ನಾಡ ಪ್ರಭು ಕೆಂಪೇಗೌಡರು ಪ್ರಪಂಚಕ್ಕೆ ಮಾದರಿ: ಡಾ.ಜಿ.ಪರಮೇಶ್ವರ್


Team Udayavani, Sep 10, 2022, 7:27 PM IST

1–ddsd

ಕೊರಟಗೆರೆ: ನಾಡ ಪ್ರಭು ಕೆಂಪೇಗೌಡರು ಬೆಂಗಳೂರು ನಗರವನ್ನು ಅಚ್ಚುಕಟ್ಟಾಗಿ ಮತ್ತು ಮುಂದಾಲೋಚನೆಯಾಗಿ ನಿರ್ಮಾಣ ಮಾಡಿ ರಾಜ್ಯದ ಆರ್ಥಿಕತೆಗೆ ಶಕ್ತಿ ನೀಡಿ ದೇಶಕ್ಕೆ ಮತ್ತು ಪ್ರಪಂಚಕ್ಕೆ ಮಾದರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಹೇಳಿದರು.

ತಾಲೂಕಿನ ಕೋಳಾಲದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಾಗೂ ಡಾ. ಜಿ. ಪರಮೇಶ್ವರ್ ಅವರ ಹುಟ್ಟು ಹಬ್ಬ ಆಚರಣೆ ಕಾರ‍್ಯಕ್ರಮದಲ್ಲಿ ಮಾತನಾಡಿ ಕೆಂಪೇಗೌಡರು ಒಂದು ಜನಾಂಗಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರ ಶ್ರಮ ಮತ್ತು ಕರ್ತವ್ಯ ನಿಷ್ಟೆಯಿಂದ ಎಲ್ಲಾ ವರ್ಗದ ಜನರು ನೆಮ್ಮದಿಯಾಗಿ ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಳ್ಳುವಂತಾಗಿದೆ. ಇಂದಿನ ತಂತ್ರಜ್ಞಾನವನ್ನು ಕೆಂಪೇಗೌಡರು ಅಂದೇ ಆಲೋಚಿಸಿ ಜನರ ವಾಣಿಜ್ಯ ವ್ಯವಹಾರಗಳಿಗೆ ವಿವಿಧ ಪೇಟೆಗಳನ್ನು ಕೃಷಿಕರಿಗೆ ಮಾರುಕಟ್ಟೆಗಳನ್ನು ಜನವಸತಿಕೇಂದ್ರಗಳನ್ನು ನಿರ್ಮಿಸಿದರು. ಇದರೊಂದಿಗೆ ಹಲವು ಕೆರೆಕಟ್ಟೆಗಳು, ನಾಲೆಗಳನ್ನು ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನಿರ್ಮಾಣ ಮಾಡಿ, ಸದೃಢ ಬೆಂಗಳೂರನ್ನು ರಚಿಸಿದರು. ಅಂತಹ ಮಹಾನ್ ವ್ಯಕ್ತಿಯ ಶ್ರಮದಿಂದ ಬೆಂಗಳೂರಿನಲ್ಲಿ ಪ್ರಪಂಚದ ಎಲ್ಲಾ ಐಟಿ, ಬಿಟಿ ಕಂಪನಿಗಳು ವಿವಿಧ ವಾಣಿಜ್ಯ ಕಂಪನಿಗಳು ಬಂದು ರಾಜ್ಯಕ್ಕೆ ಆರ್ಥಿಕ ಶಕ್ತಿಯನ್ನು ನೀಡುತ್ತಿವೆ. ಬೆಂಗಳೂರಿನಲ್ಲಿ ಇಂದು ಸುಮಾರು 1.30 ಕೋಟಿ ಎಲ್ಲ ವರ್ಗ, ಭಾಷೆಯ ಜನರು ವಾಸಿಸುತ್ತಿದ್ದಾರೆ ಎಂದರು.

ದಿನಕ್ಕೆ 25 ಲಕ್ಷ ಜನ ಬಂದು ಹೋಗುತ್ತಿದ್ದಾರೆ. ಅವರಿಗೆಲ್ಲಾ ಬೆಂಗಳೂರು ಆಶ್ರಯ ನೀಡಿದ್ದು, ಇದಕ್ಕೆ ಮುಖ್ಯ ಕಾರಣ ಕೆಂಪೇಗೌಡ ಎಂದರು.
ಭಾರತವು ವಿಶ್ವದ ಆರ್ಥಿಕತೆಯಲ್ಲಿ ಬಲಿಷ್ಟತೆ ಹೊಂದಿ 4ನೇ ಸ್ಥಾನದತ್ತ ಇದೆ. ಭಾರತೀಯ ಸೇನೆ ವಿಶ್ವದ ಬಲಿಷ್ಟ ಸೇನೆಗಳಲ್ಲಿ ಒಂದಾಗಿದೆ. ಸ್ವಾತಂತ್ರ ನಂತರ ಕಡು ಬಡತನದಲ್ಲಿದ್ದು, ಮೂಲಭೂತ ಸೌಕರ್ಯಗಳಿಲ್ಲದೇ ಆರ್ಥಿಕತೆ, ಸಾಕ್ಷರತೆ, ನೀರಾವರಿ ಯೋಜನೆಗಳಿಲ್ಲದೇ ಸೊರಗುತ್ತಿದ್ದ ದೇಶವನ್ನು ಕಾಂಗ್ರೆಸ್ ಪಕ್ಷವು ಅಂತಹ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದು ಬಹಳಷ್ಟು ಶ್ರಮವಹಿಸಿ ದೇಶವನ್ನು ಬಲಿಷ್ಟಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ. ದೇಶದ ಎಲ್ಲಾ ಧರ್ಮ, ಜಾತಿ ಜನರು ಒಟ್ಟು ಇರಬೇಕಾದರೆ ಕಾಂಗ್ರೆಸ್ ಪಕ್ಷದ ಜ್ಯಾತ್ಯಾತೀತ ತತ್ವ ಮುಖ್ಯ ಕಾರಣವಾಗಿದೆ. ಅಂತಹ ಪಕ್ಷವನ್ನು ಹಲವರು ಟೀಕಿಸುತ್ತಿದ್ದಾರೆ. ಆದರೆ ಜನರಿಗೆ ಕಾಂಗ್ರೆಸ್ ಪಕ್ಷದ ತ್ಯಾಗ, ಬಲಿದಾನ ತಿಳಿದಿದೆ ಎಂದರು.

ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಕೆಂಪೇಗೌಡರ ಜಯಂತಿ ಆಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಕೆಂಪೇಗೌಡರು ನಾಡು ಕಂಡಂತಹ ಅಪರೂಪದ ಶ್ರಮ ಜೀವಿಯಾಗಿದ್ದಾರೆ. ಅವರ ಅಂದಿನ ಶ್ರಮದಿಂದ ರಾಜ್ಯದ ರಾಜಧಾನಿ ಬೃಹತ್ ಬೆಂಗಳೂರು ನಗರವಾಗಿ ಬೆಳೆದಿದೆ. ಜನರ ಸೇವೆಗಾಗಿ ಹಗಲಿರುಳು ಶ್ರಮ ವಹಿಸಿದ ಮಹಾನ್ ವ್ಯಕ್ತಿ ಕೆಂಪೇಗೌಡರಾಗಿದ್ದಾರೆ. ಅವರ ನೆನಪು ಸದಾ ಎಲ್ಲರಲ್ಲೂ ಇರಬೇಕಿದೆ ಎಂದರು. ಇಂದು ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದು, ಡಾ. ಪರಮೇಶ್ವರ್ ಅವರು ಕ್ಷೇತ್ರದಲ್ಲಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದು, ರಾಜ್ಯ ಕಂಡಂತಹ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ವಾಲೆ ಚಂದ್ರಯ್ಯ, ಎ.ಡಿ.ಬಲರಾಮಯ್ಯ, ಆರ್.ಎಸ್.ರಾಜಣ್ಣ, ಸುರೇಶ್, ವೆಂಕಟೇಶಮೂರ್ತಿ, ಕೆಂಪಣ್ಣ, ಪಂಚಾಕ್ಷರಯ್ಯ, ಬಿಎಂಸಿ ಚಂದ್ರು, ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜಯಮ್ಮ, ಶೈಲಜಾ, ಕವಿತಾ, ಗ್ರಾ.ಪಂ. ಸದಸ್ಯರಾದ ಅಶ್ವತ್ಥ್, ಸುರೇಶ್, ದೇವರಾಜು, ಪಂಚಾಕ್ಷರಯ್ಯ, ಸತ್ಯಣ್ಣ, ಕೃಷ್ಣಪ್ಪ ಇತರರು ಇದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.