಟಿದರೆ ನಿಂಬೆಯ ಹೋಳಿನಿಂದ ತಿಕ್ಕಿ ಸುಮಾರು 25 ರಿಂದ 30 ನಿಮಿಷದ ಬಳಿಕ ತೊಳೆದು ಹಾಲಿನ ಕೆನೆ ಲೇಪಿಸಿ ತಿಕ್ಕಬೇಕು.

3. ನಿಂಬೆ ರಸ ,ಈರುಳ್ಳಿ ರಸ ಮತ್ತು ಜೇನು ಬೆರಸಿ ಕುಡಿದರೆ ವಾಂತಿ ಹತೋಟಿಗೆ ಬರುತ್ತದೆ.

4. ನೆಗಡಿ, ಕೆಮ್ಮು, ಕಫ‌ ಇರುವಾಗ ಬಿಸಿ ನೀರಿಗೆ ನಿಂಬೆ ಹಿಂಡಿ, ಕರಿ ಮೆಣಸು ಬೆರಸಿ ಕುಡಿಯುವುದರಿಂದ ನೆಗಡಿ, ಕೆಮ್ಮು, ಕಫ‌ ನಿವಾರಣೆಯಾಗುವುದು.

5.ನಿಂಬೆ ರಸ,ಉಪ್ಪು ಬೆರಸಿ ಹಲ್ಲು ವಸಡುಗಳನ್ನು ತಿಕ್ಕುವುದರಿಂದ ಹಲ್ಲು ಶುಭ್ರವಾಗುವುದು.

6.ತುರಿಕೆ ,ಕಜ್ಜಿ ಇರುವ ಭಾಗದಲ್ಲಿ ನಿಂಬೆರಸ,ಅರಸಿನ ಪುಡಿ,ಉಪ್ಪು ಬೆರಸಿ ತಿಕ್ಕಿದರೆ ಪರಿಹಾರ.

7. ಬೊಜ್ಜು  ಕರಗಿಸಲು ಒಂದು ಕಪ್‌ ಬಿಸಿ ನೀರಿಗೆ ಅರ್ಧ ನಿಂಬೆರಸ ಬೆರಸಿ ನಿತ್ಯ ಖಾಲಿ ಹೊಟ್ಟೆಗೆ ಕುಡಿದು ಒಂದು ಗಂಟೆ ಬಳಿಕ ಹೊಟ್ಟೆ ಖಾಲಿ ಬಿಡಬೇಕು.

ಸೌಂದರ್ಯವರ್ಧಕ  ನಿಂಬೆ ಹಣ್ಣು

1. ಪುದೀನಾ ರಸದೊಂದಿಗೆ ನಿಂಬೆರಸ ಬೆರಸಿ ತಿಕ್ಕಿದರೆ ಮೊಡವೆ ನಿವಾರಕ.

2.ನಿಂಬೆರಸವನ್ನು ಕೂದಲಿನ ಬುಡಕ್ಕೆ ಹಚ್ಚಿ ತಿಕ್ಕುವುದರಿಂದ ತಲೆ ಹೊಟ್ಟು ನಿವಾರಣೆಯಾಗುವುದು.

3.ನಿಂಬೆ ರಸ ,ಜೇನು ಬೆರಸಿ ಪಾನಕದಂತೆ ಕುಡಿದರೆ ಚರ್ಮ ,ಕೂದಲುಗಳಿಗೆ ಉತ್ತಮ.

4.ನಿಂಬೆಯ ಸಿಪ್ಪೆಯನ್ನು ಸಣ್ಣಗೆ ಹಚ್ಚಿ ಒಣಗಿಸಿ ಪುಡಿ ಮಾಡಿ ಕಡಲೆ ಹಿಟ್ಟಿನೊಂದಿಗೆ ಬೆರಸಿಡಬೇಕು ಇದನ್ನು ನಿತ್ಯವು ಹಾಲಿನ ಕೆನೊಂದಿಗೆ ಮುಖಕ್ಕೆ ಲೇಪಿಸಿ ಸ್ನಾನ ಮಾಡಿದರೆ ಮುಖದ ಕಾಂತಿ ಹೆಚ್ಚುತ್ತದೆ.

5.ಊಟದ ಬಳಿಕ ನಿಂಬೆರಸಯುಕ್ತ ಬಿಸಿ ನೀರಲ್ಲಿ ಕೈ ತೊಳೆದರೆ ಕೈಯ ಜಿಡ್ಡು ನಿವಾರಣೆಯಾಗುತ್ತದೆ.

ಟಾಪ್ ನ್ಯೂಸ್

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.