ವೀರ ಯೋಧರಿಗೇ ಮರೀಚಿಕೆಯಾದ ಜಮೀನು ! ಕಚೇರಿಗಳಿಗೆ ಎಡತಾಕಿ ಸುಸ್ತಾದ ಮಾಜಿ ಯೋಧರ ಕುಟುಂಬಸ್ಥರು

ರಾಜ್ಯಮಟ್ಟದ ಹೋರಾಟಕ್ಕೆ ನಡೆದಿದೆ ಸಿದ್ಧತೆ

Team Udayavani, Sep 11, 2022, 7:00 AM IST

ವೀರ ಯೋಧರಿಗೇ ಮರೀಚಿಕೆಯಾದ ಜಮೀನು ! ಕಚೇರಿಗಳಿಗೆ ಎಡತಾಕಿ ಸುಸ್ತಾದ ಮಾಜಿ ಯೋಧರ ಕುಟುಂಬಸ್ಥರು

ಸಾಂದರ್ಭಿಕ ಚಿತ್ರ.

ರಾಯಚೂರು/ಬೆಂಗಳೂರು: ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಡುವ ಸೈನಿಕರು ಈಗ ತಮ್ಮ ಹಕ್ಕಿಗಾಗಿ ಹೋರಾಡುವಂಥ ಸ್ಥಿತಿ ನಿರ್ಮಾಣವಾಗಿದೆ!

ಇದಕ್ಕೆ ಕಾರಣ, ಸರಕಾರಗಳ ನಿರ್ಲಕ್ಷ್ಯ. ದೇಶಕ್ಕಾಗಿ ಸೇವೆ ಸಲ್ಲಿಸಿ ವೀರಮರಣ ಹೊಂದಿದ ಹಾಗೂ ನಿವೃತ್ತಿಯಾದ ವರಿಗೆ ಸರಕಾರವು ಜೀವನೋಪಾಯಕ್ಕಾಗಿ ನೀಡಬೇಕಾದ ಭೂಮಿ ಇನ್ನೂ ಶೇ.99 ರಷ್ಟು ಸೈನಿಕರ ಕೈ ಸೇರಿಲ್ಲ!
ಅಚ್ಚರಿಯಾದರೂ ಇದು ಸತ್ಯ. ಸುಮಾರು 2 ದಶಕ ಗಳಿಂದಲೂ ಸರಕಾರಗಳು ಹುಸಿ ಭರವಸೆ ನೀಡುತ್ತಲೇ ಇವೆ. ಸೇವೆಯಲ್ಲಿದ್ದಾಗ ಹುತಾತ್ಮರಾದರೆ, ನಿವೃತ್ತರಾದರೆ ಸರಕಾರದಿಂದ 4.18 ಎಕರೆ ಕೃಷಿ ಭೂಮಿ ನೀಡಬೇಕು ಎಂದು ಸರಕಾರ ಅಧಿಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ಸುಮಾರು 1.30 ಲಕ್ಷ ಮಾಜಿ ಸೈನಿಕರಿದ್ದಾರೆ. ಹೆಚ್ಚು ಕಡಿಮೆ 4 ಲಕ್ಷ ಸೈನಿಕ ಕುಟುಂಬಗಳಿವೆ. ಆದರೆ ಅದರಲ್ಲಿ ಬಹುತೇಕರಿಗೆ ಇನ್ನೂ ಭೂಮಿ ಸಿಕ್ಕಿಲ್ಲ. ಕಚೇರಿಗಳಿಗೆ ಅಲೆದಾಡಿ ಸುಸ್ತಾಗಿದ್ದು, ಆ ಭೂಮಿ ಮೇಲಿನ ಆಸೆಯನ್ನೇ ಕೈ ಬಿಟ್ಟಿದ್ದೇವೆ ಎನ್ನುತ್ತಾರೆ ಮಾಜಿ ಸೈನಿಕರು.

ಸಕಲೇಶಪುರ, ಮೈಸೂರು ಜಿಲ್ಲೆ ಸೇರಿ ರಾಜ್ಯಾದ್ಯಂತ ಮಾಜಿ ಸೈನಿಕರಿಗಾಗಿಯೇ 14,000ಕ್ಕೂ ಅಧಿಕ ಎಕರೆ ಸರಕಾರಿ ಭೂಮಿ ಕಾದಿರಿಸಲಾಗಿದೆ. ರಾಜ್ಯದ ವಿವಿ ಧೆಡೆ ಸ್ಥಳ ಲಭ್ಯವಿದ್ದರೂ ಪ್ರಭಾವಿಗಳು ಅದನ್ನು ಒತ್ತುವರಿ ಮಾಡಿಕೊಂಡಿ ರುವ ಆರೋಪಗಳಿವೆ. ಈ ಮುನ್ನ ಗೋಮಾಳ, ಗೈರಾಣಿ ಭೂಮಿಯನ್ನೂ ಸೈನಿಕರಿಗೆ ನೀಡಲಾಗುತ್ತಿತ್ತು. ಈಗ ಅದೂ ಸಾಧ್ಯವಿಲ್ಲ ಎನ್ನುತ್ತಿದ್ದು, ಗೈರಾಣಿ ಜಮೀನು ಲಭ್ಯವಿದ್ದರೂ ಕೊಡುತ್ತಿಲ್ಲ. ಇನ್ನೂ ಕೆಲವೆಡೆ ಅ ಧಿಕಾರಿಗಳು ಭೂಮಿ ಮಂಜೂರು ಮಾಡಿಸುವುದಾಗಿ ಮಾಜಿ ಸೈನಿಕ ರಿಂದಲೂ ಲಂಚ ಕೇಳಿದ ಉದಾಹರಣೆಗಳಿವೆ.

ದುರಂತವೆಂದರೆ ಸೇವೆಯಲ್ಲಿ ಮೃತಪಟ್ಟ ಸೈನಿಕರ ಪತ್ನಿಯರನ್ನು ಸರಕಾರ “ವೀರನಾರಿ’ಯರೆಂದು ಗೌರವಿಸುತ್ತಿದ್ದು, ಅಂಥವರಿಗೂ ಜಮೀನು ಮಂಜೂರು ಮಾಡಿಲ್ಲ. ರಾಯಚೂರು ಜಿಲ್ಲೆಯಲ್ಲಿ ಈವರೆಗೆ ಒಬ್ಬ ಮಾಜಿ ಸೈನಿಕರಿಗೂ ಜಮೀನು ಸಿಕ್ಕಿಲ್ಲ. ಇಬ್ಬರು ಸೈನಿಕರು ಸತತ ಪ್ರಯತ್ನದಿಂದ ಎಲ್ಲ ಪ್ರಕ್ರಿಯೆ ಮುಗಿಸಿದ್ದರೂ ವಿನಾಕಾರಣ ವಿಳಂಬ ಮಾಡಲಾಗುತ್ತಿದೆ. ಮಾಜಿ ಸೈನಿಕರ ಸಂಘದ ಕಚೇರಿ, ವಾರ್‌ ಮೆಮೊರಿ ಯಲ್‌ ಸೇರಿದಂತೆ ವಿವಿಧ ಉದ್ದೇಶಗಳಿಗೆ 3 ಎಕ್ರೆ ಜಮೀನು ಮಂಜೂರು ಮಾಡಿದ್ದ ಜಿಲ್ಲಾಡಳಿತ, ಈಗ ಅದನ್ನೂ ಕೊಡಲು ಬರುವುದಿಲ್ಲ ಎಂದು ರದ್ದುಪಡಿಸಿದೆ.

ಎರಡು ದಶಕಗಳಿಂದ
ಸಿಕ್ಕಿಲ್ಲ ಹಿಡಿಜಾಗ
ರಾಜ್ಯದಲ್ಲಿ 1.30 ಲಕ್ಷ ಮಾಜಿ ಸೈನಿಕರಿದ್ದಾರೆ. 2003ರ ಬಳಿಕ ತಮ್ಮ ಹಕ್ಕಿನ ಸರಕಾರಿ ಜಮೀನಿಗಾಗಿ ರಾಜ್ಯಾದ್ಯಂತ ಸುಮಾರು 5,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಮಂಜೂರಾತಿ ಮಾತ್ರ ಸಿಕ್ಕಿಲ್ಲ. ಸರಕಾರಿ ಜಮೀನು ಮಂಜೂರಾಗಿ 20 ವರ್ಷಗಳಿಂದ ಬೇಸಾಯದಲ್ಲಿ ತೊಡಗಿಸಿಕೊಂಡ ಸುಮಾರು 1,000ಕ್ಕೂ ಅಧಿಕ ಮಾಜಿ ಸೈನಿಕರಿಗೆ ಹಕ್ಕು ಪತ್ರ ಇನ್ನೂ ಲಭ್ಯವಾಗಿಲ್ಲ. ಕೆಲವಡೆ ಸೈನಿಕರಿಗಾಗಿ ಮೀಸಲಿಟ್ಟಿರುವ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಆರೋಪಗಳಿವೆ.

ದೇಶದ ಹೊರಗಿನ ಸೈನಿಕರೊಂದಿಗೆ ನಾವು ಹೋರಾಟ ನಡೆಸಿ ಗೆಲುವು ಸಾಧಿಸಬಹುದು. ನಮ್ಮ ಹಕ್ಕಿಗಾಗಿ ನಮ್ಮವರ ವಿರುದ್ಧ ಹೋರಾಟ ನಡೆಸಲು ಸಾಧ್ಯವೇ? ಸರಕಾರ ಮಾಜಿ ಸೈನಿಕರಿಗಾಗಿ ಮೀಸಲಿಟ್ಟಿರುವ ಹಕ್ಕಿನ ಜಮೀನು ಪಡೆಯಲು ಅಲೆದಾಟ ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೆ.12ರಂದು ವಿಧಾನಸಭೆ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ.
-ಡಾ| ಶಿವಣ್ಣ ಎನ್‌.ಕೆ., ರಾಜ್ಯಾಧ್ಯಕ್ಷ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ

-ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.