ಪಿಎಂ ಜನ್ಮದಿನದಂದೇ ಭಾರತಕ್ಕೆ ಬರಲಿವೆ “ಚೀತಾ’ಗಳು! ದೇಶದಲ್ಲಿ 1947ರಲ್ಲೇ ಅಳಿದಿದ್ದ ತಳಿ

ಕುನೋ ಉದ್ಯಾನವನಕ್ಕೆ ಪ್ರಧಾನಿಯಿಂದಲೇ ಚೀತಾಗಳ ಬಿಡುಗಡೆ

Team Udayavani, Sep 11, 2022, 7:05 AM IST

ಪಿಎಂ ಜನ್ಮದಿನದಂದೇ ಭಾರತಕ್ಕೆ ಬರಲಿವೆ “ಚೀತಾ’ಗಳು! ದೇಶದಲ್ಲಿ 1947ರಲ್ಲೇ ಅಳಿದಿದ್ದ ತಳಿ

ಭಾರತಕ್ಕೆ ಚೀತಾಗಳನ್ನು ಕಳುಹಿಸುವ ಮುನ್ನ ಅವುಗಳಿಗೆ ನಮೀಬಿಯಾದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು.

ಭೋಪಾಲ್‌/ಜೊಹಾನ್ಸ್‌ಬರ್ಗ್‌: ದೇಶದಲ್ಲಿ ಮತ್ತೆ ಚೀತಾ ಸಂತತಿಯನ್ನು ಬೆಳೆಸುವ ಮಹ ದು ದ್ದೇಶ ದೊಂದಿಗೆ ನಮೀಬಿಯಾದಿಂದ ಚೀತಾಗಳನ್ನು ತರುವ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಇವುಗಳು ಭಾರತ ಪ್ರವೇಶಿಸಲಿವೆ.

ಸೆ.17ರಂದು ಮೋದಿ ಅವರೇ 8 ಚೀತಾಗಳನ್ನು ಮಧ್ಯ ಪ್ರದೇಶದ ಶಿಯೋಪುರ್‌ ಜಿಲ್ಲೆಯಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಿದ್ದಾರೆ.

ಸೆ. 17ರೊಳಗಾಗಿ 5 ಗಂಡು ಮತ್ತು 3 ಹೆಣ್ಣು ಚೀತಾಗಳು ನಮೀಬಿಯಾದಿಂದ ಕೆಎನ್‌ಪಿಗೆ ಬಂದು ತಲುಪುವ ನಿರೀಕ್ಷೆಯಿದೆ. ಎಲ್ಲವೂ ಅಂದು ಕೊಂಡಂತೆ ನಡೆದರೆ ತಮ್ಮ ಹುಟ್ಟುಹಬ್ಬದಂದೇ ಮೋದಿ ಅವರು “ಚೀತಾ ಮರುಪರಿಚಯ ಯೋಜನೆ’ಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳನ್ನು ಭಾರತಕ್ಕೆ ತರಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಸಿದ್ಧತೆಗಳ ಪರಿಶೀಲನೆ: ಗುರುವಾರವಷ್ಟೇ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಅನಂತರ ಮಾತನಾಡಿದ ಅವರು, ನಮೀಬಿಯಾದಿಂದ ಚೀತಾ ಗಳನ್ನು ಕೆಎನ್‌ಪಿಗೆ ಸಾಗಿಸುವಂಥದ್ದು ರಾಷ್ಟ್ರೀಯ ವಾಗಿ ಮಹತ್ವ ಪಡೆದಿರುವ ಕಾರ್ಯಕ್ರಮ ಎಂದಿದ್ದಾರೆ. ಮೊದಲಿಗೆ ಚೀತಾಗಳನ್ನು ನಮೀಬಿಯಾದಿಂದ ರಾಜಸ್ಥಾನದ ಜೈಪುರಕ್ಕೆ ತರಲಾಗುತ್ತದೆ. ಅಲ್ಲಿಂದ ಅವುಗಳನ್ನು ಕುನೋದ ಪಾಲ್ಪುರಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಭಾರತಕ್ಕೆ ತರಲಾಗುವ ಚೀತಾಗಳನ್ನು ಹೇಗೆ ನಿಭಾಯಿಸಬೇಕು ಎಂದು ನಮೀಬಿಯಾದಲ್ಲೇ ಅರಣ್ಯ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. 2009ರಲ್ಲಿ ಮ.ಪ್ರ.ದ ಪನ್ನಾ ರಕ್ಷಿತಾ  ರಣ್ಯದಲ್ಲಿ ಹುಲಿ ಗಳನ್ನು ಮರುಪರಿಚಯಿಸುವ ಕಾರ್ಯಕ್ರಮ ಯಶಸ್ವಿಯಾಗಿತ್ತು.

ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಅಸುನೀಗಿತ್ತು. 1952ರಲ್ಲಿ ಚೀತಾ ಸಂತತಿಯನ್ನು “ನಾಮಾವಶೇಷಗೊಂಡ ಪ್ರಾಣಿ ಸಂತತಿ’ ಎಂದು ಘೋಷಿಸಲಾಯಿತು. ಅನಂತರ 2009ರಲ್ಲಿ “ಆಫ್ರಿಕಾ ಚೀತಾವನ್ನು ಭಾರತಕ್ಕೆ ತರುವ ಯೋಜನೆ’ಯನ್ನು ಸರಕಾರ ಹಾಕಿಕೊಂಡಿತು. ಕಳೆದ ವರ್ಷದ ನವೆಂಬರ್‌ನಲ್ಲೇ ಚೀತಾಗಳು ಬರಬೇಕಿತ್ತಾದರೂ ಕೊರೊನಾ ಹಿನ್ನೆಲೆಯಲ್ಲಿ ಯೋಜನೆ ನನೆಗುದಿಗೆ ಬಿದ್ದಿತ್ತು.

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.