99 ನೇ ವಯಸ್ಸಿನಲ್ಲಿ ದ್ವಾರಕಾ ಮಠದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿರ್ಯಾಣ
Team Udayavani, Sep 11, 2022, 6:06 PM IST
ನವದೆಹಲಿ: ಗುಜರಾತ್ ನ ದ್ವಾರಕಾ ಮಠದ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಮಧ್ಯಪ್ರದೇಶದ ನರಸಿಂಗ್ಪುರದಲ್ಲಿ 99 ನೇ ವಯಸ್ಸಿನಲ್ಲಿ ಬ್ರಹ್ಮೀಭೂತರಾಗಿದ್ದಾರೆ. ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ನರಸಿಂಗ್ಪುರ ಜಿಲ್ಲೆಯ ಶ್ರೀಧಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ವರದಿಗಳ ಪ್ರಕಾರ, ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಹೃದಯಾಘಾತದಿಂದ ಅವರು ಭಾನುವಾರ, ಸೆ 11) ಆಶ್ರಮದಲ್ಲಿ 3:50 ಕ್ಕೆ ಕೊನೆಯುಸಿರೆಳೆದಿದ್ದಾರೆ. ಸ್ವರೂಪಾನಂದ ಸರಸ್ವತಿ ಅವರ ಅಂತಿಮ ವಿಧಿಗಳು ಸೋಮವಾರ (ಸೆ 12) ನಡೆಯಲಿದೆ.
”ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ!” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
”ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಜೀ ಮಹಾರಾಜ್ ಅವರ ಅಗಲುವಿಕೆಯ ಸುದ್ದಿ ಕೇಳಿ, ಮನಸ್ಸು ತೀವ್ರ ದುಃಖವಾಯಿತು. ಸ್ವಾಮೀಜಿ ತಮ್ಮ ಇಡೀ ಜೀವನವನ್ನು ಧರ್ಮ, ಆಧ್ಯಾತ್ಮಿಕತೆ ಮತ್ತು ದಾನಕ್ಕಾಗಿ ಮುಡಿಪಾಗಿಟ್ಟರು.2021 ರಲ್ಲಿ ಪ್ರಯಾಗರಾಜ್ನಲ್ಲಿ ಗಂಗಾ ಸ್ನಾನ ಮಾಡಿದ ನಂತರ, ಅವರ ಆಶೀರ್ವಾದವನ್ನು ಪಡೆದಿದ್ದೆ” ಎಂದು ಪ್ರಿಯಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.
1982 ರಲ್ಲಿ, ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಗುಜರಾತ್ನ ದ್ವಾರಕಾದಲ್ಲಿರುವ ದ್ವಾರಕಾ ಶಾರದಾ ಪೀಠ ಮತ್ತು ಬದರಿನಾಥದ ಜ್ಯೋತಿರ್ ಮಠದ ಪೀಠಾಧಿಪತಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ