ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ: ಕಾಂಗ್ರೆಸ್ ನಿಂದ 4 ಗಂಟೆಗಳ ಕಾಲ ಗುಜರಾತ್ ಬಂದ್
ದಿನಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ
Team Udayavani, Sep 10, 2022, 10:37 AM IST
ಅಹಮದಾಬಾದ್: ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಶನಿವಾರ (ಸೆ.10) ಬೆಳಗ್ಗೆಯಿಂದ 4ಗಂಟೆಗಳ ಕಾಲ ಸಾಂಕೇತವಾಗಿ ಗುಜರಾತ್ ಬಂದ್ ಗೆ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದನ್ನೂ ಓದಿ:ಜೈಲಿಂದ ಬಂದವರನ್ನು ಹೀರೋ ರೀತಿ ಸ್ವಾಗತಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ; ಮಮತಾಗೆ ಸುವೇಂದು
ವ್ಯಾಪಾರಸ್ಥರು, ಅಂಗಡಿ ಮಾಲೀಕರು, ಬಟ್ಟೆ ಮಾರುಕಟ್ಟೆ ಕಾರ್ಮಿಕರು, ಸಂಘ-ಸಂಸ್ಥೆಗಳು, ಸಣ್ಣ ವ್ಯಾಪಾರಿಗಳು ಬಂದ್ ಗೆ ಬೆಂಬಲ ನೀಡಬೇಕೆಂದು ಶುಕ್ರವಾರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮನವಿ ಮಾಡಿಕೊಂಡಿದ್ದರು.
ಗುಜರಾತ್ ನಲ್ಲಿ ಭಾರತೀಯ ಜನತಾ ಪಕ್ಷ ಕಳೆದ 27ವರ್ಷಗಳಿಂದ ಆಡಳಿತ ನಡೆಸುತ್ತಿದ್ದು, ಹಣದುಬ್ಬರ, ನಿರುದ್ಯೋಗ, ಭ್ರಷ್ಟಾಚಾರ ಮಿತಿ ಮೀರಿದೆ. ಹಾಲು, ಮೊಸಲು, ಪನ್ನೀರ್ ನಂತಹ ದಿನಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ ಎಂದು ಠಾಕೂರ್ ಆರೋಪಿಸಿದ್ದಾರೆ.
ಬಂದ್ ವೇಳೆ ಯವುದೇ ಕಾರಣಕ್ಕೂ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಬಾರದು ಎಂದು ಠಾಕೂರ್ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದರು. ಬಂದ್ ವೇಳೆ ತುರ್ತು ಸೇವೆಗಳಿಗೆ ಬಂದ್ ಅನ್ವಯಿಸುವುದಿಲ್ಲ ಎಂದು ಠಾಕೂರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
Amit Shah ನಕಲಿ ವೀಡಿಯೋ ಕೇಸ್: ಕಾಂಗ್ರೆಸ್ ಮುಖಂಡನ ಸೆರೆ
MUST WATCH
ಹೊಸ ಸೇರ್ಪಡೆ
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ